Categories: ಕೋಲಾರ

ಕೇಂದ್ರದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತ್ತಷ್ಟು ಅಭಿವೃದ್ಧಿ ಸಾಧ್ಯ- ಕೊತ್ತೂರು ಮಂಜುನಾಥ್

ಕೋಲಾರ: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನೇತೃತ್ವದ ಸರಕಾರದೊಂದಿಗೆ ಕೇಂದ್ರದಲ್ಲೂ ಕಾಂಗ್ರೆಸ್ ನೇತೃತ್ವದ ಸರಕಾರವೇ ಅಧಿಕಾರಕ್ಕೆ ಬಂದರೆ ಮತ್ತಷ್ಟು ಅಭಿವೃದ್ಧಿ ಮಾಡಲು ಸಾಧ್ಯವಾಗುತ್ತದೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಶಾಸಕ ಕೊತ್ತೂರು ಜಿ ಮಂಜುನಾಥ್ ಮನವಿ ಮಾಡಿದರು

ತಾಲೂಕಿನ ದೊಡ್ಡಹಸಾಳ.ಬೆಗ್ಲಿಹೊಸಹಳ್ಳಿ, ಮುದುವತ್ತಿ ಹಾಗೂ ವಕ್ಕಲೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ ಗೌತಮ್ ಪರವಾಗಿ ಪ್ರಚಾರದಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಕೇವಲ ಹತ್ತು ತಿಂಗಳಲ್ಲಿ ಕೇಳಿದಷ್ಟು ಅನುದಾನವನ್ನು ರಾಜ್ಯ ಸರಕಾರದಿಂದ ಕೊಟ್ಟಿದ್ದಾರೆ ಇನ್ನೂ ನಾಲ್ಕು ವರ್ಷ ಕಾಂಗ್ರೆಸ್ ಸರಕಾರವೇ ಇದ್ದು ಹಂತಹಂತವಾಗಿ ಕ್ಷೇತ್ರವನ್ನು ಮಾದರಿಯಾಗಿ ಮಾಡಲಾಗುತ್ತದೆ ನಾನು ಆಗಲಿ ಕಾಂಗ್ರೆಸ್ ಸರಕಾರವಾಗಲಿ ಅಭಿವೃದ್ಧಿ ವಿಚಾರದಲ್ಲಿ ಹಿಂದೆ ಹೋಗಲ್ಲ ನಿಮ್ಮ ಗ್ರಾಮಗಳಲ್ಲಿ ಆಗಬೇಕಾದ ಕಾಮಗಾರಿಗಳ ಪಟ್ಟಿ ಮಾಡಿ ಕೊಡಿ ಕೆಲಸ ಮಾಡುವ ಜವಾಬ್ದಾರಿಯನ್ನು ನಮಗೆ ಬಿಡಿ ಎಂದರು.

ಗ್ರಾಮಗಳಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಪಕ್ಷದವರನ್ನು ಯಾರು ದೂಷಣೆ ಮಾಡುವುದು ಬೇಡ ರಾಜ್ಯ ಸರ್ಕಾರದಿಂದ ಸಾಮಾನ್ಯ ಜನತೆಯ ಅನುಕೂಲಕ್ಕಾಗಿ ಜಾರಿಗೊಳಿಸಿರುವ ಐದು ಗ್ಯಾರಂಟಿಗಳನ್ನು ಜನಕ್ಕೆ ಮನವರಿಕೆ ಮಾಡಿಕೊಟ್ಟು ಅದರಿಂದ ಆಗುವ ಅನುಕೂಲಗಳು ಜೊತೆಗೆ ರಾಜ್ಯದ ಮಾದರಿಯಲ್ಲಿಯೇ ಕೇಂದ್ರದಲ್ಲಿ ಸಹ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತ್ತಷ್ಟು ಗ್ಯಾರಂಟಿಯನ್ನು ರೂಪಿಸಲಾಗಿದ್ದು ಎಂಬುದನ್ನು ಮನೆ ಮನೆಗೆ ತಿಳಿಸಿ ವೋಟ್ ಹಾಕುವಂತೆ ಮಾಡಬೇಕು ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ ಕೇವಲ ಆರು ತಿಂಗಳಲ್ಲಿ ಜಾರಿಗೆ ತಂದು ಜನರಿಗೆ ಅನುಕೂಲ ಮಾಡಿಕೊಟ್ಟಿದೆ. ಪಕ್ಷ ಮತ್ತಷ್ಟು ಜನಪರ ಕಾರ್ಯಕ್ರಮ ಮಾಡಬೇಕಾದರೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಕೋರಿದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ ಕನಿಷ್ಠ ಐದು ಸಾವಿರ ಬರುತ್ತಾ ಇದ್ದು ಧೈರ್ಯದಿಂದ ಮನೆ ಮನೆಗೆ ಹೋಗಿ ಕಾಂಗ್ರೆಸ್ ಪಕ್ಷಕ್ಕೆ ವೋಟು ಕೇಳಬಹುದು ರಾಜ್ಯದ ಜನರ ಸಂಕಷ್ಟವನ್ನು ಪರಿಹರಿಸುವುದು ಕಾಂಗ್ರೆಸ್ ಸರಕಾರದ ಗುರಿಯಾಗಿದೆ ಜಿಲ್ಲಾ ಕೇಂದ್ರದಲ್ಲಿ ರಿಂಗ್ ರೋಡ್, ಎಪಿಎಂಸಿ ಮಾರುಕಟ್ಟೆ, ಮೆಡಿಕಲ್ ಕಾಲೇಜ್ ಮಾಡಲಾಗುತ್ತದೆ ಜನರ ಜೀವನದ ಗುಣಮಟ್ಟ ಉತ್ತಮಪಡಿಸುವ ಗುರಿ ಹೊಂದಿರುವ ಕಾಂಗ್ರೆಸ್ ಸರ್ಕಾರದ ಆಶೋತ್ತರಗಳಿಗೆ ತಕ್ಕಂತೆ ಕೆಲಸ ಮಾಡಲು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ನೀವು ಮತ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಕೋಚಿಮುಲ್ ಮಾಜಿ ನಿರ್ದೇಶಕ ಛತ್ರಕೋಡಿಹಳ್ಳಿ ರಾಮಕೃಷ್ಣೇಗೌಡ, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷರಾದ ವಕ್ಕಲೇರಿ ರಾಜಪ್ಪ, ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ಛತ್ರಕೋಡಿಹಳ್ಳಿ ಮಂಜುನಾಥ್, ಶ್ರೀನಿವಾಸ್, ವೆಂಕಟೇಶ್,ಶ್ರೀರಾಮರೆಡ್ಡಿ ಮುಂತಾದವರು ಇದ್ದರು

Ramesh Babu

Journalist

Recent Posts

ಅಧಿಕಾರಕ್ಕೇರುವ ಮುನ್ನವೇ ಟ್ರಬಲ್ ಶೂಟರ್ ಚಾಣಾಕ್ಷ ನಡೆ: ದೇವೇಗೌಡ-ಯಡಿಯೂರಪ್ಪ ಆಶೀರ್ವಾದ ಪಡೆದ ಡಿಕೆಶಿ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…

18 minutes ago

ಡಿ.ಕೆ.ಶಿವಕುಮಾರ್ ಪದಗ್ರಹಣ: ಡಿಕೆಶಿ ಜೊತೆ ಓರ್ವ ಡಿಸಿಎಂ ಸೇರಿ 12 ಮಂದಿ ಸಚಿವರಾಗಿ ಪ್ರಮಾಣ ವಚನ….

ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…

2 hours ago

ಬಿಜೆಪಿಗೆ ಅಧಿಕಾರ ಸಿಕ್ಕಾಗ ಒಬಿಸಿ, ದಲಿತರ ರಾಜಕೀಯ ಪ್ರಾತಿನಿಧ್ಯ ಏಕೆ ನೆನಪಾಗಲಿಲ್ಲ?- ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…

2 hours ago

ಡಾ.ಜಿ.ಪರಮೇಶ್ವರ್ ಗೆ ಉಪಮುಖ್ಯಮಂತ್ರಿ ಸ್ಥಾನ.?: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ ಸಿದ್ದರಾಮಯ್ಯ ಸುಳಿವು

ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ…

2 hours ago

ಪ್ರಮಾಣ ವಚನ ಅಥವಾ ಪ್ರತಿಜ್ಞಾ ವಿಧಿ……. ಇವು ಆತ್ಮಸಾಕ್ಷಿಯ ನುಡಿಗಳೇ – ಸಂವಿಧಾನಾತ್ಮಕ ಕರ್ತವ್ಯವೇ – ಒಂದು ಒಣ ವಿಧಿ ವಿಧಾನವೇ…….

ನಡೆ ನುಡಿ - ಮಾತು ಕೃತಿಯ ನಡುವೆ ದೊಡ್ಡ ಕಂದರ ಸೃಷ್ಠಿಯಾಗಿರುವ ಸನ್ನಿವೇಶದಲ್ಲಿ ಪ್ರಮಾಣ ವಚನ ಒಂದು ಅಧೀಕೃತ ಮತ್ತು…

6 hours ago

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

20 hours ago