Categories: ರಾಜ್ಯ

ಕೇಂದ್ರದಲ್ಲೂ ಅಧಿಕಾರಕ್ಕೆ ಬಂದು ಗೊಬ್ಬರ ಬೆಲೆ ಕಡಿಮೆ ಮಾಡುತ್ತೇವೆ- ಸಿಎಂ ಸಿದ್ದರಾಮಯ್ಯ

ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕೇಂದ್ರದಲ್ಲೂ ಅಧಿಕಾರಕ್ಕೆ ಬರುತ್ತೆವೆ. ಅಧಿಕಾರಕ್ಕೆ ಬಂದ ತಕ್ಷಣ ರಸ ಗೊಬ್ಬರದ ಬೆಲೆ ಕಡಿಮೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವರುಣಾ ಕ್ಷೇತ್ರದಲ್ಲಿ ಸಿಎಂ‌ ಸಿದ್ದರಾಮಯ್ಯ ಆಯೋಜಿಸಿದ್ದ ಕಾರ್ಯಕರ್ತರು, ಮುಖಂಡರಿಗೆ ಆಯೋಜಿಸಿದ್ದ ಕೃತಜ್ಞತಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಅವರು, ಈ ಬಾರಿ ಮೋದಿ ಅವರು ಸೋಲುತ್ತಾರೆ ಎಂದು ಭವಿಷ್ಯ ನುಡಿದರು.

ನಾವು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಕ್ಷಣ ಗೊಬ್ಬರದ ಬೆಲೆ, ಪೆಟ್ರೋಲ್, ಡೀಸೆಲ್‌, ಗ್ಯಾಸ್ ಬೆಲೆ ಕಡಿಮೆ ಮಾಡುತ್ತೇವೆ ಎಂದು ಭರವಸೆ ಮಾತುಗಳ್ನಾಡಿದರು.

ರಾಜ್ಯ ಬಿಜೆಪಿಯಲ್ಲಿ ತಾಂಡವಾಡುತ್ತಿರುವ ಭ್ರಷ್ಟಾಚಾರ

ರಾಜ್ಯದ ಬಿಜೆಪಿಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿತ್ತು. ಬಿಜೆಪಿಯ ದುರಾಡಳಿತದಿಂದ ಜನ ಬದಲಾವಣೆ ಬಯಸಿದ್ದರು. ಆದ್ದರಿಂದ ಜಿಜೆಪಿಯನ್ನ ಸೋಲಿಸಿ ಕಾಂಗ್ರೆಸ್ ನ್ನ ಗೆಲ್ಲಿಸಿದ್ದಕ್ಕೆ ಧನ್ಯವಾದ ಎಂದರು.

ಇದು ನನ್ನ ಕೊನೆ ಚುನಾವಣೆ

ಮತ್ತೆ ನಾನು ಚುನಾವಣೆಗೆ ನಿಲ್ಲೋದಿಲ್ಲ, ವೇದಿಕೆ ಭಾಷಣದ ವೇಳೆ ಚುನಾವಣೆ ನಿವೃತ್ತಿ ಬಗ್ಗೆ ಹೇಳಿಕೆ ನೀಡಿರುವ ಸಿಎಂ ಸಿದ್ದರಾಮಯ್ಯ.

ನುಡಿದಂತೆ ನಡೆದಿದ್ದೇನೆ: ಕೊಟ್ಟ ಭರವಸೆ ಈಡೇರಿಸಿದ್ದೇನೆ

ಈ ಹಿಂದೆ 160 ಭರವಸೆಗಳನ್ನ ನೀಡಿದ್ದೆ, ಅದರಲ್ಲಿ 158 ಭರವಸೆ ಈಡೇರಿಸಿ ನುಡಿದಂತೆ ನಡೆದಿದ್ದೇನೆ. ಆದರೆ ಬಿಜೆಪಿಯವರು ವಚನ ಭ್ರಷ್ಟರು ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು. ದೇವರಾಜು ಅರಸ್ 5 ವರ್ಷ ಸಂಪೂರ್ಣ ಆಡಳಿತ ನೀಡಿದ್ದರು. ಅವರ ಬಳಿಕ ಈ ನಿಮ್ಮ ಸಿದ್ದರಾಮಯ್ಯ ಮಾತ್ರ 5 ವರ್ಷ ಆಡಳಿತ ಮಾಡುತ್ತಿರುವುದು.

ಸಿಎಂ ಕುರ್ಚಿ ಸುಖದ ಸುಪ್ಪತ್ತಿಗೆ ಇರೋ ಕುರ್ಚಿ ಅಲ್ಲ ಜನ ಸೇವೆ ಮಾಡೋ ಕುರ್ಚಿ. 5 ಭರವಸೆ ಈಡೇರಿಸಿದರೆ ನಮಗೆ ಖರ್ಚಾಗುವಂತದ್ದು 59 ಸಾವಿರ ಕೋಟಿ. ಮೋದಿ ಹೇಳಿದ್ರು ಕಾಂಗ್ರೆಸ್ ಕೊಟ್ಟಿರೋ ಭರವಸೆ ಈಡೇರಿಸಲು ಸಾಧ್ಯವಿಲ್ಲ. ರಾಜ್ಯ ದಿವಾಳಿ ಆಗತ್ತೆ ಎಂದು ಹೇಳಿದ್ದರು. ಆದರೆ ನಾನು ಅವರಿಂದ ನಿರೀಕ್ಷೆ ಮಾಡಿದ್ದೆ ಕಾಂಗ್ರೆಸ್ ಕೊಟ್ಟ ಭರವಸೆಗಳು ಬಡವರಿಗೆ ಅನುಕೂಲ ಆಗುವಂತ ಭರವಸೆ ಎಂದು ಹೇಳ್ತಾರೆ ಅಂತ. ಆದರೆ ಅವರು ಹಾಗೆ ಹೇಳಲಿಲ್ಲ.

ನಾವು ಅಧಿಕಾರಕ್ಕೆ ಬಂದು 20 ದಿನ ಆಗಿದೆ. ಈ 20 ದಿನಗಳ 2 ಕ್ಯಾಬಿನೆಟ್ ಸಭೆ ನಡೆಸಿ 5 ಗ್ಯಾರಂಟಿ ಈಡೇರಿಸಲು ತೀರ್ಮಾನ ಮಾಡಿದ್ದೇವೆ.

ಒಂದು ವರ್ಷದ ಆವ್ರೇಜ್ ನೋಡಿ ಯಾರು ಎಷ್ಟು ಬಳಸುತ್ತಾರೆ ಅವರಿಗೆ ಉಚಿತ ವಿದ್ಯುತ್ ನೀಡ್ತಿದ್ದೀವಿ.

1 ಕೋಟಿ 28 ಲಕ್ಷ ಕುಟುಂಬದ ಮನೆ ಯಜಮಾನಿಗೆ 2 ಸಾವಿರ ಕೊಡುತ್ತೇವೆ. ಅತ್ತೆ ಯಜಮಾನಿ ಅಂದರೆ ಅತ್ತೆಗೆ, ಸೊಸೆ ಯಜಮಾನಿ ಅಂದರೆ ಸೊಸೆಗೆ ಹಣ ನೀಡುತ್ತೇವೆ. ಆದರೆ ಟ್ಯಾಕ್ಸ್ ಕಟ್ಟುವವರಿಗೆ ಹಣ ನೀಡಲ್ಲ. ಮಕ್ಕಳು ಟ್ಯಾಕ್ಸ್ ಕಟ್ತಿದ್ರೆ ಅದು ಲೆಕ್ಕಕ್ಕಿಲ್ಲ ಎಂದರು.

1ಕೋಟಿ 28 ಲಕ್ಷ ಯಜಮಾನರಿಗೆ ಅರ್ಜಿ ಕರೆದಿದ್ದೇವೆ. ಆಗಸ್ಟ್ ನಿಂದ ಅವರ ಖಾತೆಗೆ ಹಣ ಹಾಕುತ್ತೇವೆ. ಅಕ್ಕಿ ಸ್ಟಾಕ್ ಇಲ್ಲದ ಕಾರಣ ಜುಲೈನಿಂದ 10ಕೆಜಿ ಅಕ್ಕಿಯನ್ನ ವಿತರಣೆ ಮಾಡುತ್ತೇವೆ ಎಂದರು

Ramesh Babu

Journalist

Recent Posts

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾ*ವು!

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…

5 hours ago

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

18 hours ago

40 ಸಾವಿರ ಲಂಚ ಪಡೆಯುವಾಗ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿದಂತೆ ಇಬ್ಬರು ಲೋಕಾಯುಕ್ತ ಬಲೆಗೆ.!

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…

18 hours ago

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

19 hours ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

19 hours ago

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…

21 hours ago