Categories: ರಾಜ್ಯ

ಕೇಂದ್ರದಲ್ಲೂ ಅಧಿಕಾರಕ್ಕೆ ಬಂದು ಗೊಬ್ಬರ ಬೆಲೆ ಕಡಿಮೆ ಮಾಡುತ್ತೇವೆ- ಸಿಎಂ ಸಿದ್ದರಾಮಯ್ಯ

ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕೇಂದ್ರದಲ್ಲೂ ಅಧಿಕಾರಕ್ಕೆ ಬರುತ್ತೆವೆ. ಅಧಿಕಾರಕ್ಕೆ ಬಂದ ತಕ್ಷಣ ರಸ ಗೊಬ್ಬರದ ಬೆಲೆ ಕಡಿಮೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವರುಣಾ ಕ್ಷೇತ್ರದಲ್ಲಿ ಸಿಎಂ‌ ಸಿದ್ದರಾಮಯ್ಯ ಆಯೋಜಿಸಿದ್ದ ಕಾರ್ಯಕರ್ತರು, ಮುಖಂಡರಿಗೆ ಆಯೋಜಿಸಿದ್ದ ಕೃತಜ್ಞತಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಅವರು, ಈ ಬಾರಿ ಮೋದಿ ಅವರು ಸೋಲುತ್ತಾರೆ ಎಂದು ಭವಿಷ್ಯ ನುಡಿದರು.

ನಾವು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಕ್ಷಣ ಗೊಬ್ಬರದ ಬೆಲೆ, ಪೆಟ್ರೋಲ್, ಡೀಸೆಲ್‌, ಗ್ಯಾಸ್ ಬೆಲೆ ಕಡಿಮೆ ಮಾಡುತ್ತೇವೆ ಎಂದು ಭರವಸೆ ಮಾತುಗಳ್ನಾಡಿದರು.

ರಾಜ್ಯ ಬಿಜೆಪಿಯಲ್ಲಿ ತಾಂಡವಾಡುತ್ತಿರುವ ಭ್ರಷ್ಟಾಚಾರ

ರಾಜ್ಯದ ಬಿಜೆಪಿಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿತ್ತು. ಬಿಜೆಪಿಯ ದುರಾಡಳಿತದಿಂದ ಜನ ಬದಲಾವಣೆ ಬಯಸಿದ್ದರು. ಆದ್ದರಿಂದ ಜಿಜೆಪಿಯನ್ನ ಸೋಲಿಸಿ ಕಾಂಗ್ರೆಸ್ ನ್ನ ಗೆಲ್ಲಿಸಿದ್ದಕ್ಕೆ ಧನ್ಯವಾದ ಎಂದರು.

ಇದು ನನ್ನ ಕೊನೆ ಚುನಾವಣೆ

ಮತ್ತೆ ನಾನು ಚುನಾವಣೆಗೆ ನಿಲ್ಲೋದಿಲ್ಲ, ವೇದಿಕೆ ಭಾಷಣದ ವೇಳೆ ಚುನಾವಣೆ ನಿವೃತ್ತಿ ಬಗ್ಗೆ ಹೇಳಿಕೆ ನೀಡಿರುವ ಸಿಎಂ ಸಿದ್ದರಾಮಯ್ಯ.

ನುಡಿದಂತೆ ನಡೆದಿದ್ದೇನೆ: ಕೊಟ್ಟ ಭರವಸೆ ಈಡೇರಿಸಿದ್ದೇನೆ

ಈ ಹಿಂದೆ 160 ಭರವಸೆಗಳನ್ನ ನೀಡಿದ್ದೆ, ಅದರಲ್ಲಿ 158 ಭರವಸೆ ಈಡೇರಿಸಿ ನುಡಿದಂತೆ ನಡೆದಿದ್ದೇನೆ. ಆದರೆ ಬಿಜೆಪಿಯವರು ವಚನ ಭ್ರಷ್ಟರು ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು. ದೇವರಾಜು ಅರಸ್ 5 ವರ್ಷ ಸಂಪೂರ್ಣ ಆಡಳಿತ ನೀಡಿದ್ದರು. ಅವರ ಬಳಿಕ ಈ ನಿಮ್ಮ ಸಿದ್ದರಾಮಯ್ಯ ಮಾತ್ರ 5 ವರ್ಷ ಆಡಳಿತ ಮಾಡುತ್ತಿರುವುದು.

ಸಿಎಂ ಕುರ್ಚಿ ಸುಖದ ಸುಪ್ಪತ್ತಿಗೆ ಇರೋ ಕುರ್ಚಿ ಅಲ್ಲ ಜನ ಸೇವೆ ಮಾಡೋ ಕುರ್ಚಿ. 5 ಭರವಸೆ ಈಡೇರಿಸಿದರೆ ನಮಗೆ ಖರ್ಚಾಗುವಂತದ್ದು 59 ಸಾವಿರ ಕೋಟಿ. ಮೋದಿ ಹೇಳಿದ್ರು ಕಾಂಗ್ರೆಸ್ ಕೊಟ್ಟಿರೋ ಭರವಸೆ ಈಡೇರಿಸಲು ಸಾಧ್ಯವಿಲ್ಲ. ರಾಜ್ಯ ದಿವಾಳಿ ಆಗತ್ತೆ ಎಂದು ಹೇಳಿದ್ದರು. ಆದರೆ ನಾನು ಅವರಿಂದ ನಿರೀಕ್ಷೆ ಮಾಡಿದ್ದೆ ಕಾಂಗ್ರೆಸ್ ಕೊಟ್ಟ ಭರವಸೆಗಳು ಬಡವರಿಗೆ ಅನುಕೂಲ ಆಗುವಂತ ಭರವಸೆ ಎಂದು ಹೇಳ್ತಾರೆ ಅಂತ. ಆದರೆ ಅವರು ಹಾಗೆ ಹೇಳಲಿಲ್ಲ.

ನಾವು ಅಧಿಕಾರಕ್ಕೆ ಬಂದು 20 ದಿನ ಆಗಿದೆ. ಈ 20 ದಿನಗಳ 2 ಕ್ಯಾಬಿನೆಟ್ ಸಭೆ ನಡೆಸಿ 5 ಗ್ಯಾರಂಟಿ ಈಡೇರಿಸಲು ತೀರ್ಮಾನ ಮಾಡಿದ್ದೇವೆ.

ಒಂದು ವರ್ಷದ ಆವ್ರೇಜ್ ನೋಡಿ ಯಾರು ಎಷ್ಟು ಬಳಸುತ್ತಾರೆ ಅವರಿಗೆ ಉಚಿತ ವಿದ್ಯುತ್ ನೀಡ್ತಿದ್ದೀವಿ.

1 ಕೋಟಿ 28 ಲಕ್ಷ ಕುಟುಂಬದ ಮನೆ ಯಜಮಾನಿಗೆ 2 ಸಾವಿರ ಕೊಡುತ್ತೇವೆ. ಅತ್ತೆ ಯಜಮಾನಿ ಅಂದರೆ ಅತ್ತೆಗೆ, ಸೊಸೆ ಯಜಮಾನಿ ಅಂದರೆ ಸೊಸೆಗೆ ಹಣ ನೀಡುತ್ತೇವೆ. ಆದರೆ ಟ್ಯಾಕ್ಸ್ ಕಟ್ಟುವವರಿಗೆ ಹಣ ನೀಡಲ್ಲ. ಮಕ್ಕಳು ಟ್ಯಾಕ್ಸ್ ಕಟ್ತಿದ್ರೆ ಅದು ಲೆಕ್ಕಕ್ಕಿಲ್ಲ ಎಂದರು.

1ಕೋಟಿ 28 ಲಕ್ಷ ಯಜಮಾನರಿಗೆ ಅರ್ಜಿ ಕರೆದಿದ್ದೇವೆ. ಆಗಸ್ಟ್ ನಿಂದ ಅವರ ಖಾತೆಗೆ ಹಣ ಹಾಕುತ್ತೇವೆ. ಅಕ್ಕಿ ಸ್ಟಾಕ್ ಇಲ್ಲದ ಕಾರಣ ಜುಲೈನಿಂದ 10ಕೆಜಿ ಅಕ್ಕಿಯನ್ನ ವಿತರಣೆ ಮಾಡುತ್ತೇವೆ ಎಂದರು

Ramesh Babu

Journalist

Recent Posts

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

12 hours ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

14 hours ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

19 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

2 days ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

2 days ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago