ಕೆ.ಸಿ ವ್ಯಾಲಿ 2ನೇ ಹಂತದ ಯೋಜನೆಯಡಿ ಲಕ್ಷ್ಮೀ ಸಾಗರ ಪಂಪ್ ಹೌಸ್ ನಿಂದ ಕೋಲಾರ ಜಿಲ್ಲೆಯ ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಲೋಕಾರ್ಪಣೆಗೊಳಿಸಿದರು.
ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳ ಅಂತರ್ಜಲ ಅಭಿವೃದ್ಧಿಗೆ ನಾವು ಹಿಂದಿನ ಸಲ ಅಧಿಕಾರದಲ್ಲಿದ್ದಾಗ ಕೈಗೊಂಡ ಯೋಜನೆಗಳು ಈ ಭಾಗದ ರೈತರ ಜೀವನ ಮಟ್ಟವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ. 250ಕ್ಕೂ ಹೆಚ್ಚು ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ಪ್ರತಿನಿತ್ಯ ಹರಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕೆ.ಸಿ.ವ್ಯಾಲಿ ಎರಡನೇ ಹಂತದ ಯೋಜನೆಯಡಿ ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸಲಾಗುವುದು. ಮೊದಲನೇ ಹಂತದಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೋಲಾರ – ಚಿಕ್ಕಬಳ್ಳಾಪುರ ಕೆರೆಗಳನ್ನು ಯಶಸ್ವಿಯಾಗಿ ತುಂಬಿಸಲಾಗಿದೆ. ಈ ನೀರನ್ನು ಕುಡಿಯಲು ಬಳಸುವುದಿಲ್ಲ. ಕೆರೆ ತುಂಬಿಸಿದ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟ ಉತ್ತಮಗೊಂಡಿದೆ ಎಂದರು.
ಯೋಜನೆ ಬಗ್ಗೆ ಕೆಲವರು ಅಪಪ್ರಚಾರ ಮಾಡಿದರೂ, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂಬುದು ಈಗಾಗಲೇ ಸಾಬೀತಾಗಿದೆ. ಬೆಳೆಗಳಿಗೆ, ದನಕರುಗಳಿಗೆ ಯಾವುದೇ ತೊಂದರೆ ಇಲ್ಲ ಎಂದು ನಿರೂಪಿತವಾಗಿದೆ ಎಂದು ತಿಳಿಸಿದರು.
ಕೆ.ಸಿ.ವ್ಯಾಲಿ ಎರಡನೇ ಹಂತ ಡಿಸೆಂಬರ್ ಅಂತ್ಯದ ಒಳಗೆ ಪೂರ್ಣಗೊಳ್ಳಲಿದ್ದು, ಇದರಿಂದ 272 ಕೆರೆಗಳನ್ನು ತುಂಬಿಸಲು ಸಾಧ್ಯವಿದೆ. ಕೋಲಾರ, ಚಿಕ್ಕಬಳ್ಳಾಪುರ ಭಾಗದಲ್ಲಿ ನದಿಗಳಲಿಲ್ಲದೆ ಇರುವುದರಿಂದ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದ್ದು, ₹446 ಕೋಟಿಗಳ ವೆಚ್ಚದಲ್ಲಿ ಇದನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…
ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ…