ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಆವತಿ ಗ್ರಾಮದ 35 ಎಕರೆ ಪ್ರದೇಶದಲ್ಲಿ ಬ್ಯೂರೋ ಆಫ್ ಪೊಲೀಸ್ ರೀಸರ್ಚ್ ಅಂಡ್ ಡೆವಲಪ್ಮೆಂಟ್ (ಬಿ.ಪಿ.ಆರ್.ಡಿ.) ಸಂಸ್ಥೆಯಡಿ ಕಾರ್ಯನಿರ್ವಹಿಸುವ, ಕೇಂದ್ರೀಯ ಪತ್ತೇದಾರಿ ತರಬೇತಿ ಶಾಲೆಯ ಕಟ್ಟಡದ ಶಂಕುಸ್ಥಾಪನೆಯನ್ನು ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಷಾ ಅವರು ಇಂದು ನೆರವೇರಿಸಿದರು.
ಬೆಂಗಳೂರಿನ ಸೆಂಟ್ರಲ್ ಡಿಟೆಕ್ಟಿವ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ (ಸಿಡಿಟಿಐ) ಸಂಸ್ಥೆಯನ್ನು, ಅರ್ಬನ್ ಪೊಲೀಸಿಂಗ್ (ಸ್ಮಾರ್ಟ್ ಸಿಟಿ ಪೊಲೀಸಿಂಗ್) ಹಾಗೂ ಬ್ಲಾಕ್ ಚೈನ್ ತಂತ್ರಜ್ಞಾನದ ಉತ್ಕೃಷ್ಟತಾ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಈ ಕೇಂದ್ರದಲ್ಲಿ ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು, ಸಿಪಿಓಗಳು ಹಾಗೂ ಸಿಎಪಿಎಫ್ಗಳ ಪೊಲೀಸ್ ಅಧಿಕಾರಿಗಳಿಗೆ ತರಬೇತಿ ಕೋರ್ಸ್ಗಳನ್ನು ಒದಗಿಸಲಾಗುವುದು.
ಪೊಲೀಸ್ ಅಧಿಕಾರಿಗಳ ತನಿಖಾ ಗುಣಮಟ್ಟವನ್ನು ಸುಧಾರಿಸುವುದು ಈ ಕೇಂದ್ರದ ಪ್ರಮುಖ ಉದ್ದೇಶವಾಗಿದೆ.
ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಹ್ಲಾದ ಜೋಷಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದಕೀಯ ಶಿಕ್ಷಣ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಕೆ.ಸುಧಾಕರ್, ಬಿಪಿಆರ್ಡಿ ಮಹಾನಿರ್ದೇಶಕ ಬಾಲಾಜಿ ಶ್ರೀವಾಸ್ತವ, ಐಟಿಬಿಪಿ ಮಹಾನಿರ್ದೇಶಕ ಅನೀಶ್ ದಯಾಳ್ ಸಿಂಗ್, ಹೆಚ್ಚುವರಿ ಮಹಾನಿರ್ದೇಶಕ ನೀರಜ್ ಸಿನ್ಹಾ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಬೆಂಗಳೂರು ಪೊಲೀಸ್ ಮಹಾನೀರಿಕ್ಷಕ ಎಂ.ಚಂದ್ರಶೇಖರ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹಿರಿಯ ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…