2023ರ ವಿಧಾನಸಭಾ ಚುನಾವಣೆಯಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಹೆಚ್.ಮುನಿಯಪ್ಪ ಗೆಲುವು ಸಾಧಿಸಿ ನೂತನವಾಗಿ ಶಾಸಕರಾಗಿ ಆಯ್ಕೆ ಆಗಿರುವ ಹಿನ್ನೆಲೆ ಕಾರ್ಯಕರ್ತರು, ಮುಖಂಡರ ಸಂಭ್ರಮ ಮುಗಿಲು ಮುಟ್ಟಿತ್ತು.
ಇಂದು ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಪುನಸ್ಕಾರ ನೆರವೇರಿಸಿ ನಂತರ ಗೋಪುರದ ಬಳಿ ಕೆ.ಎಚ್.ಮುನಿಯಪ್ಪ ಹೆಸರಲ್ಲಿ 1001 ತೆಂಗಿನಕಾಯಿ ಹೊಡೆದು ಹರಕೆ ತೀರಿಸಿದ ತೂಬಗೆರೆ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು.
ದಲಿತ ಸಿಎಂ ಅಥವಾ ಡಿಸಿಎಂ ಬೇಡಿಕೆ
ರಾಜ್ಯದಲ್ಲಿ ಸುಮಾರು ಒಂದೂವರೆ ಕೋಟಿ ದಲಿತರಿದ್ದು, ಮುಂದುವರಿದ ಹಲವಾರು ಸಮುದಾಯಗಳು ಮತ್ತು ತೀರ ಕಡಿಮೆ ಜನಸಂಖ್ಯೆ ಹೊಂದಿರುವ ಸಮುದಾಯಗಳಿಗೂ ಮುಖ್ಯಮಂತ್ರಿ ಸ್ಥಾನ ಲಭಿಸಿದ್ದು, ರಾಜ್ಯದ ಜನಸಂಖ್ಯೆಯ ಶೇ.25ರಷ್ಟು ಇರುವ ದಲಿತ ಸಮುದಾಯಕ್ಕೆ ಈ ಬಾರಿ ಕಾಂಗ್ರೆಸ್ ಪಕ್ಷ ಕೆ.ಹೆಚ್.ಮುನಿಯಪ್ಪ ಅವರಿಗೆ ಸಿಎಂ ಅಥವಾ ಡಿಸಿಎಂ ಸ್ಥಾನವನ್ನು ನೀಡುವುದರ ಮೂಲಕ ಸಾಮಾಜಿಕ ನ್ಯಾಯ ಪಾಲಿಸಬೇಕು ಎಂದು ತೂಬಗೆರೆ ಬ್ಲಾಕ್ ಕಾಂಗ್ರೆಸ್ ಮುಖಂಡರು ಒತ್ತಾಯಿಸಿದರು.
ಸ್ವಾತಂತ್ರ್ಯ ಬಂದಾಗಿನಿಂದಲೂ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದ ಯಾವುದೇ ಜನಪ್ರತಿನಿಧಿಗಳಿಗೂ ಸರ್ಕಾರದಲ್ಲಿ ಸಚಿವ ಸ್ಥಾನ ಸಿಕ್ಕಲ್ಲ. ಈ ಬಾರಿ ಕೆ.ಹೆಚ್.ಮುನಿಯಪ್ಪ ವಿಜಯ ಸಾಧಿಸಿರುವುದರಿಂದ ಕಾಂಗ್ರೆಸ್ ಪಕ್ಷ ಸರ್ಕಾರ ರಚನೆ ಮಾಡಲಿದ್ದು, ಕ್ಷೇತ್ರಕ್ಕೆ ಮೊದಲ ಬಾರಿ ಸಚಿವ ಸ್ಥಾನ ಲಭಿಸುವ ಅವಕಾಶ ನಿಚ್ಚಳವಾಗಿದ್ದು, ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳು, ಅಭಿವೃದ್ಧಿ ಕಾರ್ಯಗಳು ದೊರೆಯುವ ನಿರೀಕ್ಷೆಯಲ್ಲಿದ್ದೇವೆ ಎಂದರು.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…