ಕೆ.ಹೆಚ್.ಮುನಿಯಪ್ಪ ಗೆಲುವನ್ನು ಸಂಭ್ರಮಿಸಿದ ತೂಬಗೆರೆ ಬ್ಲಾಕ್ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು: ಘಾಟಿ ಕ್ಷೇತ್ರದಲ್ಲಿ ಸಾವಿರದ ಒಂದು ತೆಂಗಿನ ಕಾಯಿ ಹೊಡೆದು ಹರಕೆ ತೀರಿಸಿ ಸಂಭ್ರಮ

 

2023ರ ವಿಧಾನಸಭಾ ಚುನಾವಣೆಯಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಹೆಚ್.ಮುನಿಯಪ್ಪ ಗೆಲುವು ಸಾಧಿಸಿ ನೂತನವಾಗಿ ಶಾಸಕರಾಗಿ ಆಯ್ಕೆ ಆಗಿರುವ ಹಿನ್ನೆಲೆ ಕಾರ್ಯಕರ್ತರು, ಮುಖಂಡರ ಸಂಭ್ರಮ ಮುಗಿಲು ಮುಟ್ಟಿತ್ತು.

ಇಂದು ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಪುನಸ್ಕಾರ ನೆರವೇರಿಸಿ‌ ನಂತರ ಗೋಪುರದ ಬಳಿ ಕೆ.ಎಚ್.ಮುನಿಯಪ್ಪ ಹೆಸರಲ್ಲಿ 1001 ತೆಂಗಿನಕಾಯಿ ಹೊಡೆದು ಹರಕೆ ತೀರಿಸಿದ‌ ತೂಬಗೆರೆ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು.

ದಲಿತ ಸಿಎಂ ಅಥವಾ ಡಿಸಿಎಂ ಬೇಡಿಕೆ

ರಾಜ್ಯದಲ್ಲಿ ಸುಮಾರು ಒಂದೂವರೆ ಕೋಟಿ ದಲಿತರಿದ್ದು, ಮುಂದುವರಿದ ಹಲವಾರು ಸಮುದಾಯಗಳು ಮತ್ತು ತೀರ ಕಡಿಮೆ ಜನಸಂಖ್ಯೆ ಹೊಂದಿರುವ ಸಮುದಾಯಗಳಿಗೂ ಮುಖ್ಯಮಂತ್ರಿ ಸ್ಥಾನ ಲಭಿಸಿದ್ದು, ರಾಜ್ಯದ ಜನಸಂಖ್ಯೆಯ‌ ಶೇ.25ರಷ್ಟು ಇರುವ ದಲಿತ ಸಮುದಾಯಕ್ಕೆ ಈ ಬಾರಿ ಕಾಂಗ್ರೆಸ್ ಪಕ್ಷ ಕೆ.ಹೆಚ್.ಮುನಿಯಪ್ಪ ಅವರಿಗೆ ಸಿಎಂ ಅಥವಾ ಡಿಸಿಎಂ ಸ್ಥಾನವನ್ನು ನೀಡುವುದರ ಮೂಲಕ ಸಾಮಾಜಿಕ ನ್ಯಾಯ ಪಾಲಿಸಬೇಕು ಎಂದು ತೂಬಗೆರೆ ಬ್ಲಾಕ್ ಕಾಂಗ್ರೆಸ್ ಮುಖಂಡರು ಒತ್ತಾಯಿಸಿದರು.

ಸ್ವಾತಂತ್ರ್ಯ ಬಂದಾಗಿನಿಂದಲೂ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದ ಯಾವುದೇ ಜನಪ್ರತಿನಿಧಿಗಳಿಗೂ ಸರ್ಕಾರದಲ್ಲಿ ಸಚಿವ ಸ್ಥಾನ ಸಿಕ್ಕಲ್ಲ. ಈ ಬಾರಿ ಕೆ.ಹೆಚ್.ಮುನಿಯಪ್ಪ ವಿಜಯ ಸಾಧಿಸಿರುವುದರಿಂದ ಕಾಂಗ್ರೆಸ್ ಪಕ್ಷ ಸರ್ಕಾರ ರಚನೆ ಮಾಡಲಿದ್ದು, ಕ್ಷೇತ್ರಕ್ಕೆ ಮೊದಲ ಬಾರಿ ಸಚಿವ ಸ್ಥಾನ ಲಭಿಸುವ ಅವಕಾಶ ನಿಚ್ಚಳವಾಗಿದ್ದು, ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳು, ಅಭಿವೃದ್ಧಿ ಕಾರ್ಯಗಳು ದೊರೆಯುವ ನಿರೀಕ್ಷೆಯಲ್ಲಿದ್ದೇವೆ ಎಂದರು.

ಈ ವೇಳೆ ಮಾಜಿ ಶಾಸಕ ಜೆ.ನರಸಿಂಹಸ್ವಾಮಿ, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ‌ ಎನ್.ರಂಗಪ್ಪ‌, ಕೆಪಿಸಿಸಿ ಸದಸ್ಯ ಎಸ್.ಆರ್.ಮುನಿರಾಜು,ಘಾಟಿ ಪಂಚಾಯ್ತಿ ಅಧ್ಯಕ್ಷೆ ಭಾರತೀಬಾಯಿ‌ ಪ್ರಸಾದ್, ಮುಖಂಡರಾದ ಗೋಪಾಲನಾಯ್ಕ್, ಆರ್.ವಿ.ಮಹೇಶ್, ರಾಮಕೃಷ್ಣಪ್ಪ, ಅರವಿಂದ್, ಕೃಷ್ಣನಾಯ್ಕ್, ಪ್ರಸಾದ್, ಶ್ರೀಧರ್, ವಸಂತಕುಮಾರ್, ಘಾಟಿ ಪಂಚಾಯ್ತಿ ಸದಸ್ಯ ಮುನಿರಾಜು ಇತರರು ಇದ್ದರು.

Ramesh Babu

Journalist

Recent Posts

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

8 hours ago

ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…

9 hours ago

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

21 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

24 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

1 day ago