ಕೆ.ಜಿ.ಹಳ್ಳಿಯ ಕೇಳಚಂದ್ರ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಪ್ರಮಾಣ ಪತ್ರ ವಿತರಿಸಿದ ಸುಜಾ ಕೆ.ಜೆ.ಜಾರ್ಜ್

ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ ಫೌಂಡೇಶನ್‌ನ ವ್ಯವಸ್ಥಾಪಕ ಟ್ರಸ್ಟಿ ಸುಜಾ ಕೆ.ಜೆ. ಜಾರ್ಜ್ ಅವರು ಪ್ರಮಾಣಪತ್ರ ವಿತರಿಸಿದರು.

ಕೆ.ಜಿ. ಹಳ್ಳಿಯಲ್ಲಿ ಸ್ಥಾಪಿಸಿರುವ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಪ್ರಮಾಣಪತ್ರ ವಿತರಿಸಿದ ಸುಜಾ ಕೆ.ಜೆ.ಜಾರ್ಜ್ ಅವರು, “ಇಂಧನ ಸಚಿವರೂ ಆಗಿರುವ ಸರ್ವಜ್ಞನಗರ ಕ್ಷೇತ್ರದ ಶಾಸಕ ಕೆ.ಜೆ.ಜಾರ್ಜ್ ಅವರ ಬೆಂಬಲದೊಂದಿಗೆ ಈ ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಸ್ಥಾಪಿಸಿ ತರಬೇತಿ ನೀಡಲಾಗುತ್ತಿದ್ದು, ಇದರಿಂದ ಮಹಿಳೆಯರು ಸಬಲೀಕರಣ ಸಾಧ್ಯವಾಗಿದೆ,” ಎಂದರು.

“ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ಕಲೆ ಮತ್ತು ಕರಕುಶಲತೆ, ಕಸೂತಿ ಮತ್ತು ಟೈಲರಿಂಗ್ ಮತ್ತು ಕಂಪ್ಯೂಟರ್ ಕೌಶಲ್ಯಗಳಲ್ಲಿ ಯಶಸ್ವಿಯಾಗಿ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ವಿತರಿಸಿದ ಪ್ರಮಾಣ ಪತ್ರವು ಕೇವಲ ಅರ್ಹತೆಯನ್ನು ಪ್ರತಿನಿಧಿಸುವುದಿಲ್ಲ, ಅವರಲ್ಲಿ ಆತ್ಮ ವಿಶ್ವಾಸ, ಸ್ವಾವಲಂಬನೆ ಮತ್ತು ಹೊಸ ಆರಂಭದತ್ತ ದಿಟ್ಟ ಹೆಜ್ಜೆಯನ್ನು ಪ್ರತಿನಿಧಿಸುತ್ತದೆ,” ಎಂದು ಹೇಳಿದರು.

“ಕೇಳಚಂದ್ರ ಫೌಂಡೇಶನ್‌ನ ಈ ಉಪಕ್ರಮವು ಮಹಿಳೆಯರಲ್ಲಿ ಕೌಶಲ್ಯಗಳನ್ನು ಪೋಷಿಸುವುದರ ಜತೆಗೆ ಅವರ ಜೀವನೋಪಾಯಕ್ಕೆ ಅವಕಾಶ ಮಾಡಿಕೊಡುವುದಾಗಿದೆ. ಅಲ್ಲದೆ, ಮಹಿಳೆಯರು ಆರ್ಥಿಕ ಸ್ವಾತಂತ್ರ್ಯ ಮತ್ತು ಘನತೆಯನ್ನು ಸಾಧಿಸಲು ಅನುವು ಮಾಡಿಕೊಡುವ ಬದ್ಧತೆಯ ಕಾರ್ಯಕ್ರಮವಾಗಿದೆ. ತರಬೇತಿ ಪಡೆದ ಮಹಿಳೆಯರು ಸಬಲರಾಗಿ ತಮಗಾಗಿ, ತಮ್ಮ ಕುಟುಂಬಗಳು ಹಾಗೂ ಸಮುದಾಯಗಳಿಗೆ ಉಜ್ವಲ ಭವಿಷ್ಯವನ್ನು ರೂಪಿಸಲು ಸಿದ್ಧರಾಗಿದ್ದಾರೆ,” ಎಂದು ತಿಳಿಸಿದರು.

“ತರಬೇತಿ ಪಡೆದಿರುವ ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳು. ಸ್ವಾಲಂಬಿಗಳಾಗುವತ್ತ ನಿಮ್ಮ ದೃಢ ನಿಶ್ಚಯ ಮತ್ತು ಕಠಿಣ ಪರಿಶ್ರಮವು ನಿಜವಾಗಿಯೂ ಸ್ಪೂರ್ತಿದಾಯಕ. ಈ ಮೈಲಿಗಲ್ಲು ನಿಮಗೆ ಸಾಕಷ್ಟು ಆರ್ಥಿಕ ಅವಕಾಶಗಳನ್ನು ಕಲ್ಪಿಸುವುದರ ಜತೆಗೆ ಯಶಸ್ಸಿನ ಬಾಗಿಲು ತೆರೆಯಲಿ,” ಎಂದು ಸುಜಾ ಜಾರ್ಜ್ ಹಾರೈಸಿದರು.

ಕೇಳಚಂದ್ರ ಫೌಂಡೇಶನ್‌ನ ನಿರ್ದೇಶಕಿ ಡಾ.ತಿವೇಣಿ ಅವರು ಮಾತನಾಡಿ, ಸರ್ವಜ್ಞನಗರ ಕ್ಷೇತದ ಮಹಿಳೆಯರಿಗೆ ಶಕ್ತಿ ನೀಡಿ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಬೇಕು ಎಂಬ ಉದ್ದೇಶದಿಂದ ಸಚಿವ ಕೆ.ಜೆ.ಜಾರ್ಜ್ ಅವರು ಇಲ್ಲಿನ ಡಯಾಲಿಸಿಸ್ ಕೇಂದ್ರದಲ್ಲಿ ಕೌಶಲ್ಯ ತರಬೇತಿ ಕಂದ್ರ ಆರಂಭವಾಗುವಂತೆ ನೋಡಿಕೊಂಡರು. ಪಸ್ತುತ ಇಲ್ಲಿ ಸಾವಿರಾರು ಮಂದಿ ಡಯಾಲಿಸಿಸ್ ಸೌಲಭ್ಯ ಪಡೆಯುುದರೊಂದಿಗೆ ಕೌಶಲ್ಯ ತರಬೇತಿಯನ್ನೂ ತೆಗೆದುಕೊಳ್ಳುತ್ತಿದ್ದಾರೆ,” ಎಂದರು.

*15 ವರ್ಷದಲ್ಲಿ ನಂ. ಒನ್ ಕ್ಷೇತ್ರ*:

ವಾರ್ಡ್ ಅಧ್ಯಕ್ಷ ಎರನ್ ಸುರೇಶ್ ಮಾತನಾಡಿ, “ಕೌಶಲ್ಯ ಅಭಿವೃದ್ಧಿ, ಶಿಕ್ಷಣ ಕ್ಷೇತ್ರಕ್ಕೆ ಚಿವ ಕೆ.ಜೆ.ಜಾರ್ಜ್ ಅವರು ಗಣನೀಯ ಕೊಡುಗೆ ನೀಡಿದ್ದು, ಅವರ ಜನಪರ ಕಾಳಜಿಯಿಂದಾಗಿ ಸರ್ವಜ್ಞನಗರ ವಿಧಾಸಭಾ ಕ್ಷೇತ್ರವು ರಾಜ್ಯದ ಅನೇಕ ಕ್ಷೇತ್ರಗಳಿಂದ ಹತ್ತು ವರ್ಷದಷ್ಟು ಮುದುವರಿದಿದೆ. ಕ್ಷೇತ್ರದಲ್ಲಿ ಶಾಲೆಗೆ ಶಿಕ್ಷಕರು, ಮಕ್ಕಳ ಕೊರತೆ ಇಲ್ಲದಂತೆ ನೋಡಿಕೊಂಡಿದ್ದಾರೆ. ಕೆ.ಜೆ.ಜಾರ್ಜ್ ಅವರ ನೇತೃತ್ದಲ್ಲಿ ಇನ್ನು 15 ವರ್ಷದಲ್ಲಿ ಸರ್ವಜ್ಞನಗರ ಕ್ಷೇತ್ರವು ರಾಜ್ಯದಲ್ಲೇ ನಂಬರ್ ವನ್ ವಿಧಾಸಭಾ ಕ್ಷೇತ್ರವಾಗಿ ಹೊರಹೊಮ್ಮಲಿದೆ,” ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ಸರ್ವಜ್ಞನಗರ ಕ್ಷೇತ್ರದ ನಾಗರಿಕರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಅವರಿಗೆ ಕೌಶಲ್ಯ ತರಬೇತಿ ನೀಡುವ ಉದ್ದೇಶದಿಂದ ಕೇಳಚಂದ್ರ ಫೌಂಡೇಷನ್ ವತಿಯಿಂದ ಕೌಶಲ್ಯಾಭಿವೃದ್ಧಿ ಕೇಂದ್ರಗಳನ್ನು ಸ್ಥಾಪಿಸಿ ತರಬೇತಿ ನೀಡಲಾಗುತ್ತಿದೆ. ತರಬೇತಿ ಪಡೆದು ಪ್ರಮಾಣಪತ್ರ ಪಡೆದ ಎಲ್ಲರಿಗೂ ಅಭಿನದನೆಗಳು. ಭವಿಷ್ಯದಲ್ಲಿ ನಿಮ್ಮ ಯಶಸ್ಸುಇತರರಿಗೂ ಸ್ಪೂರ್ತಿಯಾಗಿ ಅವರೂ ಕೌಶಲ್ಯವಂತರಾಗಲಿ ಎಂದು ಹಾರೈಸುತ್ತೇನೆ.” ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

Ramesh Babu

Journalist

Recent Posts

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

12 hours ago

ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವ

ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…

13 hours ago

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

17 hours ago

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

23 hours ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

1 day ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

2 days ago