ಕೆ.ಜಿ.ಹಳ್ಳಿಯ ಕೇಳಚಂದ್ರ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಪ್ರಮಾಣ ಪತ್ರ ವಿತರಿಸಿದ ಸುಜಾ ಕೆ.ಜೆ.ಜಾರ್ಜ್

ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ ಫೌಂಡೇಶನ್‌ನ ವ್ಯವಸ್ಥಾಪಕ ಟ್ರಸ್ಟಿ ಸುಜಾ ಕೆ.ಜೆ. ಜಾರ್ಜ್ ಅವರು ಪ್ರಮಾಣಪತ್ರ ವಿತರಿಸಿದರು.

ಕೆ.ಜಿ. ಹಳ್ಳಿಯಲ್ಲಿ ಸ್ಥಾಪಿಸಿರುವ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಪ್ರಮಾಣಪತ್ರ ವಿತರಿಸಿದ ಸುಜಾ ಕೆ.ಜೆ.ಜಾರ್ಜ್ ಅವರು, “ಇಂಧನ ಸಚಿವರೂ ಆಗಿರುವ ಸರ್ವಜ್ಞನಗರ ಕ್ಷೇತ್ರದ ಶಾಸಕ ಕೆ.ಜೆ.ಜಾರ್ಜ್ ಅವರ ಬೆಂಬಲದೊಂದಿಗೆ ಈ ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಸ್ಥಾಪಿಸಿ ತರಬೇತಿ ನೀಡಲಾಗುತ್ತಿದ್ದು, ಇದರಿಂದ ಮಹಿಳೆಯರು ಸಬಲೀಕರಣ ಸಾಧ್ಯವಾಗಿದೆ,” ಎಂದರು.

“ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ಕಲೆ ಮತ್ತು ಕರಕುಶಲತೆ, ಕಸೂತಿ ಮತ್ತು ಟೈಲರಿಂಗ್ ಮತ್ತು ಕಂಪ್ಯೂಟರ್ ಕೌಶಲ್ಯಗಳಲ್ಲಿ ಯಶಸ್ವಿಯಾಗಿ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ವಿತರಿಸಿದ ಪ್ರಮಾಣ ಪತ್ರವು ಕೇವಲ ಅರ್ಹತೆಯನ್ನು ಪ್ರತಿನಿಧಿಸುವುದಿಲ್ಲ, ಅವರಲ್ಲಿ ಆತ್ಮ ವಿಶ್ವಾಸ, ಸ್ವಾವಲಂಬನೆ ಮತ್ತು ಹೊಸ ಆರಂಭದತ್ತ ದಿಟ್ಟ ಹೆಜ್ಜೆಯನ್ನು ಪ್ರತಿನಿಧಿಸುತ್ತದೆ,” ಎಂದು ಹೇಳಿದರು.

“ಕೇಳಚಂದ್ರ ಫೌಂಡೇಶನ್‌ನ ಈ ಉಪಕ್ರಮವು ಮಹಿಳೆಯರಲ್ಲಿ ಕೌಶಲ್ಯಗಳನ್ನು ಪೋಷಿಸುವುದರ ಜತೆಗೆ ಅವರ ಜೀವನೋಪಾಯಕ್ಕೆ ಅವಕಾಶ ಮಾಡಿಕೊಡುವುದಾಗಿದೆ. ಅಲ್ಲದೆ, ಮಹಿಳೆಯರು ಆರ್ಥಿಕ ಸ್ವಾತಂತ್ರ್ಯ ಮತ್ತು ಘನತೆಯನ್ನು ಸಾಧಿಸಲು ಅನುವು ಮಾಡಿಕೊಡುವ ಬದ್ಧತೆಯ ಕಾರ್ಯಕ್ರಮವಾಗಿದೆ. ತರಬೇತಿ ಪಡೆದ ಮಹಿಳೆಯರು ಸಬಲರಾಗಿ ತಮಗಾಗಿ, ತಮ್ಮ ಕುಟುಂಬಗಳು ಹಾಗೂ ಸಮುದಾಯಗಳಿಗೆ ಉಜ್ವಲ ಭವಿಷ್ಯವನ್ನು ರೂಪಿಸಲು ಸಿದ್ಧರಾಗಿದ್ದಾರೆ,” ಎಂದು ತಿಳಿಸಿದರು.

“ತರಬೇತಿ ಪಡೆದಿರುವ ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳು. ಸ್ವಾಲಂಬಿಗಳಾಗುವತ್ತ ನಿಮ್ಮ ದೃಢ ನಿಶ್ಚಯ ಮತ್ತು ಕಠಿಣ ಪರಿಶ್ರಮವು ನಿಜವಾಗಿಯೂ ಸ್ಪೂರ್ತಿದಾಯಕ. ಈ ಮೈಲಿಗಲ್ಲು ನಿಮಗೆ ಸಾಕಷ್ಟು ಆರ್ಥಿಕ ಅವಕಾಶಗಳನ್ನು ಕಲ್ಪಿಸುವುದರ ಜತೆಗೆ ಯಶಸ್ಸಿನ ಬಾಗಿಲು ತೆರೆಯಲಿ,” ಎಂದು ಸುಜಾ ಜಾರ್ಜ್ ಹಾರೈಸಿದರು.

ಕೇಳಚಂದ್ರ ಫೌಂಡೇಶನ್‌ನ ನಿರ್ದೇಶಕಿ ಡಾ.ತಿವೇಣಿ ಅವರು ಮಾತನಾಡಿ, ಸರ್ವಜ್ಞನಗರ ಕ್ಷೇತದ ಮಹಿಳೆಯರಿಗೆ ಶಕ್ತಿ ನೀಡಿ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಬೇಕು ಎಂಬ ಉದ್ದೇಶದಿಂದ ಸಚಿವ ಕೆ.ಜೆ.ಜಾರ್ಜ್ ಅವರು ಇಲ್ಲಿನ ಡಯಾಲಿಸಿಸ್ ಕೇಂದ್ರದಲ್ಲಿ ಕೌಶಲ್ಯ ತರಬೇತಿ ಕಂದ್ರ ಆರಂಭವಾಗುವಂತೆ ನೋಡಿಕೊಂಡರು. ಪಸ್ತುತ ಇಲ್ಲಿ ಸಾವಿರಾರು ಮಂದಿ ಡಯಾಲಿಸಿಸ್ ಸೌಲಭ್ಯ ಪಡೆಯುುದರೊಂದಿಗೆ ಕೌಶಲ್ಯ ತರಬೇತಿಯನ್ನೂ ತೆಗೆದುಕೊಳ್ಳುತ್ತಿದ್ದಾರೆ,” ಎಂದರು.

*15 ವರ್ಷದಲ್ಲಿ ನಂ. ಒನ್ ಕ್ಷೇತ್ರ*:

ವಾರ್ಡ್ ಅಧ್ಯಕ್ಷ ಎರನ್ ಸುರೇಶ್ ಮಾತನಾಡಿ, “ಕೌಶಲ್ಯ ಅಭಿವೃದ್ಧಿ, ಶಿಕ್ಷಣ ಕ್ಷೇತ್ರಕ್ಕೆ ಚಿವ ಕೆ.ಜೆ.ಜಾರ್ಜ್ ಅವರು ಗಣನೀಯ ಕೊಡುಗೆ ನೀಡಿದ್ದು, ಅವರ ಜನಪರ ಕಾಳಜಿಯಿಂದಾಗಿ ಸರ್ವಜ್ಞನಗರ ವಿಧಾಸಭಾ ಕ್ಷೇತ್ರವು ರಾಜ್ಯದ ಅನೇಕ ಕ್ಷೇತ್ರಗಳಿಂದ ಹತ್ತು ವರ್ಷದಷ್ಟು ಮುದುವರಿದಿದೆ. ಕ್ಷೇತ್ರದಲ್ಲಿ ಶಾಲೆಗೆ ಶಿಕ್ಷಕರು, ಮಕ್ಕಳ ಕೊರತೆ ಇಲ್ಲದಂತೆ ನೋಡಿಕೊಂಡಿದ್ದಾರೆ. ಕೆ.ಜೆ.ಜಾರ್ಜ್ ಅವರ ನೇತೃತ್ದಲ್ಲಿ ಇನ್ನು 15 ವರ್ಷದಲ್ಲಿ ಸರ್ವಜ್ಞನಗರ ಕ್ಷೇತ್ರವು ರಾಜ್ಯದಲ್ಲೇ ನಂಬರ್ ವನ್ ವಿಧಾಸಭಾ ಕ್ಷೇತ್ರವಾಗಿ ಹೊರಹೊಮ್ಮಲಿದೆ,” ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ಸರ್ವಜ್ಞನಗರ ಕ್ಷೇತ್ರದ ನಾಗರಿಕರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಅವರಿಗೆ ಕೌಶಲ್ಯ ತರಬೇತಿ ನೀಡುವ ಉದ್ದೇಶದಿಂದ ಕೇಳಚಂದ್ರ ಫೌಂಡೇಷನ್ ವತಿಯಿಂದ ಕೌಶಲ್ಯಾಭಿವೃದ್ಧಿ ಕೇಂದ್ರಗಳನ್ನು ಸ್ಥಾಪಿಸಿ ತರಬೇತಿ ನೀಡಲಾಗುತ್ತಿದೆ. ತರಬೇತಿ ಪಡೆದು ಪ್ರಮಾಣಪತ್ರ ಪಡೆದ ಎಲ್ಲರಿಗೂ ಅಭಿನದನೆಗಳು. ಭವಿಷ್ಯದಲ್ಲಿ ನಿಮ್ಮ ಯಶಸ್ಸುಇತರರಿಗೂ ಸ್ಪೂರ್ತಿಯಾಗಿ ಅವರೂ ಕೌಶಲ್ಯವಂತರಾಗಲಿ ಎಂದು ಹಾರೈಸುತ್ತೇನೆ.” ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

Ramesh Babu

Journalist

Recent Posts

ಗಂಡು ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒತ್ತಾಯ: ಮಹಿಳೆಯರಿಗಾಗಿ ಪ್ರತ್ಯೇಕ ಬಜೆಟ್ ಮಂಡಿಸುವಂತೆ ಮನವಿ

ದೊಡ್ಡಬಳ್ಳಾಪುರ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಪ್ರತಿ ವರ್ಷವೂ ಕೇವಲ ಹೆಣ್ಣು ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ. ಈ…

11 hours ago

ತಂಬಾಕು ಮುಕ್ತ ಯುವ ಅಂದೋಲನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರೀಪುರ ಗ್ರಾಮ ಪಂಚಾಯಿತಿ…

12 hours ago

ಸ್ಕೂಲ್ ಬಸ್ ಹಾಗೂ ಬೈಕ್ ಅಪಘಾತ: ಇಬ್ಬರು ಮಕ್ಕಳು ಸಾ*ವು

ಶಾಲಾ ಬಸ್​ ಹರಿದು ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಗರದ ಥಣಿಸಂದ್ರದ ಪೊಲೀಸ್ ಕ್ವಾರ್ಟರ್ಸ್​​ ಬಳಿ ನಡೆದಿದೆ. ವರ್ಷಾ(2)…

13 hours ago

ನಟಿ ತಮನ್ನಾ ಭಾಟಿಯಾ KSDL ಉತ್ಪನ್ನಗಳ ರಾಯಭಾರಿ ವಿಚಾರ: ಸಂಸದ ಡಾ.ಕೆ.ಸುಧಾಕರ್ ಕಿಡಿ: ನಾಡದ್ರೋಹಿ ಕಾಂಗ್ರೆಸ್ ಸರ್ಕಾರಕ್ಕೆ ಕನ್ನಡದ ಸಿನಿತಾರೆಗಳು ಕಣ್ಣಿಗೆ ಕಣ್ಣುತ್ತಿಲ್ಲವೇ ಎಂದು ಪ್ರಶ್ನೆ

ನಟಿ ತಮನ್ನಾ ಭಾಟಿಯಾ KSDL ಉತ್ಪನ್ನಗಳ ರಾಯಭಾರಿ ವಿಚಾರ: ಸಂಸದ ಡಾ.ಕೆ.ಸುಧಾಕರ್ ಕಿಡಿ: ನಾಡದ್ರೋಹಿ ಕಾಂಗ್ರೆಸ್ ಸರ್ಕಾರಕ್ಕೆ ಕನ್ನಡದ ಸಿನಿತಾರೆಗಳು…

16 hours ago

ಬ್ರೋಕರ್‌ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ…!:ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಯುವಕ

ರಾಜ್ಯದಲ್ಲಿ ಮದುವೆಗೆ ಹೆಣ್ಣು ಸಿಗದೆ ಯುವಕರು ಪಾದಯಾತ್ರೆ, ಹರಕೆಗಳ ಮೊರೆ ಹೋಗುತ್ತಿರುವುದು ಹೊಸತೇನಲ್ಲ. ಆದರೆ, ಇದೇ ಹತಾಶೆಯನ್ನು ಬಂಡವಾಳ ಮಾಡಿಕೊಂಡ…

18 hours ago

ನಮ್ಮ ಮೆಟ್ರೋ ಟಿಕೆಟ್ ದರ ನಿಗದಿ ಮತ್ತು ದರ ಹೆಚ್ಚಳಕ್ಕೆ ಯಾರು ಜವಾಬ್ದಾರರು?

ಮೆಟ್ರೋ ಬೆಲೆ ಏರಿಕೆ.... " ನಾನು ಮೂರ್ಖ ಅಲ್ಲ " ಎರಡೂ ರಾಜಕೀಯ ಪಕ್ಷಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು,…

23 hours ago