Categories: ರಾಜ್ಯ

ಕೇಂದ್ರದಲ್ಲೂ ಅಧಿಕಾರಕ್ಕೆ ಬಂದು ಗೊಬ್ಬರ ಬೆಲೆ ಕಡಿಮೆ ಮಾಡುತ್ತೇವೆ- ಸಿಎಂ ಸಿದ್ದರಾಮಯ್ಯ

ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕೇಂದ್ರದಲ್ಲೂ ಅಧಿಕಾರಕ್ಕೆ ಬರುತ್ತೆವೆ. ಅಧಿಕಾರಕ್ಕೆ ಬಂದ ತಕ್ಷಣ ರಸ ಗೊಬ್ಬರದ ಬೆಲೆ ಕಡಿಮೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವರುಣಾ ಕ್ಷೇತ್ರದಲ್ಲಿ ಸಿಎಂ‌ ಸಿದ್ದರಾಮಯ್ಯ ಆಯೋಜಿಸಿದ್ದ ಕಾರ್ಯಕರ್ತರು, ಮುಖಂಡರಿಗೆ ಆಯೋಜಿಸಿದ್ದ ಕೃತಜ್ಞತಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಅವರು, ಈ ಬಾರಿ ಮೋದಿ ಅವರು ಸೋಲುತ್ತಾರೆ ಎಂದು ಭವಿಷ್ಯ ನುಡಿದರು.

ನಾವು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಕ್ಷಣ ಗೊಬ್ಬರದ ಬೆಲೆ, ಪೆಟ್ರೋಲ್, ಡೀಸೆಲ್‌, ಗ್ಯಾಸ್ ಬೆಲೆ ಕಡಿಮೆ ಮಾಡುತ್ತೇವೆ ಎಂದು ಭರವಸೆ ಮಾತುಗಳ್ನಾಡಿದರು.

ರಾಜ್ಯ ಬಿಜೆಪಿಯಲ್ಲಿ ತಾಂಡವಾಡುತ್ತಿರುವ ಭ್ರಷ್ಟಾಚಾರ

ರಾಜ್ಯದ ಬಿಜೆಪಿಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿತ್ತು. ಬಿಜೆಪಿಯ ದುರಾಡಳಿತದಿಂದ ಜನ ಬದಲಾವಣೆ ಬಯಸಿದ್ದರು. ಆದ್ದರಿಂದ ಜಿಜೆಪಿಯನ್ನ ಸೋಲಿಸಿ ಕಾಂಗ್ರೆಸ್ ನ್ನ ಗೆಲ್ಲಿಸಿದ್ದಕ್ಕೆ ಧನ್ಯವಾದ ಎಂದರು.

ಇದು ನನ್ನ ಕೊನೆ ಚುನಾವಣೆ

ಮತ್ತೆ ನಾನು ಚುನಾವಣೆಗೆ ನಿಲ್ಲೋದಿಲ್ಲ, ವೇದಿಕೆ ಭಾಷಣದ ವೇಳೆ ಚುನಾವಣೆ ನಿವೃತ್ತಿ ಬಗ್ಗೆ ಹೇಳಿಕೆ ನೀಡಿರುವ ಸಿಎಂ ಸಿದ್ದರಾಮಯ್ಯ.

ನುಡಿದಂತೆ ನಡೆದಿದ್ದೇನೆ: ಕೊಟ್ಟ ಭರವಸೆ ಈಡೇರಿಸಿದ್ದೇನೆ

ಈ ಹಿಂದೆ 160 ಭರವಸೆಗಳನ್ನ ನೀಡಿದ್ದೆ, ಅದರಲ್ಲಿ 158 ಭರವಸೆ ಈಡೇರಿಸಿ ನುಡಿದಂತೆ ನಡೆದಿದ್ದೇನೆ. ಆದರೆ ಬಿಜೆಪಿಯವರು ವಚನ ಭ್ರಷ್ಟರು ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು. ದೇವರಾಜು ಅರಸ್ 5 ವರ್ಷ ಸಂಪೂರ್ಣ ಆಡಳಿತ ನೀಡಿದ್ದರು. ಅವರ ಬಳಿಕ ಈ ನಿಮ್ಮ ಸಿದ್ದರಾಮಯ್ಯ ಮಾತ್ರ 5 ವರ್ಷ ಆಡಳಿತ ಮಾಡುತ್ತಿರುವುದು.

ಸಿಎಂ ಕುರ್ಚಿ ಸುಖದ ಸುಪ್ಪತ್ತಿಗೆ ಇರೋ ಕುರ್ಚಿ ಅಲ್ಲ ಜನ ಸೇವೆ ಮಾಡೋ ಕುರ್ಚಿ. 5 ಭರವಸೆ ಈಡೇರಿಸಿದರೆ ನಮಗೆ ಖರ್ಚಾಗುವಂತದ್ದು 59 ಸಾವಿರ ಕೋಟಿ. ಮೋದಿ ಹೇಳಿದ್ರು ಕಾಂಗ್ರೆಸ್ ಕೊಟ್ಟಿರೋ ಭರವಸೆ ಈಡೇರಿಸಲು ಸಾಧ್ಯವಿಲ್ಲ. ರಾಜ್ಯ ದಿವಾಳಿ ಆಗತ್ತೆ ಎಂದು ಹೇಳಿದ್ದರು. ಆದರೆ ನಾನು ಅವರಿಂದ ನಿರೀಕ್ಷೆ ಮಾಡಿದ್ದೆ ಕಾಂಗ್ರೆಸ್ ಕೊಟ್ಟ ಭರವಸೆಗಳು ಬಡವರಿಗೆ ಅನುಕೂಲ ಆಗುವಂತ ಭರವಸೆ ಎಂದು ಹೇಳ್ತಾರೆ ಅಂತ. ಆದರೆ ಅವರು ಹಾಗೆ ಹೇಳಲಿಲ್ಲ.

ನಾವು ಅಧಿಕಾರಕ್ಕೆ ಬಂದು 20 ದಿನ ಆಗಿದೆ. ಈ 20 ದಿನಗಳ 2 ಕ್ಯಾಬಿನೆಟ್ ಸಭೆ ನಡೆಸಿ 5 ಗ್ಯಾರಂಟಿ ಈಡೇರಿಸಲು ತೀರ್ಮಾನ ಮಾಡಿದ್ದೇವೆ.

ಒಂದು ವರ್ಷದ ಆವ್ರೇಜ್ ನೋಡಿ ಯಾರು ಎಷ್ಟು ಬಳಸುತ್ತಾರೆ ಅವರಿಗೆ ಉಚಿತ ವಿದ್ಯುತ್ ನೀಡ್ತಿದ್ದೀವಿ.

1 ಕೋಟಿ 28 ಲಕ್ಷ ಕುಟುಂಬದ ಮನೆ ಯಜಮಾನಿಗೆ 2 ಸಾವಿರ ಕೊಡುತ್ತೇವೆ. ಅತ್ತೆ ಯಜಮಾನಿ ಅಂದರೆ ಅತ್ತೆಗೆ, ಸೊಸೆ ಯಜಮಾನಿ ಅಂದರೆ ಸೊಸೆಗೆ ಹಣ ನೀಡುತ್ತೇವೆ. ಆದರೆ ಟ್ಯಾಕ್ಸ್ ಕಟ್ಟುವವರಿಗೆ ಹಣ ನೀಡಲ್ಲ. ಮಕ್ಕಳು ಟ್ಯಾಕ್ಸ್ ಕಟ್ತಿದ್ರೆ ಅದು ಲೆಕ್ಕಕ್ಕಿಲ್ಲ ಎಂದರು.

1ಕೋಟಿ 28 ಲಕ್ಷ ಯಜಮಾನರಿಗೆ ಅರ್ಜಿ ಕರೆದಿದ್ದೇವೆ. ಆಗಸ್ಟ್ ನಿಂದ ಅವರ ಖಾತೆಗೆ ಹಣ ಹಾಕುತ್ತೇವೆ. ಅಕ್ಕಿ ಸ್ಟಾಕ್ ಇಲ್ಲದ ಕಾರಣ ಜುಲೈನಿಂದ 10ಕೆಜಿ ಅಕ್ಕಿಯನ್ನ ವಿತರಣೆ ಮಾಡುತ್ತೇವೆ ಎಂದರು

Ramesh Babu

Journalist

Recent Posts

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

33 minutes ago

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

19 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

22 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

1 day ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

1 day ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

2 days ago