ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕೇಂದ್ರದಲ್ಲೂ ಅಧಿಕಾರಕ್ಕೆ ಬರುತ್ತೆವೆ. ಅಧಿಕಾರಕ್ಕೆ ಬಂದ ತಕ್ಷಣ ರಸ ಗೊಬ್ಬರದ ಬೆಲೆ ಕಡಿಮೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವರುಣಾ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಆಯೋಜಿಸಿದ್ದ ಕಾರ್ಯಕರ್ತರು, ಮುಖಂಡರಿಗೆ ಆಯೋಜಿಸಿದ್ದ ಕೃತಜ್ಞತಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಅವರು, ಈ ಬಾರಿ ಮೋದಿ ಅವರು ಸೋಲುತ್ತಾರೆ ಎಂದು ಭವಿಷ್ಯ ನುಡಿದರು.
ನಾವು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಕ್ಷಣ ಗೊಬ್ಬರದ ಬೆಲೆ, ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಕಡಿಮೆ ಮಾಡುತ್ತೇವೆ ಎಂದು ಭರವಸೆ ಮಾತುಗಳ್ನಾಡಿದರು.
ರಾಜ್ಯ ಬಿಜೆಪಿಯಲ್ಲಿ ತಾಂಡವಾಡುತ್ತಿರುವ ಭ್ರಷ್ಟಾಚಾರ
ರಾಜ್ಯದ ಬಿಜೆಪಿಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿತ್ತು. ಬಿಜೆಪಿಯ ದುರಾಡಳಿತದಿಂದ ಜನ ಬದಲಾವಣೆ ಬಯಸಿದ್ದರು. ಆದ್ದರಿಂದ ಜಿಜೆಪಿಯನ್ನ ಸೋಲಿಸಿ ಕಾಂಗ್ರೆಸ್ ನ್ನ ಗೆಲ್ಲಿಸಿದ್ದಕ್ಕೆ ಧನ್ಯವಾದ ಎಂದರು.
ಇದು ನನ್ನ ಕೊನೆ ಚುನಾವಣೆ
ಮತ್ತೆ ನಾನು ಚುನಾವಣೆಗೆ ನಿಲ್ಲೋದಿಲ್ಲ, ವೇದಿಕೆ ಭಾಷಣದ ವೇಳೆ ಚುನಾವಣೆ ನಿವೃತ್ತಿ ಬಗ್ಗೆ ಹೇಳಿಕೆ ನೀಡಿರುವ ಸಿಎಂ ಸಿದ್ದರಾಮಯ್ಯ.
ನುಡಿದಂತೆ ನಡೆದಿದ್ದೇನೆ: ಕೊಟ್ಟ ಭರವಸೆ ಈಡೇರಿಸಿದ್ದೇನೆ
ಈ ಹಿಂದೆ 160 ಭರವಸೆಗಳನ್ನ ನೀಡಿದ್ದೆ, ಅದರಲ್ಲಿ 158 ಭರವಸೆ ಈಡೇರಿಸಿ ನುಡಿದಂತೆ ನಡೆದಿದ್ದೇನೆ. ಆದರೆ ಬಿಜೆಪಿಯವರು ವಚನ ಭ್ರಷ್ಟರು ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು. ದೇವರಾಜು ಅರಸ್ 5 ವರ್ಷ ಸಂಪೂರ್ಣ ಆಡಳಿತ ನೀಡಿದ್ದರು. ಅವರ ಬಳಿಕ ಈ ನಿಮ್ಮ ಸಿದ್ದರಾಮಯ್ಯ ಮಾತ್ರ 5 ವರ್ಷ ಆಡಳಿತ ಮಾಡುತ್ತಿರುವುದು.
ನಾವು ಅಧಿಕಾರಕ್ಕೆ ಬಂದು 20 ದಿನ ಆಗಿದೆ. ಈ 20 ದಿನಗಳ 2 ಕ್ಯಾಬಿನೆಟ್ ಸಭೆ ನಡೆಸಿ 5 ಗ್ಯಾರಂಟಿ ಈಡೇರಿಸಲು ತೀರ್ಮಾನ ಮಾಡಿದ್ದೇವೆ.
ಒಂದು ವರ್ಷದ ಆವ್ರೇಜ್ ನೋಡಿ ಯಾರು ಎಷ್ಟು ಬಳಸುತ್ತಾರೆ ಅವರಿಗೆ ಉಚಿತ ವಿದ್ಯುತ್ ನೀಡ್ತಿದ್ದೀವಿ.
1 ಕೋಟಿ 28 ಲಕ್ಷ ಕುಟುಂಬದ ಮನೆ ಯಜಮಾನಿಗೆ 2 ಸಾವಿರ ಕೊಡುತ್ತೇವೆ. ಅತ್ತೆ ಯಜಮಾನಿ ಅಂದರೆ ಅತ್ತೆಗೆ, ಸೊಸೆ ಯಜಮಾನಿ ಅಂದರೆ ಸೊಸೆಗೆ ಹಣ ನೀಡುತ್ತೇವೆ. ಆದರೆ ಟ್ಯಾಕ್ಸ್ ಕಟ್ಟುವವರಿಗೆ ಹಣ ನೀಡಲ್ಲ. ಮಕ್ಕಳು ಟ್ಯಾಕ್ಸ್ ಕಟ್ತಿದ್ರೆ ಅದು ಲೆಕ್ಕಕ್ಕಿಲ್ಲ ಎಂದರು.
1ಕೋಟಿ 28 ಲಕ್ಷ ಯಜಮಾನರಿಗೆ ಅರ್ಜಿ ಕರೆದಿದ್ದೇವೆ. ಆಗಸ್ಟ್ ನಿಂದ ಅವರ ಖಾತೆಗೆ ಹಣ ಹಾಕುತ್ತೇವೆ. ಅಕ್ಕಿ ಸ್ಟಾಕ್ ಇಲ್ಲದ ಕಾರಣ ಜುಲೈನಿಂದ 10ಕೆಜಿ ಅಕ್ಕಿಯನ್ನ ವಿತರಣೆ ಮಾಡುತ್ತೇವೆ ಎಂದರು
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…