Categories: ರಾಜ್ಯ

ಕೆ.ಎಸ್.ಡಿ.ಎಲ್ ನ 21‌ಹೊಸ ಉತ್ಪನ್ನಗಳ ಬಿಡುಗಡೆ

ಕೆ.ಎಸ್.ಡಿ.ಎಲ್ ಇಂದು ಸಾಬೂನು, ಡಿಟರ್ಜೆಂಟ್ಸ್, ಸೌಂದರ್ಯವರ್ಧಕಗಳು, ಅಗರಬತ್ತಿ, ಧೂಪ ಸೇರಿದಂತೆ ಒಟ್ಟು 50 ಬಗೆಯ ಉತ್ಪನ್ನಗಳನ್ನು ತಯಾರಿಸುತ್ತಿದೆ. ಇದಕ್ಕೆ ಇಂದು ಹೊಸದಾಗಿ 21 ಉತ್ಪನ್ನಗಳು ಸೇರ್ಪಡೆಯಾಗುತ್ತಿದ್ದು, ಅವುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಿಡುಗಡೆ ಮಾಡಿದರು.

ಇಂದು ಬಿಡುಗಡೆಗೊಂಡ ಹೊಸ ಉತ್ಪನ್ನಗಳು ಇಂತಿವೆ:

ಪ್ರೀಮಿಯಂ ಶ್ರೇಣಿಯ 10 ಬಗೆಯ ಸಾಬೂನು, 3 ತರಹದ ಶವರ್ ಜೆಲ್, 6 ಬಗೆಯ ಸೋಪ್ ಕಿಟ್ ಮತ್ತು ಒಂದು ಬಗೆಯ ಹ್ಯಾಂಡ್ ವಾಶ್.

ಇವುಗಳ ಮಾರಾಟದ ಮೂಲಕ ಸಂಸ್ಥೆಯು ಇನ್ನೂ 1,000 ಕೋಟಿ ರೂ. ಮೌಲ್ಯದ ಹೆಚ್ಚಿನ ವಹಿವಾಟನ್ನು ನಿರೀಕ್ಷಿಸುತ್ತಿದೆ.

ಇದಕ್ಕೆ ಪೂರಕವಾಗಿ ಸಂಸ್ಥೆಯು ಅಖಿಲ ಭಾರತ ಮಟ್ಟದ ಮಾರುಕಟ್ಟೆಯನ್ನು ಹೊಂದಲು ಮತ್ತು ವಿದೇಶಗಳಲ್ಲೂ ಸಂಸ್ಥೆಯ ಉತ್ಪನ್ನಗಳು ಸಿಗುವಂತೆ ಮಾಡಲು ರಚನಾತ್ಮಕ ಕ್ರಮಗಳನ್ನು ಸರಕಾರ ಕೈಗೊಂಡಿದೆ.

ಬಿಡುಗಡೆಯಾಗಿರುವ ಹೊಸ ತರಹದ ಪ್ರೀಮಿಯಂ ಸಾಬೂನುಗಳು:

Mysore Sandal Wave Termaric,

Wave Lime,

Wave Deo,

Milk Saffron,

Almond Soap,

Neem Soap,

Aloe Soap,

Jasmine Cream,

Shikakayi Soap

ಸ್ನಾನಕ್ಕೆ ಬಳಸುವ ಶವರ್-ಜೆಲ್ ಗಳು:

Mysore Sandal Shower Gel,

Gold Shower Gel

Millenium Shower Gel

ಇವೆಲ್ಲವೂ ಇಂದಿನ ಬಗೆಬಗೆಯ ಗ್ರಾಹಕರ ಅಭಿರುಚಿಗಳನ್ನು ಗಮನದಲ್ಲಿ ಇಟ್ಟುಕೊಂಡು ಹೊರತಂದಿರುವ ಉತ್ಪನ್ನಗಳೇ ಆಗಿವೆ.

ಕೆಎಸ್‌ಡಿಎಲ್ ಸಂಸ್ಥೆಯ ವಾರ್ಷಿಕ ವಹಿವಾಟು ಸದ್ಯಕ್ಕೆ 1,400 ಕೋಟಿ ರೂ.ಗಳ ಆಸುಪಾಸಿನಲ್ಲಿದೆ. ಇದನ್ನು ಮುಂದಿನ ಎರಡು ವರ್ಷಗಳಲ್ಲಿ 3,000 ಕೋಟಿ ರೂ.ಗಳ ಮಟ್ಟಕ್ಕೆ ಕೊಂಡೊಯ್ಯುವುದು ಗುರಿಯಾಗಿದೆ.

ಈ ನಿಟ್ಟಿನಲ್ಲಿ, ಸಂಸ್ಥೆಯು ಶಿವಮೊಗ್ಗದಲ್ಲಿ ಹೊಂದಿರುವ ಘಟಕದ ಆವರಣದಲ್ಲಿ ಆಕ್ವಾ ಮಿನರಲ್ ವಾಟರ್ ಘಟಕವನ್ನು ಆರಂಭಿಸುವ ತಯಾರಿ ನಡೆಯುತ್ತಿದೆ. ಜೊತೆಗೆ Transparent Bathing Soap & Perfume Composition ತಯಾರಿಕೆಗೆ ಸಿದ್ಧತೆಗಳು ನಡೆಯುತ್ತಿವೆ.

Ramesh Babu

Journalist

Recent Posts

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

49 minutes ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

1 hour ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

5 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

7 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

10 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

14 hours ago