ಬರಪರಿಹಾರಕ್ಕೆ ಮನವಿ ಸಲ್ಲಿಸಿ ನಾಲ್ಕು ತಿಂಗಳುಗಳಾಗಿವೆ. ಕೇಂದ್ರ ತಜ್ಞರ ಸಮಿತಿ ಬಂದು ಅಧ್ಯಯನ ಮಾಡಿ ವರದಿ ಸಲ್ಲಿಸಿಯಾಗಿದೆ. ನಿಯಮಗಳ ಪ್ರಕಾರ ಕೇಂದ್ರ ಗೃಹಸಚಿವರು ಅಧ್ಯಕ್ಷತೆಯ ಉನ್ನತಾಧಿಕಾರ ಸಮಿತಿ ಸಭೆ ನಡೆಸಿ ತಜ್ಞರ ವರದಿಯನ್ನು ಪರಿಶೀಲಿಸಿ ಪರಿಹಾರಕ್ಕೆ ಅನುಮೋದನೆ ನೀಡಬೇಕು. ಇಂತಹದ್ದೊಂದು ಸಣ್ಣ ಸಭೆ ನಡೆಸಲು ಕೇಂದ್ರ ಗೃಹಸಚಿವ ಅಮಿತ್ ಶಹಾ ಅವರಿಗೆ ಪುರುಸೊತ್ತಿಲ್ಲ. ಯಾವಾಗ ಬರ ಪರಿಹಾರ ನೀಡುತ್ತೀರಿ? ಅಮಿತ್ ಶಹಾ ಅವರೇ, ಕರ್ನಾಟಕಕ್ಕೆ ಕಾಲಿಡುವ ಮೊದಲು ಈ ಪ್ರಶ್ನೆಗೆ ಉತ್ತರಿಸಿರುವಿರಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ಹುಬ್ಬಳ್ಳಿ -ಧಾರವಾಡ ಸುತ್ತಮುತ್ತಲಿನ ಪಟ್ಟಣ ಹಾಗೂ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಮಹದಾಯಿಯ ಕಳಸಾ ನಾಲಾ ತಿರುವು ಯೋಜನೆಗೆ ಮತ್ತೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಅನುಮೋದನೆ ನಿರಾಕರಿಸಿದೆ. ಕೇಂದ್ರ ಅರಣ್ಣ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಹಾದಾಯಿ ಯೋಜನೆಗೆ ಅನುಮೋದನೆ ನೀಡದಿರಲು ನಿರ್ಧರಿಸಿದೆ. ಈ ಸಂದೇಶವನ್ನು ಕನ್ನಡಿಗರಿಗೆ ತಿಳಿಸಲು ಕರ್ನಾಟಕಕ್ಕೆ ಬರುತ್ತಿದ್ದೀರಾ ಅಮಿತ್ ಶಹಾ ಅವರೇ? ಎಂದಿದ್ದಾರೆ.
ಬಡ ಕನ್ನಡಿಗರ ಹಸಿವು ನೀಗಿಸಲೆಂದೇ ನಾವು ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಗೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದ ಅಡ್ಡಗಾಲು ಹಾಕುತ್ತಲೇ ಬಂದಿರುವುದು ಇಡೀ ದೇಶಕ್ಕೆ ಗೊತ್ತಿದೆ. ಅನ್ನಭಾಗ್ಯ ಯೋಜನೆಯಡಿ ವಿತರಿಸಲು ಬೇಕಾಗಿರುವ ಅಕ್ಕಿಯನ್ನು ಒಂದು ಕಿಲೋಗೆ 33 ರೂಪಾಯಿ ಕೊಟ್ಟು ಖರೀದಿಸುತ್ತೇವೆ ಎಂದು ಹೇಳಿದರೂ ಅಕ್ಕಿ ಕೊಡಲಿಲ್ಲ. ಈಗ ಅದೇ ಅಕ್ಕಿಯನ್ನು ‘’ಭಾರತ್ ಬ್ರಾಂಡ್’’ ಎಂಬ ಹೆಸರಿನಲ್ಲಿ ಒಂದು ಕಿಲೋಗೆ ರೂ.29ರಂತೆ ಮಾರಾಟ ಮಾಡಲು ಹೊರಟಿದೆ. ಯಾಕೆ ಕನ್ನಡಿಗರ ಹಸಿವು ಹಸಿವಲ್ಲವೇ ಅಮಿತ್ ಶಹಾ ಅವರೇ? ಎಂದು ಪ್ರಶ್ನಿಸಿದ್ದಾರೆ.
ಸುಮಾರು 2.5 ಲಕ್ಷ ಹೆಕ್ಟೇರ್ ಜಮೀನಿಗೆ ನೀರುಣಿಸುವ ಭದ್ರ ಮೇಲ್ದಂಡೆ ಯೋಜನೆಗೆ ರೂ.5300 ಕೋಟಿ ಅನುದಾನ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿ ವರ್ಷಗಳೇ ಕಳೆದಿವೆ. ಆದರೆ ಈ ವರೆಗೆ ಒಂದೇ ಒಂದು ಪೈಸೆ ಅನುದಾನ ನೀಡಿಲ್ಲ. ಕೃಷ್ಣಾ ,ಕಾವೇರಿ, ಮಹದಾಯಿ, ಮೇಕೆದಾಟು ಸೇರಿದಂತೆ ಕರ್ನಾಟಕದ ಎಲ್ಲ ನೀರಾವರಿ ಯೋಜನೆಗಳ ಬಗ್ಗೆ ಇದೇ ರೀತಿಯ ನಿರ್ಲಕ್ಷ್ಯ ಯಾಕೆ? ಎಂದು ಕೇಳಿದ್ದಾರೆ.
ತೆರಿಗೆ ಸಂಗ್ರಹಿಸಿ ದೇಶದ ಬೊಕ್ಕಸಕ್ಕೆ ತುಂಬುವುದರಲ್ಲಿ ಕರ್ನಾಟಕವು ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಆದರೆ ಹದಿನೈದನೇ ಹಣಕಾಸು ಆಯೋಗ ತೆರಿಗೆ ಹಂಚಿಕೆಯ ಪ್ರಮಾಣವನ್ನು ಶೇಕಡಾ 4.7ರಿಂದ ಶೇಕಡಾ 3.74ಕ್ಕೆ ಇಳಿಸಿದೆ. ಕನ್ನಡಿಗರ ಬೆವರಿನ ತೆರಿಗೆಯ ಮೇಲೆ ಯಾಕೆ ಕೇಂದ್ರ ಸರ್ಕಾರಕ್ಕೆ ಕೆಂಗಣ್ಣು? ಅತ್ತ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ, ಇತ್ತ ತಾರತಮ್ಯದಿಂದಾಗಿರುವ ನಷ್ಟ ತುಂಬುವ ವಿಶೇಷ ಅನುದಾನಕ್ಕೂ ಹಣಕಾಸು ಸಚಿವರಿಂದ ಕೊಕ್ಕೆ? ಇಂತಹ ಅನ್ಯಾಯ ಎಸಗಿ ಕರ್ನಾಟಕಕ್ಕೆ ಬಂದು ಕನ್ನಡಿಗರನ್ನು ಹೇಗೆ ಎದುರಿಸುತ್ತೀರಿ ಅಮಿತ್ ಶಹಾ ಅವರೇ? ಎಂದು ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…