ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ

‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ ಕ್ಷೇತ್ರದ ಶಾಸಕ ಕೆ.ಜೆ.ಜಾರ್ಜ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಕ್ಷೇತ್ರದ ಕಾಡುಗೊಂಡನಹಳ್ಳಿ (ಕೆ.ಜಿ.ಹಳ್ಳಿ) ವ್ಯಾಪ್ತಿಯಲ್ಲಿ ಗುರುವಾರ ಸಂಚರಿಸಿ ಸ್ಥಳೀಯ ಜನರ ಸಮಸ್ಯೆಗಳನ್ನು ಆಲಿಸಿದ ಸಚಿವರು, ಅಭಿವೃದ್ದಿ ಕಾಮಗಾರಿಗಳ ಮಂದಗತಿಗೆ ಕಾರಣರಾದ ಅಧಿಕಾರಿಗಳಿಗೆ ಬೆವರಿಸಿಳಿಸಿದರು.

ಕೆ.ಜಿ.ಹಳ್ಳಿಯ ಪಿಳ್ಳಣ್ಣ ಗಾರ್ಡನ್‌ನಿಂದ ಶುರುವಾದ ಕ್ಷೇತ್ರ ಪರ್ಯಟನೆ ವಿನೋಬಾ ನಗರ, ಭಾರತ್ ಮಾತಾ ಬಡಾವಣೆ, ವೆಂಕಟೇಶಪುರ, ರಷದ್ ನಗರ ಹಾಗೂ ನಾಗವಾರ ಮುಖ್ಯರಸ್ತೆಯ ಮೆಟ್ರೋ ನಿಲ್ದಾಣದ ಬಳಿ ಕೊನೆಗೊಂಡಿತು.

ಪಿಳ್ಳಣ್ಣ ಗಾರ್ಡನ್‌ನ ಐದು ಬ್ಲಾಕ್‌ಗಳಲ್ಲಿ ಕಾಲ್ನಡಿಗೆಯಲ್ಲೇ ಸಂಚರಿಸಿದ ಸಚಿವ ಕೆ.ಜೆ.ಜಾರ್ಜ್ ಅವರು, ಕೊಳಗೇರಿ ಅಭಿವೃದ್ಧಿ ಮಂಡಳಿ ಮನೆಗಳ ನವೀಕರಣ ಹಾಗೂ ಶುದ್ದ ಕುಡಿಯುವ ನೀರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಆಲಿಸಿದರು. ವಿನೋಬಾ ನಗರ, ಭಾರತ್ ಮಾತಾ ಬಡಾವಣೆಯಲ್ಲೂ ಸ್ಥಳೀಯರು ನೀರಿನ ಸಮಸ್ಯೆ ಬಗೆಹರಿಸುವಂತೆ ಕೋರಿದರು.

ಈ ವೇಳೆ ಸ್ಥಳದಲ್ಲೇ ಹಾಜರಿದ್ದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳನ್ನು ಕರೆಸಿದ ಸಚಿವರು, ನೀವು ಸಬೂಬು ಹೇಳಬೇಡಿ. ಯಾವಾಗ ಶುದ್ದ ಕುಡಿಯುವ ನೀರಿನ ಸಂಪರ್ಕ ಕೊಡುತ್ತೀರಿ? ದಿನಾಂಕ ಸಹಿತ ಹೇಳಿ. ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸಚಿವರ ಕ್ಷೇತ್ರ ಪರ್ಯಟನೆ ಕುರಿತು ಮುಂಚಿತವಾಗಿ ಮಾಹಿತಿ ನೀಡಿದರೂ ಸ್ಥಳಕ್ಕೆ ಹಾಜರಾಗದ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧಿಕಾರಿಯನ್ನು ದೂರವಾಣಿ ಮೂಲಕ ತರಾಟೆಗೆ ತೆಗೆದುಕೊಂಡ ಸಚಿವರು, ಮುಂದೆ ಈ ರೀತಿ ಮಾಡಿದೆ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

*ಮಹಿಳೆಯರಿಗೆ ಸ್ವಾವಲಂಬನೆಯೇ ಗುರಿಯಾಗಲಿ*

ಕೆ.ಜಿ.ಹಳ್ಳಿಯಲ್ಲಿ ಯುನೈಟೆಡ್-ವೇ ಬೆಂಗಳೂರು ಸಹಯೋಗದಲ್ಲಿ ಮೈತ್ರಿ ಸರ್ವ ಸೇವಾ ಸಮಿತಿ ನಡೆಸಿದ ಟೈಲರಿಂಗ್ ಕೌಶಲ್ಯ ತರಬೇತಿ ಮುಗಿಸಿದ 50 ಮಹಿಳೆಯರಿಗೆ ಹೊಲಿಗೆ ಯಂತ್ರ ಹಾಗೂ ಕೋರ್ಸ್ ಮುಗಿಸಿದವರಿಗೆ ಸಚಿವ ಕೆ.ಜೆ.ಜಾರ್ಜ್ ಪ್ರಮಾಣ ಪತ್ರಗಳನ್ನು ವಿತರಿಸಿದರು. ಅಲ್ಲದೆ, ಕೌಶಲ್ಯ ತರಬೇತಿ ಕುರಿತು ಹರ್ಷ ವ್ಯಕ್ತಪಡಿಸಿ, “ಮಹಿಳೆಯರು ಸ್ವಂತ ಉದ್ಯೋಗ ಮಾಡುತ್ತಾ ಸ್ವಾವಲಂಬಿಗಳಾದರೆ ಕುಟುಂಬ ಏಳಿಗೆ ಆಗುತ್ತದೆ. ಇದೇ ಯಶಸ್ಸಿನ ಗುಟ್ಟು,” ಎಂದು ಹೇಳಿ ತರಬೇತಿ ಪಡೆದವರಿಗೆ ಶುಭ ಹಾರೈಸಿದರು.

*ಶಾಲೆಯ ಹೊಸ ಕಟ್ಟಡ ನಿರ್ಮಾಣಕ್ಕೆ 90 ಲಕ್ಷ ಅನುದಾನ’*

ವಿನೋಬಾ ನಗರದ ವೆಂಕಟೇಶಪುರದಲ್ಲಿನ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದರಿಂದ ಏಳನೇ ತರಗತಿವರೆಗೂ ಓದುತ್ತಿರುವ 170 ಮಕ್ಕಳು, ಶಾಲೆ ಹಾಗೂ ಪಕ್ಕದ ಮಸೀದಿಯಲ್ಲೂ ಪಾಠ ಕೇಳುತ್ತಿದ್ದಾರೆ ಎಂಬ ವಿಚಾರ ತಿಳಿದ ಸಚಿವ ಜಾರ್ಜ್ ಅವರು, ಶಾಲೆಗೆ ಹೊಸ ಕಟ್ಟಡದ ಅವಶ್ಯಕತೆ ಇರುವುದನ್ನು ಮನಗಂಡು, ಶೀಘ್ರವೇ ಶಾಲಾ ಕಟ್ಟದ ನಿರ್ಮಾಣಕ್ಕೆ ಸೂಚನೆ ನೀಡಿದರು. ಅಲ್ಲದೆ, ಶಾಲಾ ಕಟ್ಟಡ ನಿರ್ಮಾಣಕ್ಕೆ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ 90 ಲಕ್ಷ ರೂ. ಒದಗಿಸುವುದಾಗಿ ಘೋಷಿಸಿದರು.

ಎಂಬೆಸ್ಸಿ ಗಾಲ್ಫ್ ಲಿಂಕ್ಸ್ ಬಿಸಿನೆಸ್ ಪಾರ್ಕ್‌ನ ಸಿಎಸ್‌ಆರ್ ಅನುದಾನದಲ್ಲಿ ನಡೆಯುತ್ತಿರುವ ಭಾರತ್ ಮಾತಾ ಬಡಾವಣೆಯಲ್ಲಿನ ಅಂಗನವಾಡಿ ಕೇಂದ್ರಕ್ಕೆ ತೆರಳಿ ಪುಟ್ಟಮಕ್ಕಳಿಗೆ ಯಾವುದೇ ಸಮಸ್ಯೆಯಾಗದಂತೆ ನಡೆಸಲು ಅಗತ್ಯವಿರುವ ನೆರವು ನೀಡುವುದಾಗಿ ಭರವಸೆ ನೀಡಿದರು.

*ಮೆಟ್ರೋ ನಿಲ್ದಾಣ ಕಾಮಗಾರಿ ವೇಗಕ್ಕೂ ಸೂಚನೆ*

“ನಾನು ಬೆಂಗಳೂರು ಅಭಿವೃದ್ದಿ ಮಂತ್ರಿಯಾಗಿದ್ದಾಗ ಆರು ಎಕರೆ ಜಾಗ ನೀಡಿದ್ದೇನೆ. ಇಲ್ಲಿ ಸುಸಜ್ಜಿತ ಮೆಟ್ರೋ ನಿಲ್ದಾಣ ನಿರ್ಮಾಣವಾಗಬೇಕು ಸ್ಥಳೀಯ ಜನರಿಗೆ ಅನುಕೂಲ ಆಗಬೇಕು. ಇದೇ ನಮ್ಮ ಉದ್ದೇಶ. ಈಗ ಕ್ಷೇತ್ರದ ವೆಂಕಟೇಶಪುರ ಬಳಿ ಹಾಗೂ ನಾಗವಾರ ಮೆಟ್ರೋ ನಿಲ್ದಾಣಗಳ ಬಳಿ ನಡೆಯುತ್ತಿರುವ ರಸ್ತೆ, ಮಳೆ ನೀರಿನ ಚರಂಡಿ ಹಾಗೂ ಒಳಚರಂಡಿ ಕಾಮಗಾರಿಗಳನ್ನು ವೇಗವಾಗಿ ಮುಗಿಸಬೇಕು ಎಂದು ಸೂಚನೆ ನೀಡಿದರು.

ಮೆಟ್ರೋ ಕಾಮಗಾರಿಯಿಂದ ಹಾನಿಗೀಡಾದ ಮೂಲಸೌಕರ್ಯವನ್ನೂ ಸರಿಪಡಿಸುವಂತೆ ಸೂಚಿಸಿದ ಸಚಿವರು, ಕ್ಷೇತ್ರದ ರಸ್ತೆಗಳ ವೈಟ್‌ ಟಾಪಿಂಗ್ ಕಾಮಗಾರಿಯ ಮಾಹಿತಿ ಪಡೆದುಕೊಂಡು ಆದಷ್ಟು ಬೇಗ ಗುಣಮಟ್ಟದ ರಸ್ತೆ ಮಾಡುವಂತೆ ತಾಕೀತು ಮಾಡಿದರು.

ಸಚಿವ ಕೆ.ಜೆ.ಜಾರ್ಜ್ ಅವರ ಕ್ಷೇತ್ರ ಪರ್ಯಟನೆ ವೇಳೆ ಕೆ.ಜಿ.ಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸುಮಿತ್ರ ಮುನಿರಾಜು, ಹೆಣ್ಣೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್‌.ಎ. ಪುಲಿಕೇಶಿ ಹಾಗೂ ಅಮರ್‌ನಾಥ್, ವಾರ್ಡ್ ಅಧ್ಯಕ್ಷರುಗಳು ಮತ್ತು ಜಿಬಿಎ, ಬಿಡಬ್ಲ್ಯೂಎಸ್‌ಎಸ್‌ಬಿ, ಬೆಸ್ಕಾಂ, ಕೆಪಿಟಿಸಿಎಲ್ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

2 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

3 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

3 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

3 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

4 days ago