Categories: ರಾಜ್ಯ

ಕೆ.ಎಸ್.ಡಿ.ಎಲ್ ನ 21‌ಹೊಸ ಉತ್ಪನ್ನಗಳ ಬಿಡುಗಡೆ

ಕೆ.ಎಸ್.ಡಿ.ಎಲ್ ಇಂದು ಸಾಬೂನು, ಡಿಟರ್ಜೆಂಟ್ಸ್, ಸೌಂದರ್ಯವರ್ಧಕಗಳು, ಅಗರಬತ್ತಿ, ಧೂಪ ಸೇರಿದಂತೆ ಒಟ್ಟು 50 ಬಗೆಯ ಉತ್ಪನ್ನಗಳನ್ನು ತಯಾರಿಸುತ್ತಿದೆ. ಇದಕ್ಕೆ ಇಂದು ಹೊಸದಾಗಿ 21 ಉತ್ಪನ್ನಗಳು ಸೇರ್ಪಡೆಯಾಗುತ್ತಿದ್ದು, ಅವುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಿಡುಗಡೆ ಮಾಡಿದರು.

ಇಂದು ಬಿಡುಗಡೆಗೊಂಡ ಹೊಸ ಉತ್ಪನ್ನಗಳು ಇಂತಿವೆ:

ಪ್ರೀಮಿಯಂ ಶ್ರೇಣಿಯ 10 ಬಗೆಯ ಸಾಬೂನು, 3 ತರಹದ ಶವರ್ ಜೆಲ್, 6 ಬಗೆಯ ಸೋಪ್ ಕಿಟ್ ಮತ್ತು ಒಂದು ಬಗೆಯ ಹ್ಯಾಂಡ್ ವಾಶ್.

ಇವುಗಳ ಮಾರಾಟದ ಮೂಲಕ ಸಂಸ್ಥೆಯು ಇನ್ನೂ 1,000 ಕೋಟಿ ರೂ. ಮೌಲ್ಯದ ಹೆಚ್ಚಿನ ವಹಿವಾಟನ್ನು ನಿರೀಕ್ಷಿಸುತ್ತಿದೆ.

ಇದಕ್ಕೆ ಪೂರಕವಾಗಿ ಸಂಸ್ಥೆಯು ಅಖಿಲ ಭಾರತ ಮಟ್ಟದ ಮಾರುಕಟ್ಟೆಯನ್ನು ಹೊಂದಲು ಮತ್ತು ವಿದೇಶಗಳಲ್ಲೂ ಸಂಸ್ಥೆಯ ಉತ್ಪನ್ನಗಳು ಸಿಗುವಂತೆ ಮಾಡಲು ರಚನಾತ್ಮಕ ಕ್ರಮಗಳನ್ನು ಸರಕಾರ ಕೈಗೊಂಡಿದೆ.

ಬಿಡುಗಡೆಯಾಗಿರುವ ಹೊಸ ತರಹದ ಪ್ರೀಮಿಯಂ ಸಾಬೂನುಗಳು:

Mysore Sandal Wave Termaric,

Wave Lime,

Wave Deo,

Milk Saffron,

Almond Soap,

Neem Soap,

Aloe Soap,

Jasmine Cream,

Shikakayi Soap

ಸ್ನಾನಕ್ಕೆ ಬಳಸುವ ಶವರ್-ಜೆಲ್ ಗಳು:

Mysore Sandal Shower Gel,

Gold Shower Gel

Millenium Shower Gel

ಇವೆಲ್ಲವೂ ಇಂದಿನ ಬಗೆಬಗೆಯ ಗ್ರಾಹಕರ ಅಭಿರುಚಿಗಳನ್ನು ಗಮನದಲ್ಲಿ ಇಟ್ಟುಕೊಂಡು ಹೊರತಂದಿರುವ ಉತ್ಪನ್ನಗಳೇ ಆಗಿವೆ.

ಕೆಎಸ್‌ಡಿಎಲ್ ಸಂಸ್ಥೆಯ ವಾರ್ಷಿಕ ವಹಿವಾಟು ಸದ್ಯಕ್ಕೆ 1,400 ಕೋಟಿ ರೂ.ಗಳ ಆಸುಪಾಸಿನಲ್ಲಿದೆ. ಇದನ್ನು ಮುಂದಿನ ಎರಡು ವರ್ಷಗಳಲ್ಲಿ 3,000 ಕೋಟಿ ರೂ.ಗಳ ಮಟ್ಟಕ್ಕೆ ಕೊಂಡೊಯ್ಯುವುದು ಗುರಿಯಾಗಿದೆ.

ಈ ನಿಟ್ಟಿನಲ್ಲಿ, ಸಂಸ್ಥೆಯು ಶಿವಮೊಗ್ಗದಲ್ಲಿ ಹೊಂದಿರುವ ಘಟಕದ ಆವರಣದಲ್ಲಿ ಆಕ್ವಾ ಮಿನರಲ್ ವಾಟರ್ ಘಟಕವನ್ನು ಆರಂಭಿಸುವ ತಯಾರಿ ನಡೆಯುತ್ತಿದೆ. ಜೊತೆಗೆ Transparent Bathing Soap & Perfume Composition ತಯಾರಿಕೆಗೆ ಸಿದ್ಧತೆಗಳು ನಡೆಯುತ್ತಿವೆ.

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

8 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

8 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

16 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago