ಕೆ.ಹೆಚ್.ಮುನಿಯಪ್ಪ ಗೆಲುವನ್ನು ಸಂಭ್ರಮಿಸಿದ ತೂಬಗೆರೆ ಬ್ಲಾಕ್ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು: ಘಾಟಿ ಕ್ಷೇತ್ರದಲ್ಲಿ ಸಾವಿರದ ಒಂದು ತೆಂಗಿನ ಕಾಯಿ ಹೊಡೆದು ಹರಕೆ ತೀರಿಸಿ ಸಂಭ್ರಮ

 

2023ರ ವಿಧಾನಸಭಾ ಚುನಾವಣೆಯಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಹೆಚ್.ಮುನಿಯಪ್ಪ ಗೆಲುವು ಸಾಧಿಸಿ ನೂತನವಾಗಿ ಶಾಸಕರಾಗಿ ಆಯ್ಕೆ ಆಗಿರುವ ಹಿನ್ನೆಲೆ ಕಾರ್ಯಕರ್ತರು, ಮುಖಂಡರ ಸಂಭ್ರಮ ಮುಗಿಲು ಮುಟ್ಟಿತ್ತು.

ಇಂದು ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಪುನಸ್ಕಾರ ನೆರವೇರಿಸಿ‌ ನಂತರ ಗೋಪುರದ ಬಳಿ ಕೆ.ಎಚ್.ಮುನಿಯಪ್ಪ ಹೆಸರಲ್ಲಿ 1001 ತೆಂಗಿನಕಾಯಿ ಹೊಡೆದು ಹರಕೆ ತೀರಿಸಿದ‌ ತೂಬಗೆರೆ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು.

ದಲಿತ ಸಿಎಂ ಅಥವಾ ಡಿಸಿಎಂ ಬೇಡಿಕೆ

ರಾಜ್ಯದಲ್ಲಿ ಸುಮಾರು ಒಂದೂವರೆ ಕೋಟಿ ದಲಿತರಿದ್ದು, ಮುಂದುವರಿದ ಹಲವಾರು ಸಮುದಾಯಗಳು ಮತ್ತು ತೀರ ಕಡಿಮೆ ಜನಸಂಖ್ಯೆ ಹೊಂದಿರುವ ಸಮುದಾಯಗಳಿಗೂ ಮುಖ್ಯಮಂತ್ರಿ ಸ್ಥಾನ ಲಭಿಸಿದ್ದು, ರಾಜ್ಯದ ಜನಸಂಖ್ಯೆಯ‌ ಶೇ.25ರಷ್ಟು ಇರುವ ದಲಿತ ಸಮುದಾಯಕ್ಕೆ ಈ ಬಾರಿ ಕಾಂಗ್ರೆಸ್ ಪಕ್ಷ ಕೆ.ಹೆಚ್.ಮುನಿಯಪ್ಪ ಅವರಿಗೆ ಸಿಎಂ ಅಥವಾ ಡಿಸಿಎಂ ಸ್ಥಾನವನ್ನು ನೀಡುವುದರ ಮೂಲಕ ಸಾಮಾಜಿಕ ನ್ಯಾಯ ಪಾಲಿಸಬೇಕು ಎಂದು ತೂಬಗೆರೆ ಬ್ಲಾಕ್ ಕಾಂಗ್ರೆಸ್ ಮುಖಂಡರು ಒತ್ತಾಯಿಸಿದರು.

ಸ್ವಾತಂತ್ರ್ಯ ಬಂದಾಗಿನಿಂದಲೂ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದ ಯಾವುದೇ ಜನಪ್ರತಿನಿಧಿಗಳಿಗೂ ಸರ್ಕಾರದಲ್ಲಿ ಸಚಿವ ಸ್ಥಾನ ಸಿಕ್ಕಲ್ಲ. ಈ ಬಾರಿ ಕೆ.ಹೆಚ್.ಮುನಿಯಪ್ಪ ವಿಜಯ ಸಾಧಿಸಿರುವುದರಿಂದ ಕಾಂಗ್ರೆಸ್ ಪಕ್ಷ ಸರ್ಕಾರ ರಚನೆ ಮಾಡಲಿದ್ದು, ಕ್ಷೇತ್ರಕ್ಕೆ ಮೊದಲ ಬಾರಿ ಸಚಿವ ಸ್ಥಾನ ಲಭಿಸುವ ಅವಕಾಶ ನಿಚ್ಚಳವಾಗಿದ್ದು, ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳು, ಅಭಿವೃದ್ಧಿ ಕಾರ್ಯಗಳು ದೊರೆಯುವ ನಿರೀಕ್ಷೆಯಲ್ಲಿದ್ದೇವೆ ಎಂದರು.

ಈ ವೇಳೆ ಮಾಜಿ ಶಾಸಕ ಜೆ.ನರಸಿಂಹಸ್ವಾಮಿ, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ‌ ಎನ್.ರಂಗಪ್ಪ‌, ಕೆಪಿಸಿಸಿ ಸದಸ್ಯ ಎಸ್.ಆರ್.ಮುನಿರಾಜು,ಘಾಟಿ ಪಂಚಾಯ್ತಿ ಅಧ್ಯಕ್ಷೆ ಭಾರತೀಬಾಯಿ‌ ಪ್ರಸಾದ್, ಮುಖಂಡರಾದ ಗೋಪಾಲನಾಯ್ಕ್, ಆರ್.ವಿ.ಮಹೇಶ್, ರಾಮಕೃಷ್ಣಪ್ಪ, ಅರವಿಂದ್, ಕೃಷ್ಣನಾಯ್ಕ್, ಪ್ರಸಾದ್, ಶ್ರೀಧರ್, ವಸಂತಕುಮಾರ್, ಘಾಟಿ ಪಂಚಾಯ್ತಿ ಸದಸ್ಯ ಮುನಿರಾಜು ಇತರರು ಇದ್ದರು.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

5 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

5 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

6 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

7 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

10 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

10 hours ago