Categories: ಕೋಲಾರ

ಕೆ.ಸಿ ವ್ಯಾಲಿ 2ನೇ ಹಂತದ ಯೋಜನೆ: ಕೋಲಾರದ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಲೋಕಾರ್ಪಣೆ

ಕೆ.ಸಿ ವ್ಯಾಲಿ 2ನೇ ಹಂತದ ಯೋಜನೆಯಡಿ ಲಕ್ಷ್ಮೀ ಸಾಗರ ಪಂಪ್ ಹೌಸ್ ನಿಂದ ಕೋಲಾರ ಜಿಲ್ಲೆಯ ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಲೋಕಾರ್ಪಣೆಗೊಳಿಸಿದರು.

ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳ ಅಂತರ್ಜಲ ಅಭಿವೃದ್ಧಿಗೆ ನಾವು ಹಿಂದಿನ ಸಲ ಅಧಿಕಾರದಲ್ಲಿದ್ದಾಗ ಕೈಗೊಂಡ ಯೋಜನೆಗಳು ಈ ಭಾಗದ ರೈತರ ಜೀವನ ಮಟ್ಟವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ. 250ಕ್ಕೂ ಹೆಚ್ಚು ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ಪ್ರತಿನಿತ್ಯ ಹರಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕೆ.ಸಿ.ವ್ಯಾಲಿ ಎರಡನೇ ಹಂತದ ಯೋಜನೆಯಡಿ ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸಲಾಗುವುದು. ಮೊದಲನೇ ಹಂತದಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೋಲಾರ – ಚಿಕ್ಕಬಳ್ಳಾಪುರ ಕೆರೆಗಳನ್ನು ಯಶಸ್ವಿಯಾಗಿ ತುಂಬಿಸಲಾಗಿದೆ. ಈ ನೀರನ್ನು ಕುಡಿಯಲು ಬಳಸುವುದಿಲ್ಲ. ಕೆರೆ ತುಂಬಿಸಿದ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟ ಉತ್ತಮಗೊಂಡಿದೆ ಎಂದರು.

ಯೋಜನೆ ಬಗ್ಗೆ ಕೆಲವರು ಅಪಪ್ರಚಾರ ಮಾಡಿದರೂ, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂಬುದು ಈಗಾಗಲೇ ಸಾಬೀತಾಗಿದೆ. ಬೆಳೆಗಳಿಗೆ, ದನಕರುಗಳಿಗೆ ಯಾವುದೇ ತೊಂದರೆ ಇಲ್ಲ ಎಂದು ನಿರೂಪಿತವಾಗಿದೆ ಎಂದು ತಿಳಿಸಿದರು.

ಕೆ.ಸಿ.ವ್ಯಾಲಿ ಎರಡನೇ ಹಂತ ಡಿಸೆಂಬರ್‌ ಅಂತ್ಯದ ಒಳಗೆ ಪೂರ್ಣಗೊಳ್ಳಲಿದ್ದು, ಇದರಿಂದ 272 ಕೆರೆಗಳನ್ನು ತುಂಬಿಸಲು ಸಾಧ್ಯವಿದೆ. ಕೋಲಾರ, ಚಿಕ್ಕಬಳ್ಳಾಪುರ ಭಾಗದಲ್ಲಿ ನದಿಗಳಲಿಲ್ಲದೆ ಇರುವುದರಿಂದ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದ್ದು, ₹446 ಕೋಟಿಗಳ ವೆಚ್ಚದಲ್ಲಿ ಇದನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

Ramesh Babu

Journalist

Recent Posts

22 ವರ್ಷದ ಯುವಕ‌ ಮನೆಯಲ್ಲಿ ನೇಣಿಗೆ ಶರಣು

22 ವರ್ಷದ ಯುವಕ‌ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ‌ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…

23 minutes ago

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

11 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

11 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

15 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

17 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

20 hours ago