ಕೆ.ಎಚ್. ಮುನಿಯಪ್ಪ ಅವರಿಗೆ ಡಿಸಿಎಂ ಸ್ಥಾನ ನೀಡಲು ಮಾದಾರ ಮಹಾಸಭಾ ಒತ್ತಾಯ

ದೊಡ್ಡಬಳ್ಳಾಪುರ: ರಾಜ್ಯ ಸಚಿವ ಸಂಪುಟ ಪುನರ್‌ರಚನೆಯ ಸಂದರ್ಭದಲ್ಲಿ ಮಾದಿಗ ಸಮುದಾಯದ ಹಿರಿಯ ನಾಯಕ ಹಾಗೂ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನ ನೀಡಬೇಕು ಎಂದು ಮಾದಾರ ಮಹಾಸಭಾ ಮುಖಂಡರು ಆಗ್ರಹಿಸಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾದಾರ ಮಹಾಸಭಾ ಮುಖಂಡ ರಾಮಕೃಷ್ಣ, ರಾಜ್ಯದಲ್ಲಿ ಮಾದಿಗ ಸಮುದಾಯದ ಜನಸಂಖ್ಯೆ 60 ಲಕ್ಷಕ್ಕೂ ಅಧಿಕವಾಗಿದ್ದು, ಇಂತಹ ದೊಡ್ಡ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ನ್ಯಾಯಯುತ ಹಾಗೂ ಬಲಿಷ್ಠ ರಾಜಕೀಯ ಪ್ರಾತಿನಿಧ್ಯ ದೊರೆಯಬೇಕು ಎಂದು ಹೇಳಿದರು.

ಕೆ.ಎಚ್. ಮುನಿಯಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಜೊತೆಗೆ, ಆರ್.ಬಿ. ತಿಮ್ಮಾಪುರ ಅವರಿಗೆ ಸಚಿವ ಸ್ಥಾನ ಹಾಗೂ ಹೆಚ್. ಆಂಜನೇಯ ಅವರಿಗೆ ವಿಧಾನ ಪರಿಷತ್ ಸದಸ್ಯತ್ವ ನೀಡುವ ಮೂಲಕ ದಲಿತ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಅವಕಾಶ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದರು.

ಮಾದಾರ ಮಹಾಸಭಾ ತಾಲೂಕು ಅಧ್ಯಕ್ಷ ತಳಗವಾರ ನಾಗರಾಜ್ ಮಾತನಾಡಿ, ಕೆ.ಎಚ್. ಮುನಿಯಪ್ಪ ಅವರು ಕಾಂಗ್ರೆಸ್ ಪಕ್ಷದ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದು, ಅವರಿಗೆ ಡಿಸಿಎಂ ಸ್ಥಾನ ನೀಡುವ ಮೂಲಕ ಸಮುದಾಯಕ್ಕೆ ರಾಜಕೀಯ ಶಕ್ತಿ ತುಂಬಬೇಕು ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆಲ್ಲುವಲ್ಲಿ ಮುನಿಯಪ್ಪ ಅವರ ಕೊಡುಗೆ ಮಹತ್ವದ್ದಾಗಿದೆ. ಮಾದಿಗ ಸಮುದಾಯದ ಮತಗಳನ್ನು ಕಾಂಗ್ರೆಸ್ ಪರವಾಗಿ ಕ್ರೋಢೀಕರಿಸಲು ಅವರು ಶ್ರಮಿಸಿದ್ದು, ಅದಕ್ಕೆ ತಕ್ಕ ಗೌರವವಾಗಿ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

ಇಲ್ಲಿಯವರೆಗೆ ಮಾದಿಗ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ದೊರೆತಿಲ್ಲ. ಕನಿಷ್ಠ ಈ ಬಾರಿ ಡಿಸಿಎಂ ಸ್ಥಾನ ಹಾಗೂ ಪ್ರಭಾವಿ ಖಾತೆಯನ್ನು ನೀಡಬೇಕು. ಸಮುದಾಯದ ಅಭಿವೃದ್ಧಿಗೆ ಶ್ರಮಿಸಲು ಅವಕಾಶ ಕಲ್ಪಿಸಬೇಕು. ಎಡಗೈ ಸಮುದಾಯವನ್ನು ನಿರ್ಲಕ್ಷಿಸಿದರೆ ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಹಿನ್ನಡೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಅಪಕಾರನಹಳ್ಳಿ ಹನುಮಯ್ಯ, ವೆಂಕಟೇಶ್, ಗಂಗರಾಜು, ವೆಂಕಟೇಶ್, ಕೆ.ವಿ. ಮುನಿಯಪ್ಪ, ಹನುಮಂತಯ್ಯ, ಪುರುಷೋತ್ತಮ್, ಲಕ್ಕಪ್ಪ, ಆರ್.ವಿ. ಮಹೇಶ್, ಆರ್.ವಿ. ಶಿವಕುಮಾರ್, ಆರ್.ವಿ. ಮನು, ಶ್ರೀರಾಮ್, ಮಂಜುನಾಥ್, ಮುನಿರಾಜು, ನಾಗರಾಜು, ಚಿಕ್ಕನರಸಪ್ಪ, ಮುನಿರಾಜು, ಟಿ.ಡಿ. ಮುನಿಯಪ್ಪ ಸೇರಿದಂತೆ ಮಾದಾರ ಮಹಾಸಭಾದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

10 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

11 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 days ago