2023ರ ವಿಧಾನಸಭಾ ಚುನಾವಣೆಯಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಹೆಚ್.ಮುನಿಯಪ್ಪ ಗೆಲುವು ಸಾಧಿಸಿ ನೂತನವಾಗಿ ಶಾಸಕರಾಗಿ ಆಯ್ಕೆ ಆಗಿರುವ ಹಿನ್ನೆಲೆ ಕಾರ್ಯಕರ್ತರು, ಮುಖಂಡರ ಸಂಭ್ರಮ ಮುಗಿಲು ಮುಟ್ಟಿತ್ತು.
ಇಂದು ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಪುನಸ್ಕಾರ ನೆರವೇರಿಸಿ ನಂತರ ಗೋಪುರದ ಬಳಿ ಕೆ.ಎಚ್.ಮುನಿಯಪ್ಪ ಹೆಸರಲ್ಲಿ 1001 ತೆಂಗಿನಕಾಯಿ ಹೊಡೆದು ಹರಕೆ ತೀರಿಸಿದ ತೂಬಗೆರೆ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು.
ದಲಿತ ಸಿಎಂ ಅಥವಾ ಡಿಸಿಎಂ ಬೇಡಿಕೆ
ರಾಜ್ಯದಲ್ಲಿ ಸುಮಾರು ಒಂದೂವರೆ ಕೋಟಿ ದಲಿತರಿದ್ದು, ಮುಂದುವರಿದ ಹಲವಾರು ಸಮುದಾಯಗಳು ಮತ್ತು ತೀರ ಕಡಿಮೆ ಜನಸಂಖ್ಯೆ ಹೊಂದಿರುವ ಸಮುದಾಯಗಳಿಗೂ ಮುಖ್ಯಮಂತ್ರಿ ಸ್ಥಾನ ಲಭಿಸಿದ್ದು, ರಾಜ್ಯದ ಜನಸಂಖ್ಯೆಯ ಶೇ.25ರಷ್ಟು ಇರುವ ದಲಿತ ಸಮುದಾಯಕ್ಕೆ ಈ ಬಾರಿ ಕಾಂಗ್ರೆಸ್ ಪಕ್ಷ ಕೆ.ಹೆಚ್.ಮುನಿಯಪ್ಪ ಅವರಿಗೆ ಸಿಎಂ ಅಥವಾ ಡಿಸಿಎಂ ಸ್ಥಾನವನ್ನು ನೀಡುವುದರ ಮೂಲಕ ಸಾಮಾಜಿಕ ನ್ಯಾಯ ಪಾಲಿಸಬೇಕು ಎಂದು ತೂಬಗೆರೆ ಬ್ಲಾಕ್ ಕಾಂಗ್ರೆಸ್ ಮುಖಂಡರು ಒತ್ತಾಯಿಸಿದರು.
ಸ್ವಾತಂತ್ರ್ಯ ಬಂದಾಗಿನಿಂದಲೂ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದ ಯಾವುದೇ ಜನಪ್ರತಿನಿಧಿಗಳಿಗೂ ಸರ್ಕಾರದಲ್ಲಿ ಸಚಿವ ಸ್ಥಾನ ಸಿಕ್ಕಲ್ಲ. ಈ ಬಾರಿ ಕೆ.ಹೆಚ್.ಮುನಿಯಪ್ಪ ವಿಜಯ ಸಾಧಿಸಿರುವುದರಿಂದ ಕಾಂಗ್ರೆಸ್ ಪಕ್ಷ ಸರ್ಕಾರ ರಚನೆ ಮಾಡಲಿದ್ದು, ಕ್ಷೇತ್ರಕ್ಕೆ ಮೊದಲ ಬಾರಿ ಸಚಿವ ಸ್ಥಾನ ಲಭಿಸುವ ಅವಕಾಶ ನಿಚ್ಚಳವಾಗಿದ್ದು, ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳು, ಅಭಿವೃದ್ಧಿ ಕಾರ್ಯಗಳು ದೊರೆಯುವ ನಿರೀಕ್ಷೆಯಲ್ಲಿದ್ದೇವೆ ಎಂದರು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…