Categories: ರಾಜ್ಯ

ಕೆ.ಎಸ್.ಡಿ.ಎಲ್ ನ 21‌ಹೊಸ ಉತ್ಪನ್ನಗಳ ಬಿಡುಗಡೆ

ಕೆ.ಎಸ್.ಡಿ.ಎಲ್ ಇಂದು ಸಾಬೂನು, ಡಿಟರ್ಜೆಂಟ್ಸ್, ಸೌಂದರ್ಯವರ್ಧಕಗಳು, ಅಗರಬತ್ತಿ, ಧೂಪ ಸೇರಿದಂತೆ ಒಟ್ಟು 50 ಬಗೆಯ ಉತ್ಪನ್ನಗಳನ್ನು ತಯಾರಿಸುತ್ತಿದೆ. ಇದಕ್ಕೆ ಇಂದು ಹೊಸದಾಗಿ 21 ಉತ್ಪನ್ನಗಳು ಸೇರ್ಪಡೆಯಾಗುತ್ತಿದ್ದು, ಅವುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಿಡುಗಡೆ ಮಾಡಿದರು.

ಇಂದು ಬಿಡುಗಡೆಗೊಂಡ ಹೊಸ ಉತ್ಪನ್ನಗಳು ಇಂತಿವೆ:

ಪ್ರೀಮಿಯಂ ಶ್ರೇಣಿಯ 10 ಬಗೆಯ ಸಾಬೂನು, 3 ತರಹದ ಶವರ್ ಜೆಲ್, 6 ಬಗೆಯ ಸೋಪ್ ಕಿಟ್ ಮತ್ತು ಒಂದು ಬಗೆಯ ಹ್ಯಾಂಡ್ ವಾಶ್.

ಇವುಗಳ ಮಾರಾಟದ ಮೂಲಕ ಸಂಸ್ಥೆಯು ಇನ್ನೂ 1,000 ಕೋಟಿ ರೂ. ಮೌಲ್ಯದ ಹೆಚ್ಚಿನ ವಹಿವಾಟನ್ನು ನಿರೀಕ್ಷಿಸುತ್ತಿದೆ.

ಇದಕ್ಕೆ ಪೂರಕವಾಗಿ ಸಂಸ್ಥೆಯು ಅಖಿಲ ಭಾರತ ಮಟ್ಟದ ಮಾರುಕಟ್ಟೆಯನ್ನು ಹೊಂದಲು ಮತ್ತು ವಿದೇಶಗಳಲ್ಲೂ ಸಂಸ್ಥೆಯ ಉತ್ಪನ್ನಗಳು ಸಿಗುವಂತೆ ಮಾಡಲು ರಚನಾತ್ಮಕ ಕ್ರಮಗಳನ್ನು ಸರಕಾರ ಕೈಗೊಂಡಿದೆ.

ಬಿಡುಗಡೆಯಾಗಿರುವ ಹೊಸ ತರಹದ ಪ್ರೀಮಿಯಂ ಸಾಬೂನುಗಳು:

Mysore Sandal Wave Termaric,

Wave Lime,

Wave Deo,

Milk Saffron,

Almond Soap,

Neem Soap,

Aloe Soap,

Jasmine Cream,

Shikakayi Soap

ಸ್ನಾನಕ್ಕೆ ಬಳಸುವ ಶವರ್-ಜೆಲ್ ಗಳು:

Mysore Sandal Shower Gel,

Gold Shower Gel

Millenium Shower Gel

ಇವೆಲ್ಲವೂ ಇಂದಿನ ಬಗೆಬಗೆಯ ಗ್ರಾಹಕರ ಅಭಿರುಚಿಗಳನ್ನು ಗಮನದಲ್ಲಿ ಇಟ್ಟುಕೊಂಡು ಹೊರತಂದಿರುವ ಉತ್ಪನ್ನಗಳೇ ಆಗಿವೆ.

ಕೆಎಸ್‌ಡಿಎಲ್ ಸಂಸ್ಥೆಯ ವಾರ್ಷಿಕ ವಹಿವಾಟು ಸದ್ಯಕ್ಕೆ 1,400 ಕೋಟಿ ರೂ.ಗಳ ಆಸುಪಾಸಿನಲ್ಲಿದೆ. ಇದನ್ನು ಮುಂದಿನ ಎರಡು ವರ್ಷಗಳಲ್ಲಿ 3,000 ಕೋಟಿ ರೂ.ಗಳ ಮಟ್ಟಕ್ಕೆ ಕೊಂಡೊಯ್ಯುವುದು ಗುರಿಯಾಗಿದೆ.

ಈ ನಿಟ್ಟಿನಲ್ಲಿ, ಸಂಸ್ಥೆಯು ಶಿವಮೊಗ್ಗದಲ್ಲಿ ಹೊಂದಿರುವ ಘಟಕದ ಆವರಣದಲ್ಲಿ ಆಕ್ವಾ ಮಿನರಲ್ ವಾಟರ್ ಘಟಕವನ್ನು ಆರಂಭಿಸುವ ತಯಾರಿ ನಡೆಯುತ್ತಿದೆ. ಜೊತೆಗೆ Transparent Bathing Soap & Perfume Composition ತಯಾರಿಕೆಗೆ ಸಿದ್ಧತೆಗಳು ನಡೆಯುತ್ತಿವೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

9 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

20 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

21 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

21 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

24 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

1 day ago