Categories: ಕೋಲಾರ

ಕೆ.ಸಿ ವ್ಯಾಲಿ 2ನೇ ಹಂತದ ಯೋಜನೆ: ಕೋಲಾರದ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಲೋಕಾರ್ಪಣೆ

ಕೆ.ಸಿ ವ್ಯಾಲಿ 2ನೇ ಹಂತದ ಯೋಜನೆಯಡಿ ಲಕ್ಷ್ಮೀ ಸಾಗರ ಪಂಪ್ ಹೌಸ್ ನಿಂದ ಕೋಲಾರ ಜಿಲ್ಲೆಯ ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಲೋಕಾರ್ಪಣೆಗೊಳಿಸಿದರು.

ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳ ಅಂತರ್ಜಲ ಅಭಿವೃದ್ಧಿಗೆ ನಾವು ಹಿಂದಿನ ಸಲ ಅಧಿಕಾರದಲ್ಲಿದ್ದಾಗ ಕೈಗೊಂಡ ಯೋಜನೆಗಳು ಈ ಭಾಗದ ರೈತರ ಜೀವನ ಮಟ್ಟವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ. 250ಕ್ಕೂ ಹೆಚ್ಚು ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ಪ್ರತಿನಿತ್ಯ ಹರಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕೆ.ಸಿ.ವ್ಯಾಲಿ ಎರಡನೇ ಹಂತದ ಯೋಜನೆಯಡಿ ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸಲಾಗುವುದು. ಮೊದಲನೇ ಹಂತದಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೋಲಾರ – ಚಿಕ್ಕಬಳ್ಳಾಪುರ ಕೆರೆಗಳನ್ನು ಯಶಸ್ವಿಯಾಗಿ ತುಂಬಿಸಲಾಗಿದೆ. ಈ ನೀರನ್ನು ಕುಡಿಯಲು ಬಳಸುವುದಿಲ್ಲ. ಕೆರೆ ತುಂಬಿಸಿದ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟ ಉತ್ತಮಗೊಂಡಿದೆ ಎಂದರು.

ಯೋಜನೆ ಬಗ್ಗೆ ಕೆಲವರು ಅಪಪ್ರಚಾರ ಮಾಡಿದರೂ, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂಬುದು ಈಗಾಗಲೇ ಸಾಬೀತಾಗಿದೆ. ಬೆಳೆಗಳಿಗೆ, ದನಕರುಗಳಿಗೆ ಯಾವುದೇ ತೊಂದರೆ ಇಲ್ಲ ಎಂದು ನಿರೂಪಿತವಾಗಿದೆ ಎಂದು ತಿಳಿಸಿದರು.

ಕೆ.ಸಿ.ವ್ಯಾಲಿ ಎರಡನೇ ಹಂತ ಡಿಸೆಂಬರ್‌ ಅಂತ್ಯದ ಒಳಗೆ ಪೂರ್ಣಗೊಳ್ಳಲಿದ್ದು, ಇದರಿಂದ 272 ಕೆರೆಗಳನ್ನು ತುಂಬಿಸಲು ಸಾಧ್ಯವಿದೆ. ಕೋಲಾರ, ಚಿಕ್ಕಬಳ್ಳಾಪುರ ಭಾಗದಲ್ಲಿ ನದಿಗಳಲಿಲ್ಲದೆ ಇರುವುದರಿಂದ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದ್ದು, ₹446 ಕೋಟಿಗಳ ವೆಚ್ಚದಲ್ಲಿ ಇದನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

4 hours ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

1 day ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

2 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

2 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

3 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

3 days ago