Categories: ರಾಜ್ಯ

ಕೇಂದ್ರದಲ್ಲೂ ಅಧಿಕಾರಕ್ಕೆ ಬಂದು ಗೊಬ್ಬರ ಬೆಲೆ ಕಡಿಮೆ ಮಾಡುತ್ತೇವೆ- ಸಿಎಂ ಸಿದ್ದರಾಮಯ್ಯ

ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕೇಂದ್ರದಲ್ಲೂ ಅಧಿಕಾರಕ್ಕೆ ಬರುತ್ತೆವೆ. ಅಧಿಕಾರಕ್ಕೆ ಬಂದ ತಕ್ಷಣ ರಸ ಗೊಬ್ಬರದ ಬೆಲೆ ಕಡಿಮೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವರುಣಾ ಕ್ಷೇತ್ರದಲ್ಲಿ ಸಿಎಂ‌ ಸಿದ್ದರಾಮಯ್ಯ ಆಯೋಜಿಸಿದ್ದ ಕಾರ್ಯಕರ್ತರು, ಮುಖಂಡರಿಗೆ ಆಯೋಜಿಸಿದ್ದ ಕೃತಜ್ಞತಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಅವರು, ಈ ಬಾರಿ ಮೋದಿ ಅವರು ಸೋಲುತ್ತಾರೆ ಎಂದು ಭವಿಷ್ಯ ನುಡಿದರು.

ನಾವು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಕ್ಷಣ ಗೊಬ್ಬರದ ಬೆಲೆ, ಪೆಟ್ರೋಲ್, ಡೀಸೆಲ್‌, ಗ್ಯಾಸ್ ಬೆಲೆ ಕಡಿಮೆ ಮಾಡುತ್ತೇವೆ ಎಂದು ಭರವಸೆ ಮಾತುಗಳ್ನಾಡಿದರು.

ರಾಜ್ಯ ಬಿಜೆಪಿಯಲ್ಲಿ ತಾಂಡವಾಡುತ್ತಿರುವ ಭ್ರಷ್ಟಾಚಾರ

ರಾಜ್ಯದ ಬಿಜೆಪಿಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿತ್ತು. ಬಿಜೆಪಿಯ ದುರಾಡಳಿತದಿಂದ ಜನ ಬದಲಾವಣೆ ಬಯಸಿದ್ದರು. ಆದ್ದರಿಂದ ಜಿಜೆಪಿಯನ್ನ ಸೋಲಿಸಿ ಕಾಂಗ್ರೆಸ್ ನ್ನ ಗೆಲ್ಲಿಸಿದ್ದಕ್ಕೆ ಧನ್ಯವಾದ ಎಂದರು.

ಇದು ನನ್ನ ಕೊನೆ ಚುನಾವಣೆ

ಮತ್ತೆ ನಾನು ಚುನಾವಣೆಗೆ ನಿಲ್ಲೋದಿಲ್ಲ, ವೇದಿಕೆ ಭಾಷಣದ ವೇಳೆ ಚುನಾವಣೆ ನಿವೃತ್ತಿ ಬಗ್ಗೆ ಹೇಳಿಕೆ ನೀಡಿರುವ ಸಿಎಂ ಸಿದ್ದರಾಮಯ್ಯ.

ನುಡಿದಂತೆ ನಡೆದಿದ್ದೇನೆ: ಕೊಟ್ಟ ಭರವಸೆ ಈಡೇರಿಸಿದ್ದೇನೆ

ಈ ಹಿಂದೆ 160 ಭರವಸೆಗಳನ್ನ ನೀಡಿದ್ದೆ, ಅದರಲ್ಲಿ 158 ಭರವಸೆ ಈಡೇರಿಸಿ ನುಡಿದಂತೆ ನಡೆದಿದ್ದೇನೆ. ಆದರೆ ಬಿಜೆಪಿಯವರು ವಚನ ಭ್ರಷ್ಟರು ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು. ದೇವರಾಜು ಅರಸ್ 5 ವರ್ಷ ಸಂಪೂರ್ಣ ಆಡಳಿತ ನೀಡಿದ್ದರು. ಅವರ ಬಳಿಕ ಈ ನಿಮ್ಮ ಸಿದ್ದರಾಮಯ್ಯ ಮಾತ್ರ 5 ವರ್ಷ ಆಡಳಿತ ಮಾಡುತ್ತಿರುವುದು.

ಸಿಎಂ ಕುರ್ಚಿ ಸುಖದ ಸುಪ್ಪತ್ತಿಗೆ ಇರೋ ಕುರ್ಚಿ ಅಲ್ಲ ಜನ ಸೇವೆ ಮಾಡೋ ಕುರ್ಚಿ. 5 ಭರವಸೆ ಈಡೇರಿಸಿದರೆ ನಮಗೆ ಖರ್ಚಾಗುವಂತದ್ದು 59 ಸಾವಿರ ಕೋಟಿ. ಮೋದಿ ಹೇಳಿದ್ರು ಕಾಂಗ್ರೆಸ್ ಕೊಟ್ಟಿರೋ ಭರವಸೆ ಈಡೇರಿಸಲು ಸಾಧ್ಯವಿಲ್ಲ. ರಾಜ್ಯ ದಿವಾಳಿ ಆಗತ್ತೆ ಎಂದು ಹೇಳಿದ್ದರು. ಆದರೆ ನಾನು ಅವರಿಂದ ನಿರೀಕ್ಷೆ ಮಾಡಿದ್ದೆ ಕಾಂಗ್ರೆಸ್ ಕೊಟ್ಟ ಭರವಸೆಗಳು ಬಡವರಿಗೆ ಅನುಕೂಲ ಆಗುವಂತ ಭರವಸೆ ಎಂದು ಹೇಳ್ತಾರೆ ಅಂತ. ಆದರೆ ಅವರು ಹಾಗೆ ಹೇಳಲಿಲ್ಲ.

ನಾವು ಅಧಿಕಾರಕ್ಕೆ ಬಂದು 20 ದಿನ ಆಗಿದೆ. ಈ 20 ದಿನಗಳ 2 ಕ್ಯಾಬಿನೆಟ್ ಸಭೆ ನಡೆಸಿ 5 ಗ್ಯಾರಂಟಿ ಈಡೇರಿಸಲು ತೀರ್ಮಾನ ಮಾಡಿದ್ದೇವೆ.

ಒಂದು ವರ್ಷದ ಆವ್ರೇಜ್ ನೋಡಿ ಯಾರು ಎಷ್ಟು ಬಳಸುತ್ತಾರೆ ಅವರಿಗೆ ಉಚಿತ ವಿದ್ಯುತ್ ನೀಡ್ತಿದ್ದೀವಿ.

1 ಕೋಟಿ 28 ಲಕ್ಷ ಕುಟುಂಬದ ಮನೆ ಯಜಮಾನಿಗೆ 2 ಸಾವಿರ ಕೊಡುತ್ತೇವೆ. ಅತ್ತೆ ಯಜಮಾನಿ ಅಂದರೆ ಅತ್ತೆಗೆ, ಸೊಸೆ ಯಜಮಾನಿ ಅಂದರೆ ಸೊಸೆಗೆ ಹಣ ನೀಡುತ್ತೇವೆ. ಆದರೆ ಟ್ಯಾಕ್ಸ್ ಕಟ್ಟುವವರಿಗೆ ಹಣ ನೀಡಲ್ಲ. ಮಕ್ಕಳು ಟ್ಯಾಕ್ಸ್ ಕಟ್ತಿದ್ರೆ ಅದು ಲೆಕ್ಕಕ್ಕಿಲ್ಲ ಎಂದರು.

1ಕೋಟಿ 28 ಲಕ್ಷ ಯಜಮಾನರಿಗೆ ಅರ್ಜಿ ಕರೆದಿದ್ದೇವೆ. ಆಗಸ್ಟ್ ನಿಂದ ಅವರ ಖಾತೆಗೆ ಹಣ ಹಾಕುತ್ತೇವೆ. ಅಕ್ಕಿ ಸ್ಟಾಕ್ ಇಲ್ಲದ ಕಾರಣ ಜುಲೈನಿಂದ 10ಕೆಜಿ ಅಕ್ಕಿಯನ್ನ ವಿತರಣೆ ಮಾಡುತ್ತೇವೆ ಎಂದರು

Ramesh Babu

Journalist

Recent Posts

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

1 hour ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

11 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

12 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

21 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

3 days ago