Categories: ಕೋಲಾರ

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್‌ ಯುವ ಘಟಕದ ಮಾಜಿ ಉಪಾಧ್ಯಕ್ಷ ಜನಪನಹಳ್ಳಿ ನವೀನ್‌ ಕುಮಾರ್ ವಾಗ್ದಾಳಿ ನಡೆಸಿದರು.

ತಾಲ್ಲೂಕಿನ ಜನಪನಹಳ್ಳಿಯ ಕಾಂಗ್ರೆಸ್ ಮುಖಂಡರೊಂದಿಗೆ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ದಡ್ಡರಲ್ಲ ತಾವು ಹೇಳಿದ ಮಾತನ್ನೂ ಕೇಳಿದ್ದಾರೆ. ಕೆ.ಆರ್‌.ರಮೇಶ್‌ ಕುಮಾರ್‌ ಏಕೆ ಈ ಯೋಜನೆ ಜಾರಿ ಮಾಡಿಸಿದರು ಎಂಬುದನ್ನೂ ನೋಡಿದ್ದಾರೆ. ಕೆ.ಸಿ.ವ್ಯಾಲಿ ಬರುವುದಕ್ಕೂ ಮುನ್ನ ಹಾಗೂ ಈಗ ಏನೆಲ್ಲಾ ಬದಲಾವಣೆ ಆಗಿದೆ ಎಂಬುದೂ ಗೊತ್ತಿದೆ ಎಂದರು‌.

ಶ್ರೀನಿವಾಸಪುರ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ, ಮುಖಂಡರಾದ ಶೇಷಾಪುರ ಗೋಪಾಲ್‌, ಕುಡುವನಹಳ್ಳಿ ಶ್ರೀನಿವಾಸ್‌ ಇತರೆ ಮುಖಂಡರು ವಾಸ್ತವ ಹರಿಯದೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.

ಕೆ.ಸಿ.ವ್ಯಾಲಿ ಬಂದ ಮೇಲೆ ಕೇವಲ 200 ರಿಂದ 300 ಅಡಿಗೆ ನೀರು ಸಿಗುತ್ತಿದೆ. ಕೆರೆ ಕಟ್ಟೆಗಳು ತುಂಬುಕೊಂಡಿವೆ. ತರಕಾರಿ ಯಥೇಚ್ಚವಾಗಿ ಬೆಳೆಯುತ್ತಿದ್ದಾರೆ. ಹೈನುಗಾರಿಕೆ ಸುಧಾರಿಸಿದೆ. ತೆಂಗು ಸರಿಗಳನ್ನು ನಾಟಿ ಮಾಡಲಾಗಿದೆ. ಒಣಗುತ್ತಿದ್ದ ಮರಗಳು ಚಿಗುರಿವೆ. ವಿಶ್ವಸಂಸ್ಥೆ ಮೆಚ್ಚುಗೆ ವ್ಯಕ್ತಪಡಿಸಿದೆ. ಕೇಂದ್ರ ಸರ್ಕಾರದವರು ರಾಜ್ಯಕ್ಕೆ ಪತ್ರ ಬರೆದು ಉಳಿದೆಡೆಯೂ ಈ ಯೋಜನೆ ಜಾರಿಗೆ ತರುವುದಾಗಿ ಹೇಳಿದ್ದಾರೆ. ಕೆಜಿಎಫ್‌ಗೆ ಭೇಟಿ ನೀಡಿದ್ದ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್‌ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಕೂಡ ಯೋಜನೆ ಬಗ್ಗೆ ಸಕಾರಾತ್ಮಕ ವರದಿ ನೀಡಿದೆ. ಆದರೆ, ವಿರೋಧ ಪಕ್ಷದವರು ಮಾತ್ರ ಯೋಜನೆಯನ್ನು ಅವೈಜ್ಞಾನಿಕ ಎಂದು ಹೇಳುತಾ ಜಿಲ್ಲೆಯ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಹರಿಹಾಯ್ದರು.

ಮಾಜಿ ಸಚಿವ ಕೆ.ಆರ್.ರಮೇಶ್‌ ಕುಮಾರ್‌ ಕೆ.ಸಿ.ವ್ಯಾಲಿ ಕಾಲುವೆ ವೀಕ್ಷಣೆ ಮಾಡಿ,‌ ಅಧಿಕಾರಿಗಳೊಂದಿಗೆ‌ ಮಾತನಾಡಿ ಸರ್ವೆಗೆ ಕ್ರಮವಹಿಸಿದ್ದಾರೆ. ಇಷ್ಟು ದಿನ ಸುಮ್ಮನಿದ್ದ ಜಿ.ಕೆ.ವೆಂಕಟಶಿವಾರೆಡ್ಡಿ ಈಗ ಎಚ್ಚರವಾಗಿ ಕಾಲುವೆ ವೀಕ್ಷಣೆ ಮಾಡಿ ಟೀಕಿಸಿದ್ದಾರೆ. ಅವರ ಜೊತೆಗಿದ್ದ ಕೆಲವರಂತೂ ರಮೇಶ್‌ ಕುಮಾರ್‌ ವಿರುದ್ಧ ಕೆಟ್ಟದಾಗಿ ಮಾತನಾಡಿದ್ದಾರೆ. ಇದನ್ನು ಖಂಡಿಸುತ್ತೇವೆ ಎಂದರು.

ಯೋಜನೆ ಜಾರಿ ಆಗುವಾಗ ರಮೇಶ್‌ ಕುಮಾರ್‌ ಜೊತೆಗಿದ್ದ ಶೇಷಾಪುರ ಗೋಪಾಲ್‌ ಆಗ ಏಕೆ ಸುಮ್ಮನಿದ್ದರು? ಈಗ ಏಕೆ ವಿರುದ್ಧವಾಗಿ ಮಾತನಾಡುತ್ತಿದ್ದಾರೆ? ರಮೇಶ್ ಕುಮಾರ್, ಅವರ ಪುತ್ರ, ಕುಟುಂಬದ ಬಗ್ಗೆ ಮಾತನಾಡದಿದ್ದರೆ ಅವರಿಗೆ ನಿದ್ದೆ ಬರುವುದಿಲ್ಲವೇ? ಸಾಕ್ಷಿ ಇಲ್ಲದೆ ಏನೇನೋ ಹೇಳಿತ್ತಿದ್ದಾರೆ. ವಿಚಾರ ತಿಳಿದು ಮಾತನಾಡಿಬೇಕು ಎಂದು ಹೇಳಿದರು.

ಹಿಂದೆ 400 ಕಿ.ಮೀ ದೂರ ಇರುವ ತಮಿಳುನಾಡಿಗೆ ನೀರು ವ್ಯರ್ಥವಾಗಿ ಹರಿದು ಹೋಗುತ್ತಿತ್ತು. ಆಗ ಅಲ್ಲಿನ ರೈತರು ಮೋಟಾರ್ ಇಟ್ಟು ನೀರು ತೆಗೆದುಕೊಂಡು ತರಕಾರಿ ಬೆಳೆದು ಬೆಂಗಳೂರಿಗೆ ಬಂದು ಮಾರಾಟ ಮಾಡುತ್ತಿದ್ದರು. ಆಗ ಯಾವುದೇ ಸಮಸ್ಯೆ ಇರಲಿಲ್ಲವೇ ಎಂದು ಪ್ರಶ್ನಿಸಿದರು

ಶೇಷಾಪುರ ಗೋಪಾಲ ಹಾಗೂ ಕುಡುವನಹಳ್ಳಿ ಶ್ರೀನಿವಾಸ್ ತಮ್ಮ ವೀರಾವೇಶ ಬಿಟ್ಟು ಬಿಡಬೇಕು . ರೈತರ ಬಗ್ಗೆ ಕಾಳಜಿ ಇದ್ದರೆ ಅವರ ಬಗ್ಗೆ ಗಮನ ಹರಿಸಲಿ ಎಂದರು.

ಕುಡುವನಹಳ್ಳಿ ಶ್ರೀನಿವಾಸ್ ಈ ಹಿಂದೆ ರಮೇಶ್ ‌ಕುಮಾರ್ ಜೊತೆ‌ ಇದ್ದಾಗ ಯಾವ ಟೆಂಡರ್ ಪಡೆದಿದ್ದರು ಎಂಬುದು ಗೊತ್ತಿದೆ. ರಮೇಶ್ ಕುಮಾರ್ ಹೆಸರು ಹಿಡಿದು ಮಾತನಾಡುವ ನೈತಿಕತೆ ಅವರಿಗೆ ಇದೆಯೇ? ಮಾತು ಹಿಡಿತದಲ್ಲಿ ಇರಲಿ ‌ಎಂದು ಎಚ್ಚರಿಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಸದಸ್ಯ ಎಂ.ವಿ ಶ್ರೀನಿವಾಸ್, ನಾಯಕರಹಳ್ಳಿ ಗ್ರಾ.ಪಂ ಸದಸ್ಯ ಪ್ರಭಾಕರ್, ಹೋಳೂರು ಗ್ರಾಪಂ ಸದಸ್ಯರಾದ ಎಚ್.ಬಿ ನಾರಾಯಣಸ್ವಾಮಿ, ವಾಣಿ.ಶ್ರೀನಿವಾಸ್, ವಾನರಾಶಿ ಸದಸ್ಯ ಶಿಲ್ಪ ವೆಂಕಟೇಶ್, ಮಾಜಿ ಗ್ರಾಪಂ ಅಧ್ಯಕ್ಷ ಶ್ರೀನಿವಾಸ್ ಮುಖಂಡರಾದ ಚಲಪತಿ, ಸುರೇಶ್, ಗೋಪಾಲಕೃಷ್ಣ, ಕೃಷ್ಣೇಗೌಡ, ಶ್ರೀರಾಮ್, ಗೋಪಾಲ್ ನಾರಾಯಣಸ್ವಾಮಿ, ವೆಂಕಟೇಶ್ ಇದ್ದರು.

Ramesh Babu

Journalist

Recent Posts

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

3 hours ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

4 hours ago

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

8 hours ago

ಅಭಿಮಾನಿಗಳ ಅತಿರೇಕ….ಯಾಕಪ್ಪಾ, ಏನಾಗಿದೆ ಸಮಸ್ಯೆ…?

ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…

9 hours ago

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

1 day ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

1 day ago