Categories: ರಾಜ್ಯ

ಕೆ.ಎಸ್.ಡಿ.ಎಲ್ ನ 21‌ಹೊಸ ಉತ್ಪನ್ನಗಳ ಬಿಡುಗಡೆ

ಕೆ.ಎಸ್.ಡಿ.ಎಲ್ ಇಂದು ಸಾಬೂನು, ಡಿಟರ್ಜೆಂಟ್ಸ್, ಸೌಂದರ್ಯವರ್ಧಕಗಳು, ಅಗರಬತ್ತಿ, ಧೂಪ ಸೇರಿದಂತೆ ಒಟ್ಟು 50 ಬಗೆಯ ಉತ್ಪನ್ನಗಳನ್ನು ತಯಾರಿಸುತ್ತಿದೆ. ಇದಕ್ಕೆ ಇಂದು ಹೊಸದಾಗಿ 21 ಉತ್ಪನ್ನಗಳು ಸೇರ್ಪಡೆಯಾಗುತ್ತಿದ್ದು, ಅವುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಿಡುಗಡೆ ಮಾಡಿದರು.

ಇಂದು ಬಿಡುಗಡೆಗೊಂಡ ಹೊಸ ಉತ್ಪನ್ನಗಳು ಇಂತಿವೆ:

ಪ್ರೀಮಿಯಂ ಶ್ರೇಣಿಯ 10 ಬಗೆಯ ಸಾಬೂನು, 3 ತರಹದ ಶವರ್ ಜೆಲ್, 6 ಬಗೆಯ ಸೋಪ್ ಕಿಟ್ ಮತ್ತು ಒಂದು ಬಗೆಯ ಹ್ಯಾಂಡ್ ವಾಶ್.

ಇವುಗಳ ಮಾರಾಟದ ಮೂಲಕ ಸಂಸ್ಥೆಯು ಇನ್ನೂ 1,000 ಕೋಟಿ ರೂ. ಮೌಲ್ಯದ ಹೆಚ್ಚಿನ ವಹಿವಾಟನ್ನು ನಿರೀಕ್ಷಿಸುತ್ತಿದೆ.

ಇದಕ್ಕೆ ಪೂರಕವಾಗಿ ಸಂಸ್ಥೆಯು ಅಖಿಲ ಭಾರತ ಮಟ್ಟದ ಮಾರುಕಟ್ಟೆಯನ್ನು ಹೊಂದಲು ಮತ್ತು ವಿದೇಶಗಳಲ್ಲೂ ಸಂಸ್ಥೆಯ ಉತ್ಪನ್ನಗಳು ಸಿಗುವಂತೆ ಮಾಡಲು ರಚನಾತ್ಮಕ ಕ್ರಮಗಳನ್ನು ಸರಕಾರ ಕೈಗೊಂಡಿದೆ.

ಬಿಡುಗಡೆಯಾಗಿರುವ ಹೊಸ ತರಹದ ಪ್ರೀಮಿಯಂ ಸಾಬೂನುಗಳು:

Mysore Sandal Wave Termaric,

Wave Lime,

Wave Deo,

Milk Saffron,

Almond Soap,

Neem Soap,

Aloe Soap,

Jasmine Cream,

Shikakayi Soap

ಸ್ನಾನಕ್ಕೆ ಬಳಸುವ ಶವರ್-ಜೆಲ್ ಗಳು:

Mysore Sandal Shower Gel,

Gold Shower Gel

Millenium Shower Gel

ಇವೆಲ್ಲವೂ ಇಂದಿನ ಬಗೆಬಗೆಯ ಗ್ರಾಹಕರ ಅಭಿರುಚಿಗಳನ್ನು ಗಮನದಲ್ಲಿ ಇಟ್ಟುಕೊಂಡು ಹೊರತಂದಿರುವ ಉತ್ಪನ್ನಗಳೇ ಆಗಿವೆ.

ಕೆಎಸ್‌ಡಿಎಲ್ ಸಂಸ್ಥೆಯ ವಾರ್ಷಿಕ ವಹಿವಾಟು ಸದ್ಯಕ್ಕೆ 1,400 ಕೋಟಿ ರೂ.ಗಳ ಆಸುಪಾಸಿನಲ್ಲಿದೆ. ಇದನ್ನು ಮುಂದಿನ ಎರಡು ವರ್ಷಗಳಲ್ಲಿ 3,000 ಕೋಟಿ ರೂ.ಗಳ ಮಟ್ಟಕ್ಕೆ ಕೊಂಡೊಯ್ಯುವುದು ಗುರಿಯಾಗಿದೆ.

ಈ ನಿಟ್ಟಿನಲ್ಲಿ, ಸಂಸ್ಥೆಯು ಶಿವಮೊಗ್ಗದಲ್ಲಿ ಹೊಂದಿರುವ ಘಟಕದ ಆವರಣದಲ್ಲಿ ಆಕ್ವಾ ಮಿನರಲ್ ವಾಟರ್ ಘಟಕವನ್ನು ಆರಂಭಿಸುವ ತಯಾರಿ ನಡೆಯುತ್ತಿದೆ. ಜೊತೆಗೆ Transparent Bathing Soap & Perfume Composition ತಯಾರಿಕೆಗೆ ಸಿದ್ಧತೆಗಳು ನಡೆಯುತ್ತಿವೆ.

Ramesh Babu

Journalist

Recent Posts

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

3 hours ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

3 hours ago

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

16 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

16 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

19 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

2 days ago