ಕೆ.ಹೆಚ್.ಮುನಿಯಪ್ಪ ಗೆಲುವನ್ನು ಸಂಭ್ರಮಿಸಿದ ತೂಬಗೆರೆ ಬ್ಲಾಕ್ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು: ಘಾಟಿ ಕ್ಷೇತ್ರದಲ್ಲಿ ಸಾವಿರದ ಒಂದು ತೆಂಗಿನ ಕಾಯಿ ಹೊಡೆದು ಹರಕೆ ತೀರಿಸಿ ಸಂಭ್ರಮ

 

2023ರ ವಿಧಾನಸಭಾ ಚುನಾವಣೆಯಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಹೆಚ್.ಮುನಿಯಪ್ಪ ಗೆಲುವು ಸಾಧಿಸಿ ನೂತನವಾಗಿ ಶಾಸಕರಾಗಿ ಆಯ್ಕೆ ಆಗಿರುವ ಹಿನ್ನೆಲೆ ಕಾರ್ಯಕರ್ತರು, ಮುಖಂಡರ ಸಂಭ್ರಮ ಮುಗಿಲು ಮುಟ್ಟಿತ್ತು.

ಇಂದು ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಪುನಸ್ಕಾರ ನೆರವೇರಿಸಿ‌ ನಂತರ ಗೋಪುರದ ಬಳಿ ಕೆ.ಎಚ್.ಮುನಿಯಪ್ಪ ಹೆಸರಲ್ಲಿ 1001 ತೆಂಗಿನಕಾಯಿ ಹೊಡೆದು ಹರಕೆ ತೀರಿಸಿದ‌ ತೂಬಗೆರೆ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು.

ದಲಿತ ಸಿಎಂ ಅಥವಾ ಡಿಸಿಎಂ ಬೇಡಿಕೆ

ರಾಜ್ಯದಲ್ಲಿ ಸುಮಾರು ಒಂದೂವರೆ ಕೋಟಿ ದಲಿತರಿದ್ದು, ಮುಂದುವರಿದ ಹಲವಾರು ಸಮುದಾಯಗಳು ಮತ್ತು ತೀರ ಕಡಿಮೆ ಜನಸಂಖ್ಯೆ ಹೊಂದಿರುವ ಸಮುದಾಯಗಳಿಗೂ ಮುಖ್ಯಮಂತ್ರಿ ಸ್ಥಾನ ಲಭಿಸಿದ್ದು, ರಾಜ್ಯದ ಜನಸಂಖ್ಯೆಯ‌ ಶೇ.25ರಷ್ಟು ಇರುವ ದಲಿತ ಸಮುದಾಯಕ್ಕೆ ಈ ಬಾರಿ ಕಾಂಗ್ರೆಸ್ ಪಕ್ಷ ಕೆ.ಹೆಚ್.ಮುನಿಯಪ್ಪ ಅವರಿಗೆ ಸಿಎಂ ಅಥವಾ ಡಿಸಿಎಂ ಸ್ಥಾನವನ್ನು ನೀಡುವುದರ ಮೂಲಕ ಸಾಮಾಜಿಕ ನ್ಯಾಯ ಪಾಲಿಸಬೇಕು ಎಂದು ತೂಬಗೆರೆ ಬ್ಲಾಕ್ ಕಾಂಗ್ರೆಸ್ ಮುಖಂಡರು ಒತ್ತಾಯಿಸಿದರು.

ಸ್ವಾತಂತ್ರ್ಯ ಬಂದಾಗಿನಿಂದಲೂ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದ ಯಾವುದೇ ಜನಪ್ರತಿನಿಧಿಗಳಿಗೂ ಸರ್ಕಾರದಲ್ಲಿ ಸಚಿವ ಸ್ಥಾನ ಸಿಕ್ಕಲ್ಲ. ಈ ಬಾರಿ ಕೆ.ಹೆಚ್.ಮುನಿಯಪ್ಪ ವಿಜಯ ಸಾಧಿಸಿರುವುದರಿಂದ ಕಾಂಗ್ರೆಸ್ ಪಕ್ಷ ಸರ್ಕಾರ ರಚನೆ ಮಾಡಲಿದ್ದು, ಕ್ಷೇತ್ರಕ್ಕೆ ಮೊದಲ ಬಾರಿ ಸಚಿವ ಸ್ಥಾನ ಲಭಿಸುವ ಅವಕಾಶ ನಿಚ್ಚಳವಾಗಿದ್ದು, ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳು, ಅಭಿವೃದ್ಧಿ ಕಾರ್ಯಗಳು ದೊರೆಯುವ ನಿರೀಕ್ಷೆಯಲ್ಲಿದ್ದೇವೆ ಎಂದರು.

ಈ ವೇಳೆ ಮಾಜಿ ಶಾಸಕ ಜೆ.ನರಸಿಂಹಸ್ವಾಮಿ, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ‌ ಎನ್.ರಂಗಪ್ಪ‌, ಕೆಪಿಸಿಸಿ ಸದಸ್ಯ ಎಸ್.ಆರ್.ಮುನಿರಾಜು,ಘಾಟಿ ಪಂಚಾಯ್ತಿ ಅಧ್ಯಕ್ಷೆ ಭಾರತೀಬಾಯಿ‌ ಪ್ರಸಾದ್, ಮುಖಂಡರಾದ ಗೋಪಾಲನಾಯ್ಕ್, ಆರ್.ವಿ.ಮಹೇಶ್, ರಾಮಕೃಷ್ಣಪ್ಪ, ಅರವಿಂದ್, ಕೃಷ್ಣನಾಯ್ಕ್, ಪ್ರಸಾದ್, ಶ್ರೀಧರ್, ವಸಂತಕುಮಾರ್, ಘಾಟಿ ಪಂಚಾಯ್ತಿ ಸದಸ್ಯ ಮುನಿರಾಜು ಇತರರು ಇದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

10 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

10 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago