ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಆವತಿ ಗ್ರಾಮದ 35 ಎಕರೆ ಪ್ರದೇಶದಲ್ಲಿ ಬ್ಯೂರೋ ಆಫ್ ಪೊಲೀಸ್ ರೀಸರ್ಚ್ ಅಂಡ್ ಡೆವಲಪ್ಮೆಂಟ್ (ಬಿ.ಪಿ.ಆರ್.ಡಿ.) ಸಂಸ್ಥೆಯಡಿ ಕಾರ್ಯನಿರ್ವಹಿಸುವ, ಕೇಂದ್ರೀಯ ಪತ್ತೇದಾರಿ ತರಬೇತಿ ಶಾಲೆಯ ಕಟ್ಟಡದ ಶಂಕುಸ್ಥಾಪನೆಯನ್ನು ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಷಾ ಅವರು ಇಂದು ನೆರವೇರಿಸಿದರು.
ಬೆಂಗಳೂರಿನ ಸೆಂಟ್ರಲ್ ಡಿಟೆಕ್ಟಿವ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ (ಸಿಡಿಟಿಐ) ಸಂಸ್ಥೆಯನ್ನು, ಅರ್ಬನ್ ಪೊಲೀಸಿಂಗ್ (ಸ್ಮಾರ್ಟ್ ಸಿಟಿ ಪೊಲೀಸಿಂಗ್) ಹಾಗೂ ಬ್ಲಾಕ್ ಚೈನ್ ತಂತ್ರಜ್ಞಾನದ ಉತ್ಕೃಷ್ಟತಾ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಈ ಕೇಂದ್ರದಲ್ಲಿ ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು, ಸಿಪಿಓಗಳು ಹಾಗೂ ಸಿಎಪಿಎಫ್ಗಳ ಪೊಲೀಸ್ ಅಧಿಕಾರಿಗಳಿಗೆ ತರಬೇತಿ ಕೋರ್ಸ್ಗಳನ್ನು ಒದಗಿಸಲಾಗುವುದು.
ಪೊಲೀಸ್ ಅಧಿಕಾರಿಗಳ ತನಿಖಾ ಗುಣಮಟ್ಟವನ್ನು ಸುಧಾರಿಸುವುದು ಈ ಕೇಂದ್ರದ ಪ್ರಮುಖ ಉದ್ದೇಶವಾಗಿದೆ.
ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಹ್ಲಾದ ಜೋಷಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದಕೀಯ ಶಿಕ್ಷಣ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಕೆ.ಸುಧಾಕರ್, ಬಿಪಿಆರ್ಡಿ ಮಹಾನಿರ್ದೇಶಕ ಬಾಲಾಜಿ ಶ್ರೀವಾಸ್ತವ, ಐಟಿಬಿಪಿ ಮಹಾನಿರ್ದೇಶಕ ಅನೀಶ್ ದಯಾಳ್ ಸಿಂಗ್, ಹೆಚ್ಚುವರಿ ಮಹಾನಿರ್ದೇಶಕ ನೀರಜ್ ಸಿನ್ಹಾ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಬೆಂಗಳೂರು ಪೊಲೀಸ್ ಮಹಾನೀರಿಕ್ಷಕ ಎಂ.ಚಂದ್ರಶೇಖರ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹಿರಿಯ ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…