ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕೇಂದ್ರದಲ್ಲೂ ಅಧಿಕಾರಕ್ಕೆ ಬರುತ್ತೆವೆ. ಅಧಿಕಾರಕ್ಕೆ ಬಂದ ತಕ್ಷಣ ರಸ ಗೊಬ್ಬರದ ಬೆಲೆ ಕಡಿಮೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವರುಣಾ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಆಯೋಜಿಸಿದ್ದ ಕಾರ್ಯಕರ್ತರು, ಮುಖಂಡರಿಗೆ ಆಯೋಜಿಸಿದ್ದ ಕೃತಜ್ಞತಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಅವರು, ಈ ಬಾರಿ ಮೋದಿ ಅವರು ಸೋಲುತ್ತಾರೆ ಎಂದು ಭವಿಷ್ಯ ನುಡಿದರು.
ನಾವು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಕ್ಷಣ ಗೊಬ್ಬರದ ಬೆಲೆ, ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಕಡಿಮೆ ಮಾಡುತ್ತೇವೆ ಎಂದು ಭರವಸೆ ಮಾತುಗಳ್ನಾಡಿದರು.
ರಾಜ್ಯ ಬಿಜೆಪಿಯಲ್ಲಿ ತಾಂಡವಾಡುತ್ತಿರುವ ಭ್ರಷ್ಟಾಚಾರ
ರಾಜ್ಯದ ಬಿಜೆಪಿಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿತ್ತು. ಬಿಜೆಪಿಯ ದುರಾಡಳಿತದಿಂದ ಜನ ಬದಲಾವಣೆ ಬಯಸಿದ್ದರು. ಆದ್ದರಿಂದ ಜಿಜೆಪಿಯನ್ನ ಸೋಲಿಸಿ ಕಾಂಗ್ರೆಸ್ ನ್ನ ಗೆಲ್ಲಿಸಿದ್ದಕ್ಕೆ ಧನ್ಯವಾದ ಎಂದರು.
ಇದು ನನ್ನ ಕೊನೆ ಚುನಾವಣೆ
ಮತ್ತೆ ನಾನು ಚುನಾವಣೆಗೆ ನಿಲ್ಲೋದಿಲ್ಲ, ವೇದಿಕೆ ಭಾಷಣದ ವೇಳೆ ಚುನಾವಣೆ ನಿವೃತ್ತಿ ಬಗ್ಗೆ ಹೇಳಿಕೆ ನೀಡಿರುವ ಸಿಎಂ ಸಿದ್ದರಾಮಯ್ಯ.
ನುಡಿದಂತೆ ನಡೆದಿದ್ದೇನೆ: ಕೊಟ್ಟ ಭರವಸೆ ಈಡೇರಿಸಿದ್ದೇನೆ
ಈ ಹಿಂದೆ 160 ಭರವಸೆಗಳನ್ನ ನೀಡಿದ್ದೆ, ಅದರಲ್ಲಿ 158 ಭರವಸೆ ಈಡೇರಿಸಿ ನುಡಿದಂತೆ ನಡೆದಿದ್ದೇನೆ. ಆದರೆ ಬಿಜೆಪಿಯವರು ವಚನ ಭ್ರಷ್ಟರು ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು. ದೇವರಾಜು ಅರಸ್ 5 ವರ್ಷ ಸಂಪೂರ್ಣ ಆಡಳಿತ ನೀಡಿದ್ದರು. ಅವರ ಬಳಿಕ ಈ ನಿಮ್ಮ ಸಿದ್ದರಾಮಯ್ಯ ಮಾತ್ರ 5 ವರ್ಷ ಆಡಳಿತ ಮಾಡುತ್ತಿರುವುದು.
ನಾವು ಅಧಿಕಾರಕ್ಕೆ ಬಂದು 20 ದಿನ ಆಗಿದೆ. ಈ 20 ದಿನಗಳ 2 ಕ್ಯಾಬಿನೆಟ್ ಸಭೆ ನಡೆಸಿ 5 ಗ್ಯಾರಂಟಿ ಈಡೇರಿಸಲು ತೀರ್ಮಾನ ಮಾಡಿದ್ದೇವೆ.
ಒಂದು ವರ್ಷದ ಆವ್ರೇಜ್ ನೋಡಿ ಯಾರು ಎಷ್ಟು ಬಳಸುತ್ತಾರೆ ಅವರಿಗೆ ಉಚಿತ ವಿದ್ಯುತ್ ನೀಡ್ತಿದ್ದೀವಿ.
1 ಕೋಟಿ 28 ಲಕ್ಷ ಕುಟುಂಬದ ಮನೆ ಯಜಮಾನಿಗೆ 2 ಸಾವಿರ ಕೊಡುತ್ತೇವೆ. ಅತ್ತೆ ಯಜಮಾನಿ ಅಂದರೆ ಅತ್ತೆಗೆ, ಸೊಸೆ ಯಜಮಾನಿ ಅಂದರೆ ಸೊಸೆಗೆ ಹಣ ನೀಡುತ್ತೇವೆ. ಆದರೆ ಟ್ಯಾಕ್ಸ್ ಕಟ್ಟುವವರಿಗೆ ಹಣ ನೀಡಲ್ಲ. ಮಕ್ಕಳು ಟ್ಯಾಕ್ಸ್ ಕಟ್ತಿದ್ರೆ ಅದು ಲೆಕ್ಕಕ್ಕಿಲ್ಲ ಎಂದರು.
1ಕೋಟಿ 28 ಲಕ್ಷ ಯಜಮಾನರಿಗೆ ಅರ್ಜಿ ಕರೆದಿದ್ದೇವೆ. ಆಗಸ್ಟ್ ನಿಂದ ಅವರ ಖಾತೆಗೆ ಹಣ ಹಾಕುತ್ತೇವೆ. ಅಕ್ಕಿ ಸ್ಟಾಕ್ ಇಲ್ಲದ ಕಾರಣ ಜುಲೈನಿಂದ 10ಕೆಜಿ ಅಕ್ಕಿಯನ್ನ ವಿತರಣೆ ಮಾಡುತ್ತೇವೆ ಎಂದರು
ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…
ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…
ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…
ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…