ಕೆ.ಜಿ.ಹಳ್ಳಿಯ ಕೇಳಚಂದ್ರ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಪ್ರಮಾಣ ಪತ್ರ ವಿತರಿಸಿದ ಸುಜಾ ಕೆ.ಜೆ.ಜಾರ್ಜ್

ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ ಫೌಂಡೇಶನ್‌ನ ವ್ಯವಸ್ಥಾಪಕ ಟ್ರಸ್ಟಿ ಸುಜಾ ಕೆ.ಜೆ. ಜಾರ್ಜ್ ಅವರು ಪ್ರಮಾಣಪತ್ರ ವಿತರಿಸಿದರು.

ಕೆ.ಜಿ. ಹಳ್ಳಿಯಲ್ಲಿ ಸ್ಥಾಪಿಸಿರುವ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಪ್ರಮಾಣಪತ್ರ ವಿತರಿಸಿದ ಸುಜಾ ಕೆ.ಜೆ.ಜಾರ್ಜ್ ಅವರು, “ಇಂಧನ ಸಚಿವರೂ ಆಗಿರುವ ಸರ್ವಜ್ಞನಗರ ಕ್ಷೇತ್ರದ ಶಾಸಕ ಕೆ.ಜೆ.ಜಾರ್ಜ್ ಅವರ ಬೆಂಬಲದೊಂದಿಗೆ ಈ ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಸ್ಥಾಪಿಸಿ ತರಬೇತಿ ನೀಡಲಾಗುತ್ತಿದ್ದು, ಇದರಿಂದ ಮಹಿಳೆಯರು ಸಬಲೀಕರಣ ಸಾಧ್ಯವಾಗಿದೆ,” ಎಂದರು.

“ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ಕಲೆ ಮತ್ತು ಕರಕುಶಲತೆ, ಕಸೂತಿ ಮತ್ತು ಟೈಲರಿಂಗ್ ಮತ್ತು ಕಂಪ್ಯೂಟರ್ ಕೌಶಲ್ಯಗಳಲ್ಲಿ ಯಶಸ್ವಿಯಾಗಿ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ವಿತರಿಸಿದ ಪ್ರಮಾಣ ಪತ್ರವು ಕೇವಲ ಅರ್ಹತೆಯನ್ನು ಪ್ರತಿನಿಧಿಸುವುದಿಲ್ಲ, ಅವರಲ್ಲಿ ಆತ್ಮ ವಿಶ್ವಾಸ, ಸ್ವಾವಲಂಬನೆ ಮತ್ತು ಹೊಸ ಆರಂಭದತ್ತ ದಿಟ್ಟ ಹೆಜ್ಜೆಯನ್ನು ಪ್ರತಿನಿಧಿಸುತ್ತದೆ,” ಎಂದು ಹೇಳಿದರು.

“ಕೇಳಚಂದ್ರ ಫೌಂಡೇಶನ್‌ನ ಈ ಉಪಕ್ರಮವು ಮಹಿಳೆಯರಲ್ಲಿ ಕೌಶಲ್ಯಗಳನ್ನು ಪೋಷಿಸುವುದರ ಜತೆಗೆ ಅವರ ಜೀವನೋಪಾಯಕ್ಕೆ ಅವಕಾಶ ಮಾಡಿಕೊಡುವುದಾಗಿದೆ. ಅಲ್ಲದೆ, ಮಹಿಳೆಯರು ಆರ್ಥಿಕ ಸ್ವಾತಂತ್ರ್ಯ ಮತ್ತು ಘನತೆಯನ್ನು ಸಾಧಿಸಲು ಅನುವು ಮಾಡಿಕೊಡುವ ಬದ್ಧತೆಯ ಕಾರ್ಯಕ್ರಮವಾಗಿದೆ. ತರಬೇತಿ ಪಡೆದ ಮಹಿಳೆಯರು ಸಬಲರಾಗಿ ತಮಗಾಗಿ, ತಮ್ಮ ಕುಟುಂಬಗಳು ಹಾಗೂ ಸಮುದಾಯಗಳಿಗೆ ಉಜ್ವಲ ಭವಿಷ್ಯವನ್ನು ರೂಪಿಸಲು ಸಿದ್ಧರಾಗಿದ್ದಾರೆ,” ಎಂದು ತಿಳಿಸಿದರು.

“ತರಬೇತಿ ಪಡೆದಿರುವ ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳು. ಸ್ವಾಲಂಬಿಗಳಾಗುವತ್ತ ನಿಮ್ಮ ದೃಢ ನಿಶ್ಚಯ ಮತ್ತು ಕಠಿಣ ಪರಿಶ್ರಮವು ನಿಜವಾಗಿಯೂ ಸ್ಪೂರ್ತಿದಾಯಕ. ಈ ಮೈಲಿಗಲ್ಲು ನಿಮಗೆ ಸಾಕಷ್ಟು ಆರ್ಥಿಕ ಅವಕಾಶಗಳನ್ನು ಕಲ್ಪಿಸುವುದರ ಜತೆಗೆ ಯಶಸ್ಸಿನ ಬಾಗಿಲು ತೆರೆಯಲಿ,” ಎಂದು ಸುಜಾ ಜಾರ್ಜ್ ಹಾರೈಸಿದರು.

ಕೇಳಚಂದ್ರ ಫೌಂಡೇಶನ್‌ನ ನಿರ್ದೇಶಕಿ ಡಾ.ತಿವೇಣಿ ಅವರು ಮಾತನಾಡಿ, ಸರ್ವಜ್ಞನಗರ ಕ್ಷೇತದ ಮಹಿಳೆಯರಿಗೆ ಶಕ್ತಿ ನೀಡಿ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಬೇಕು ಎಂಬ ಉದ್ದೇಶದಿಂದ ಸಚಿವ ಕೆ.ಜೆ.ಜಾರ್ಜ್ ಅವರು ಇಲ್ಲಿನ ಡಯಾಲಿಸಿಸ್ ಕೇಂದ್ರದಲ್ಲಿ ಕೌಶಲ್ಯ ತರಬೇತಿ ಕಂದ್ರ ಆರಂಭವಾಗುವಂತೆ ನೋಡಿಕೊಂಡರು. ಪಸ್ತುತ ಇಲ್ಲಿ ಸಾವಿರಾರು ಮಂದಿ ಡಯಾಲಿಸಿಸ್ ಸೌಲಭ್ಯ ಪಡೆಯುುದರೊಂದಿಗೆ ಕೌಶಲ್ಯ ತರಬೇತಿಯನ್ನೂ ತೆಗೆದುಕೊಳ್ಳುತ್ತಿದ್ದಾರೆ,” ಎಂದರು.

*15 ವರ್ಷದಲ್ಲಿ ನಂ. ಒನ್ ಕ್ಷೇತ್ರ*:

ವಾರ್ಡ್ ಅಧ್ಯಕ್ಷ ಎರನ್ ಸುರೇಶ್ ಮಾತನಾಡಿ, “ಕೌಶಲ್ಯ ಅಭಿವೃದ್ಧಿ, ಶಿಕ್ಷಣ ಕ್ಷೇತ್ರಕ್ಕೆ ಚಿವ ಕೆ.ಜೆ.ಜಾರ್ಜ್ ಅವರು ಗಣನೀಯ ಕೊಡುಗೆ ನೀಡಿದ್ದು, ಅವರ ಜನಪರ ಕಾಳಜಿಯಿಂದಾಗಿ ಸರ್ವಜ್ಞನಗರ ವಿಧಾಸಭಾ ಕ್ಷೇತ್ರವು ರಾಜ್ಯದ ಅನೇಕ ಕ್ಷೇತ್ರಗಳಿಂದ ಹತ್ತು ವರ್ಷದಷ್ಟು ಮುದುವರಿದಿದೆ. ಕ್ಷೇತ್ರದಲ್ಲಿ ಶಾಲೆಗೆ ಶಿಕ್ಷಕರು, ಮಕ್ಕಳ ಕೊರತೆ ಇಲ್ಲದಂತೆ ನೋಡಿಕೊಂಡಿದ್ದಾರೆ. ಕೆ.ಜೆ.ಜಾರ್ಜ್ ಅವರ ನೇತೃತ್ದಲ್ಲಿ ಇನ್ನು 15 ವರ್ಷದಲ್ಲಿ ಸರ್ವಜ್ಞನಗರ ಕ್ಷೇತ್ರವು ರಾಜ್ಯದಲ್ಲೇ ನಂಬರ್ ವನ್ ವಿಧಾಸಭಾ ಕ್ಷೇತ್ರವಾಗಿ ಹೊರಹೊಮ್ಮಲಿದೆ,” ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ಸರ್ವಜ್ಞನಗರ ಕ್ಷೇತ್ರದ ನಾಗರಿಕರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಅವರಿಗೆ ಕೌಶಲ್ಯ ತರಬೇತಿ ನೀಡುವ ಉದ್ದೇಶದಿಂದ ಕೇಳಚಂದ್ರ ಫೌಂಡೇಷನ್ ವತಿಯಿಂದ ಕೌಶಲ್ಯಾಭಿವೃದ್ಧಿ ಕೇಂದ್ರಗಳನ್ನು ಸ್ಥಾಪಿಸಿ ತರಬೇತಿ ನೀಡಲಾಗುತ್ತಿದೆ. ತರಬೇತಿ ಪಡೆದು ಪ್ರಮಾಣಪತ್ರ ಪಡೆದ ಎಲ್ಲರಿಗೂ ಅಭಿನದನೆಗಳು. ಭವಿಷ್ಯದಲ್ಲಿ ನಿಮ್ಮ ಯಶಸ್ಸುಇತರರಿಗೂ ಸ್ಪೂರ್ತಿಯಾಗಿ ಅವರೂ ಕೌಶಲ್ಯವಂತರಾಗಲಿ ಎಂದು ಹಾರೈಸುತ್ತೇನೆ.” ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

19 hours ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

1 day ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

3 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago