Categories: ರಾಜ್ಯ

ಕೆ.ಎಸ್.ಡಿ.ಎಲ್ ನ 21‌ಹೊಸ ಉತ್ಪನ್ನಗಳ ಬಿಡುಗಡೆ

ಕೆ.ಎಸ್.ಡಿ.ಎಲ್ ಇಂದು ಸಾಬೂನು, ಡಿಟರ್ಜೆಂಟ್ಸ್, ಸೌಂದರ್ಯವರ್ಧಕಗಳು, ಅಗರಬತ್ತಿ, ಧೂಪ ಸೇರಿದಂತೆ ಒಟ್ಟು 50 ಬಗೆಯ ಉತ್ಪನ್ನಗಳನ್ನು ತಯಾರಿಸುತ್ತಿದೆ. ಇದಕ್ಕೆ ಇಂದು ಹೊಸದಾಗಿ 21 ಉತ್ಪನ್ನಗಳು ಸೇರ್ಪಡೆಯಾಗುತ್ತಿದ್ದು, ಅವುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಿಡುಗಡೆ ಮಾಡಿದರು.

ಇಂದು ಬಿಡುಗಡೆಗೊಂಡ ಹೊಸ ಉತ್ಪನ್ನಗಳು ಇಂತಿವೆ:

ಪ್ರೀಮಿಯಂ ಶ್ರೇಣಿಯ 10 ಬಗೆಯ ಸಾಬೂನು, 3 ತರಹದ ಶವರ್ ಜೆಲ್, 6 ಬಗೆಯ ಸೋಪ್ ಕಿಟ್ ಮತ್ತು ಒಂದು ಬಗೆಯ ಹ್ಯಾಂಡ್ ವಾಶ್.

ಇವುಗಳ ಮಾರಾಟದ ಮೂಲಕ ಸಂಸ್ಥೆಯು ಇನ್ನೂ 1,000 ಕೋಟಿ ರೂ. ಮೌಲ್ಯದ ಹೆಚ್ಚಿನ ವಹಿವಾಟನ್ನು ನಿರೀಕ್ಷಿಸುತ್ತಿದೆ.

ಇದಕ್ಕೆ ಪೂರಕವಾಗಿ ಸಂಸ್ಥೆಯು ಅಖಿಲ ಭಾರತ ಮಟ್ಟದ ಮಾರುಕಟ್ಟೆಯನ್ನು ಹೊಂದಲು ಮತ್ತು ವಿದೇಶಗಳಲ್ಲೂ ಸಂಸ್ಥೆಯ ಉತ್ಪನ್ನಗಳು ಸಿಗುವಂತೆ ಮಾಡಲು ರಚನಾತ್ಮಕ ಕ್ರಮಗಳನ್ನು ಸರಕಾರ ಕೈಗೊಂಡಿದೆ.

ಬಿಡುಗಡೆಯಾಗಿರುವ ಹೊಸ ತರಹದ ಪ್ರೀಮಿಯಂ ಸಾಬೂನುಗಳು:

Mysore Sandal Wave Termaric,

Wave Lime,

Wave Deo,

Milk Saffron,

Almond Soap,

Neem Soap,

Aloe Soap,

Jasmine Cream,

Shikakayi Soap

ಸ್ನಾನಕ್ಕೆ ಬಳಸುವ ಶವರ್-ಜೆಲ್ ಗಳು:

Mysore Sandal Shower Gel,

Gold Shower Gel

Millenium Shower Gel

ಇವೆಲ್ಲವೂ ಇಂದಿನ ಬಗೆಬಗೆಯ ಗ್ರಾಹಕರ ಅಭಿರುಚಿಗಳನ್ನು ಗಮನದಲ್ಲಿ ಇಟ್ಟುಕೊಂಡು ಹೊರತಂದಿರುವ ಉತ್ಪನ್ನಗಳೇ ಆಗಿವೆ.

ಕೆಎಸ್‌ಡಿಎಲ್ ಸಂಸ್ಥೆಯ ವಾರ್ಷಿಕ ವಹಿವಾಟು ಸದ್ಯಕ್ಕೆ 1,400 ಕೋಟಿ ರೂ.ಗಳ ಆಸುಪಾಸಿನಲ್ಲಿದೆ. ಇದನ್ನು ಮುಂದಿನ ಎರಡು ವರ್ಷಗಳಲ್ಲಿ 3,000 ಕೋಟಿ ರೂ.ಗಳ ಮಟ್ಟಕ್ಕೆ ಕೊಂಡೊಯ್ಯುವುದು ಗುರಿಯಾಗಿದೆ.

ಈ ನಿಟ್ಟಿನಲ್ಲಿ, ಸಂಸ್ಥೆಯು ಶಿವಮೊಗ್ಗದಲ್ಲಿ ಹೊಂದಿರುವ ಘಟಕದ ಆವರಣದಲ್ಲಿ ಆಕ್ವಾ ಮಿನರಲ್ ವಾಟರ್ ಘಟಕವನ್ನು ಆರಂಭಿಸುವ ತಯಾರಿ ನಡೆಯುತ್ತಿದೆ. ಜೊತೆಗೆ Transparent Bathing Soap & Perfume Composition ತಯಾರಿಕೆಗೆ ಸಿದ್ಧತೆಗಳು ನಡೆಯುತ್ತಿವೆ.

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 hour ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

3 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

6 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

20 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago