Categories: ರಾಜ್ಯ

ಕೆ.ಎಸ್.ಡಿ.ಎಲ್ ನ 21‌ಹೊಸ ಉತ್ಪನ್ನಗಳ ಬಿಡುಗಡೆ

ಕೆ.ಎಸ್.ಡಿ.ಎಲ್ ಇಂದು ಸಾಬೂನು, ಡಿಟರ್ಜೆಂಟ್ಸ್, ಸೌಂದರ್ಯವರ್ಧಕಗಳು, ಅಗರಬತ್ತಿ, ಧೂಪ ಸೇರಿದಂತೆ ಒಟ್ಟು 50 ಬಗೆಯ ಉತ್ಪನ್ನಗಳನ್ನು ತಯಾರಿಸುತ್ತಿದೆ. ಇದಕ್ಕೆ ಇಂದು ಹೊಸದಾಗಿ 21 ಉತ್ಪನ್ನಗಳು ಸೇರ್ಪಡೆಯಾಗುತ್ತಿದ್ದು, ಅವುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಿಡುಗಡೆ ಮಾಡಿದರು.

ಇಂದು ಬಿಡುಗಡೆಗೊಂಡ ಹೊಸ ಉತ್ಪನ್ನಗಳು ಇಂತಿವೆ:

ಪ್ರೀಮಿಯಂ ಶ್ರೇಣಿಯ 10 ಬಗೆಯ ಸಾಬೂನು, 3 ತರಹದ ಶವರ್ ಜೆಲ್, 6 ಬಗೆಯ ಸೋಪ್ ಕಿಟ್ ಮತ್ತು ಒಂದು ಬಗೆಯ ಹ್ಯಾಂಡ್ ವಾಶ್.

ಇವುಗಳ ಮಾರಾಟದ ಮೂಲಕ ಸಂಸ್ಥೆಯು ಇನ್ನೂ 1,000 ಕೋಟಿ ರೂ. ಮೌಲ್ಯದ ಹೆಚ್ಚಿನ ವಹಿವಾಟನ್ನು ನಿರೀಕ್ಷಿಸುತ್ತಿದೆ.

ಇದಕ್ಕೆ ಪೂರಕವಾಗಿ ಸಂಸ್ಥೆಯು ಅಖಿಲ ಭಾರತ ಮಟ್ಟದ ಮಾರುಕಟ್ಟೆಯನ್ನು ಹೊಂದಲು ಮತ್ತು ವಿದೇಶಗಳಲ್ಲೂ ಸಂಸ್ಥೆಯ ಉತ್ಪನ್ನಗಳು ಸಿಗುವಂತೆ ಮಾಡಲು ರಚನಾತ್ಮಕ ಕ್ರಮಗಳನ್ನು ಸರಕಾರ ಕೈಗೊಂಡಿದೆ.

ಬಿಡುಗಡೆಯಾಗಿರುವ ಹೊಸ ತರಹದ ಪ್ರೀಮಿಯಂ ಸಾಬೂನುಗಳು:

Mysore Sandal Wave Termaric,

Wave Lime,

Wave Deo,

Milk Saffron,

Almond Soap,

Neem Soap,

Aloe Soap,

Jasmine Cream,

Shikakayi Soap

ಸ್ನಾನಕ್ಕೆ ಬಳಸುವ ಶವರ್-ಜೆಲ್ ಗಳು:

Mysore Sandal Shower Gel,

Gold Shower Gel

Millenium Shower Gel

ಇವೆಲ್ಲವೂ ಇಂದಿನ ಬಗೆಬಗೆಯ ಗ್ರಾಹಕರ ಅಭಿರುಚಿಗಳನ್ನು ಗಮನದಲ್ಲಿ ಇಟ್ಟುಕೊಂಡು ಹೊರತಂದಿರುವ ಉತ್ಪನ್ನಗಳೇ ಆಗಿವೆ.

ಕೆಎಸ್‌ಡಿಎಲ್ ಸಂಸ್ಥೆಯ ವಾರ್ಷಿಕ ವಹಿವಾಟು ಸದ್ಯಕ್ಕೆ 1,400 ಕೋಟಿ ರೂ.ಗಳ ಆಸುಪಾಸಿನಲ್ಲಿದೆ. ಇದನ್ನು ಮುಂದಿನ ಎರಡು ವರ್ಷಗಳಲ್ಲಿ 3,000 ಕೋಟಿ ರೂ.ಗಳ ಮಟ್ಟಕ್ಕೆ ಕೊಂಡೊಯ್ಯುವುದು ಗುರಿಯಾಗಿದೆ.

ಈ ನಿಟ್ಟಿನಲ್ಲಿ, ಸಂಸ್ಥೆಯು ಶಿವಮೊಗ್ಗದಲ್ಲಿ ಹೊಂದಿರುವ ಘಟಕದ ಆವರಣದಲ್ಲಿ ಆಕ್ವಾ ಮಿನರಲ್ ವಾಟರ್ ಘಟಕವನ್ನು ಆರಂಭಿಸುವ ತಯಾರಿ ನಡೆಯುತ್ತಿದೆ. ಜೊತೆಗೆ Transparent Bathing Soap & Perfume Composition ತಯಾರಿಕೆಗೆ ಸಿದ್ಧತೆಗಳು ನಡೆಯುತ್ತಿವೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

3 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

16 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

19 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

20 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

23 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago