Categories: ರಾಜ್ಯ

ಕೆ.ಎಸ್.ಡಿ.ಎಲ್ ನ 21‌ಹೊಸ ಉತ್ಪನ್ನಗಳ ಬಿಡುಗಡೆ

ಕೆ.ಎಸ್.ಡಿ.ಎಲ್ ಇಂದು ಸಾಬೂನು, ಡಿಟರ್ಜೆಂಟ್ಸ್, ಸೌಂದರ್ಯವರ್ಧಕಗಳು, ಅಗರಬತ್ತಿ, ಧೂಪ ಸೇರಿದಂತೆ ಒಟ್ಟು 50 ಬಗೆಯ ಉತ್ಪನ್ನಗಳನ್ನು ತಯಾರಿಸುತ್ತಿದೆ. ಇದಕ್ಕೆ ಇಂದು ಹೊಸದಾಗಿ 21 ಉತ್ಪನ್ನಗಳು ಸೇರ್ಪಡೆಯಾಗುತ್ತಿದ್ದು, ಅವುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಿಡುಗಡೆ ಮಾಡಿದರು.

ಇಂದು ಬಿಡುಗಡೆಗೊಂಡ ಹೊಸ ಉತ್ಪನ್ನಗಳು ಇಂತಿವೆ:

ಪ್ರೀಮಿಯಂ ಶ್ರೇಣಿಯ 10 ಬಗೆಯ ಸಾಬೂನು, 3 ತರಹದ ಶವರ್ ಜೆಲ್, 6 ಬಗೆಯ ಸೋಪ್ ಕಿಟ್ ಮತ್ತು ಒಂದು ಬಗೆಯ ಹ್ಯಾಂಡ್ ವಾಶ್.

ಇವುಗಳ ಮಾರಾಟದ ಮೂಲಕ ಸಂಸ್ಥೆಯು ಇನ್ನೂ 1,000 ಕೋಟಿ ರೂ. ಮೌಲ್ಯದ ಹೆಚ್ಚಿನ ವಹಿವಾಟನ್ನು ನಿರೀಕ್ಷಿಸುತ್ತಿದೆ.

ಇದಕ್ಕೆ ಪೂರಕವಾಗಿ ಸಂಸ್ಥೆಯು ಅಖಿಲ ಭಾರತ ಮಟ್ಟದ ಮಾರುಕಟ್ಟೆಯನ್ನು ಹೊಂದಲು ಮತ್ತು ವಿದೇಶಗಳಲ್ಲೂ ಸಂಸ್ಥೆಯ ಉತ್ಪನ್ನಗಳು ಸಿಗುವಂತೆ ಮಾಡಲು ರಚನಾತ್ಮಕ ಕ್ರಮಗಳನ್ನು ಸರಕಾರ ಕೈಗೊಂಡಿದೆ.

ಬಿಡುಗಡೆಯಾಗಿರುವ ಹೊಸ ತರಹದ ಪ್ರೀಮಿಯಂ ಸಾಬೂನುಗಳು:

Mysore Sandal Wave Termaric,

Wave Lime,

Wave Deo,

Milk Saffron,

Almond Soap,

Neem Soap,

Aloe Soap,

Jasmine Cream,

Shikakayi Soap

ಸ್ನಾನಕ್ಕೆ ಬಳಸುವ ಶವರ್-ಜೆಲ್ ಗಳು:

Mysore Sandal Shower Gel,

Gold Shower Gel

Millenium Shower Gel

ಇವೆಲ್ಲವೂ ಇಂದಿನ ಬಗೆಬಗೆಯ ಗ್ರಾಹಕರ ಅಭಿರುಚಿಗಳನ್ನು ಗಮನದಲ್ಲಿ ಇಟ್ಟುಕೊಂಡು ಹೊರತಂದಿರುವ ಉತ್ಪನ್ನಗಳೇ ಆಗಿವೆ.

ಕೆಎಸ್‌ಡಿಎಲ್ ಸಂಸ್ಥೆಯ ವಾರ್ಷಿಕ ವಹಿವಾಟು ಸದ್ಯಕ್ಕೆ 1,400 ಕೋಟಿ ರೂ.ಗಳ ಆಸುಪಾಸಿನಲ್ಲಿದೆ. ಇದನ್ನು ಮುಂದಿನ ಎರಡು ವರ್ಷಗಳಲ್ಲಿ 3,000 ಕೋಟಿ ರೂ.ಗಳ ಮಟ್ಟಕ್ಕೆ ಕೊಂಡೊಯ್ಯುವುದು ಗುರಿಯಾಗಿದೆ.

ಈ ನಿಟ್ಟಿನಲ್ಲಿ, ಸಂಸ್ಥೆಯು ಶಿವಮೊಗ್ಗದಲ್ಲಿ ಹೊಂದಿರುವ ಘಟಕದ ಆವರಣದಲ್ಲಿ ಆಕ್ವಾ ಮಿನರಲ್ ವಾಟರ್ ಘಟಕವನ್ನು ಆರಂಭಿಸುವ ತಯಾರಿ ನಡೆಯುತ್ತಿದೆ. ಜೊತೆಗೆ Transparent Bathing Soap & Perfume Composition ತಯಾರಿಕೆಗೆ ಸಿದ್ಧತೆಗಳು ನಡೆಯುತ್ತಿವೆ.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

4 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

6 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

7 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

8 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

9 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

14 hours ago