Categories: ರಾಜ್ಯ

ಕೆ.ಎಸ್.ಡಿ.ಎಲ್ ನ 21‌ಹೊಸ ಉತ್ಪನ್ನಗಳ ಬಿಡುಗಡೆ

ಕೆ.ಎಸ್.ಡಿ.ಎಲ್ ಇಂದು ಸಾಬೂನು, ಡಿಟರ್ಜೆಂಟ್ಸ್, ಸೌಂದರ್ಯವರ್ಧಕಗಳು, ಅಗರಬತ್ತಿ, ಧೂಪ ಸೇರಿದಂತೆ ಒಟ್ಟು 50 ಬಗೆಯ ಉತ್ಪನ್ನಗಳನ್ನು ತಯಾರಿಸುತ್ತಿದೆ. ಇದಕ್ಕೆ ಇಂದು ಹೊಸದಾಗಿ 21 ಉತ್ಪನ್ನಗಳು ಸೇರ್ಪಡೆಯಾಗುತ್ತಿದ್ದು, ಅವುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಿಡುಗಡೆ ಮಾಡಿದರು.

ಇಂದು ಬಿಡುಗಡೆಗೊಂಡ ಹೊಸ ಉತ್ಪನ್ನಗಳು ಇಂತಿವೆ:

ಪ್ರೀಮಿಯಂ ಶ್ರೇಣಿಯ 10 ಬಗೆಯ ಸಾಬೂನು, 3 ತರಹದ ಶವರ್ ಜೆಲ್, 6 ಬಗೆಯ ಸೋಪ್ ಕಿಟ್ ಮತ್ತು ಒಂದು ಬಗೆಯ ಹ್ಯಾಂಡ್ ವಾಶ್.

ಇವುಗಳ ಮಾರಾಟದ ಮೂಲಕ ಸಂಸ್ಥೆಯು ಇನ್ನೂ 1,000 ಕೋಟಿ ರೂ. ಮೌಲ್ಯದ ಹೆಚ್ಚಿನ ವಹಿವಾಟನ್ನು ನಿರೀಕ್ಷಿಸುತ್ತಿದೆ.

ಇದಕ್ಕೆ ಪೂರಕವಾಗಿ ಸಂಸ್ಥೆಯು ಅಖಿಲ ಭಾರತ ಮಟ್ಟದ ಮಾರುಕಟ್ಟೆಯನ್ನು ಹೊಂದಲು ಮತ್ತು ವಿದೇಶಗಳಲ್ಲೂ ಸಂಸ್ಥೆಯ ಉತ್ಪನ್ನಗಳು ಸಿಗುವಂತೆ ಮಾಡಲು ರಚನಾತ್ಮಕ ಕ್ರಮಗಳನ್ನು ಸರಕಾರ ಕೈಗೊಂಡಿದೆ.

ಬಿಡುಗಡೆಯಾಗಿರುವ ಹೊಸ ತರಹದ ಪ್ರೀಮಿಯಂ ಸಾಬೂನುಗಳು:

Mysore Sandal Wave Termaric,

Wave Lime,

Wave Deo,

Milk Saffron,

Almond Soap,

Neem Soap,

Aloe Soap,

Jasmine Cream,

Shikakayi Soap

ಸ್ನಾನಕ್ಕೆ ಬಳಸುವ ಶವರ್-ಜೆಲ್ ಗಳು:

Mysore Sandal Shower Gel,

Gold Shower Gel

Millenium Shower Gel

ಇವೆಲ್ಲವೂ ಇಂದಿನ ಬಗೆಬಗೆಯ ಗ್ರಾಹಕರ ಅಭಿರುಚಿಗಳನ್ನು ಗಮನದಲ್ಲಿ ಇಟ್ಟುಕೊಂಡು ಹೊರತಂದಿರುವ ಉತ್ಪನ್ನಗಳೇ ಆಗಿವೆ.

ಕೆಎಸ್‌ಡಿಎಲ್ ಸಂಸ್ಥೆಯ ವಾರ್ಷಿಕ ವಹಿವಾಟು ಸದ್ಯಕ್ಕೆ 1,400 ಕೋಟಿ ರೂ.ಗಳ ಆಸುಪಾಸಿನಲ್ಲಿದೆ. ಇದನ್ನು ಮುಂದಿನ ಎರಡು ವರ್ಷಗಳಲ್ಲಿ 3,000 ಕೋಟಿ ರೂ.ಗಳ ಮಟ್ಟಕ್ಕೆ ಕೊಂಡೊಯ್ಯುವುದು ಗುರಿಯಾಗಿದೆ.

ಈ ನಿಟ್ಟಿನಲ್ಲಿ, ಸಂಸ್ಥೆಯು ಶಿವಮೊಗ್ಗದಲ್ಲಿ ಹೊಂದಿರುವ ಘಟಕದ ಆವರಣದಲ್ಲಿ ಆಕ್ವಾ ಮಿನರಲ್ ವಾಟರ್ ಘಟಕವನ್ನು ಆರಂಭಿಸುವ ತಯಾರಿ ನಡೆಯುತ್ತಿದೆ. ಜೊತೆಗೆ Transparent Bathing Soap & Perfume Composition ತಯಾರಿಕೆಗೆ ಸಿದ್ಧತೆಗಳು ನಡೆಯುತ್ತಿವೆ.

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

9 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

9 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

13 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

14 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

20 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

21 hours ago