Categories: ರಾಜ್ಯ

ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರಿಗೆ ಅಮಿತ ಪ್ರಶ್ನೆಗಳು

ಬರಪರಿಹಾರಕ್ಕೆ ಮನವಿ ಸಲ್ಲಿಸಿ ನಾಲ್ಕು ತಿಂಗಳುಗಳಾಗಿವೆ. ಕೇಂದ್ರ ತಜ್ಞರ ಸಮಿತಿ ಬಂದು ಅಧ್ಯಯನ ಮಾಡಿ ವರದಿ ಸಲ್ಲಿಸಿಯಾಗಿದೆ. ನಿಯಮಗಳ ಪ್ರಕಾರ ಕೇಂದ್ರ ಗೃಹಸಚಿವರು ಅಧ್ಯಕ್ಷತೆಯ ಉನ್ನತಾಧಿಕಾರ ಸಮಿತಿ ಸಭೆ ನಡೆಸಿ ತಜ್ಞರ ವರದಿಯನ್ನು ಪರಿಶೀಲಿಸಿ ಪರಿಹಾರಕ್ಕೆ ಅನುಮೋದನೆ ನೀಡಬೇಕು. ಇಂತಹದ್ದೊಂದು ಸಣ್ಣ ಸಭೆ ನಡೆಸಲು ಕೇಂದ್ರ ಗೃಹಸಚಿವ ಅಮಿತ್ ಶಹಾ ಅವರಿಗೆ ಪುರುಸೊತ್ತಿಲ್ಲ. ಯಾವಾಗ ಬರ ಪರಿಹಾರ ನೀಡುತ್ತೀರಿ? ಅಮಿತ್ ಶಹಾ ಅವರೇ, ಕರ್ನಾಟಕಕ್ಕೆ ಕಾಲಿಡುವ ಮೊದಲು ಈ ಪ್ರಶ್ನೆಗೆ ಉತ್ತರಿಸಿರುವಿರಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಹುಬ್ಬಳ್ಳಿ -ಧಾರವಾಡ ಸುತ್ತಮುತ್ತಲಿನ ಪಟ್ಟಣ ಹಾಗೂ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಮಹದಾಯಿಯ ಕಳಸಾ ನಾಲಾ ತಿರುವು ಯೋಜನೆಗೆ ಮತ್ತೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಅನುಮೋದನೆ ನಿರಾಕರಿಸಿದೆ. ಕೇಂದ್ರ ಅರಣ್ಣ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ  ಮಹಾದಾಯಿ ಯೋಜನೆಗೆ ಅನುಮೋದನೆ ನೀಡದಿರಲು ನಿರ್ಧರಿಸಿದೆ. ಈ ಸಂದೇಶವನ್ನು ಕನ್ನಡಿಗರಿಗೆ ತಿಳಿಸಲು ಕರ್ನಾಟಕಕ್ಕೆ ಬರುತ್ತಿದ್ದೀರಾ ಅಮಿತ್ ಶಹಾ ಅವರೇ? ಎಂದಿದ್ದಾರೆ.

ಬಡ ಕನ್ನಡಿಗರ ಹಸಿವು ನೀಗಿಸಲೆಂದೇ ನಾವು ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಗೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದ ಅಡ್ಡಗಾಲು ಹಾಕುತ್ತಲೇ ಬಂದಿರುವುದು ಇಡೀ ದೇಶಕ್ಕೆ ಗೊತ್ತಿದೆ. ಅನ್ನಭಾಗ್ಯ ಯೋಜನೆಯಡಿ ವಿತರಿಸಲು ಬೇಕಾಗಿರುವ ಅಕ್ಕಿಯನ್ನು  ಒಂದು ಕಿಲೋಗೆ 33 ರೂಪಾಯಿ ಕೊಟ್ಟು ಖರೀದಿಸುತ್ತೇವೆ ಎಂದು ಹೇಳಿದರೂ ಅಕ್ಕಿ ಕೊಡಲಿಲ್ಲ. ಈಗ ಅದೇ ಅಕ್ಕಿಯನ್ನು ‘’ಭಾರತ್ ಬ್ರಾಂಡ್’’ ಎಂಬ ಹೆಸರಿನಲ್ಲಿ  ಒಂದು ಕಿಲೋಗೆ ರೂ.29ರಂತೆ ಮಾರಾಟ ಮಾಡಲು ಹೊರಟಿದೆ. ಯಾಕೆ ಕನ್ನಡಿಗರ ಹಸಿವು ಹಸಿವಲ್ಲವೇ ಅಮಿತ್ ಶಹಾ ಅವರೇ? ಎಂದು ಪ್ರಶ್ನಿಸಿದ್ದಾರೆ.

ಸುಮಾರು 2.5 ಲಕ್ಷ ಹೆಕ್ಟೇರ್ ಜಮೀನಿಗೆ ನೀರುಣಿಸುವ ಭದ್ರ ಮೇಲ್ದಂಡೆ ಯೋಜನೆಗೆ ರೂ.5300 ಕೋಟಿ ಅನುದಾನ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿ ವರ್ಷಗಳೇ ಕಳೆದಿವೆ. ಆದರೆ ಈ ವರೆಗೆ ಒಂದೇ ಒಂದು ಪೈಸೆ ಅನುದಾನ ನೀಡಿಲ್ಲ.  ಕೃಷ್ಣಾ ,ಕಾವೇರಿ, ಮಹದಾಯಿ, ಮೇಕೆದಾಟು  ಸೇರಿದಂತೆ ಕರ್ನಾಟಕದ ಎಲ್ಲ ನೀರಾವರಿ ಯೋಜನೆಗಳ ಬಗ್ಗೆ ಇದೇ ರೀತಿಯ ನಿರ್ಲಕ್ಷ್ಯ ಯಾಕೆ? ಎಂದು ಕೇಳಿದ್ದಾರೆ.

ತೆರಿಗೆ ಸಂಗ್ರಹಿಸಿ ದೇಶದ ಬೊಕ್ಕಸಕ್ಕೆ ತುಂಬುವುದರಲ್ಲಿ ಕರ್ನಾಟಕವು ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಆದರೆ ಹದಿನೈದನೇ ಹಣಕಾಸು ಆಯೋಗ  ತೆರಿಗೆ ಹಂಚಿಕೆಯ ಪ್ರಮಾಣವನ್ನು ಶೇಕಡಾ 4.7ರಿಂದ ಶೇಕಡಾ 3.74ಕ್ಕೆ ಇಳಿಸಿದೆ. ಕನ್ನಡಿಗರ ಬೆವರಿನ ತೆರಿಗೆಯ ಮೇಲೆ ಯಾಕೆ ಕೇಂದ್ರ ಸರ್ಕಾರಕ್ಕೆ ಕೆಂಗಣ್ಣು? ಅತ್ತ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ, ಇತ್ತ ತಾರತಮ್ಯದಿಂದಾಗಿರುವ ನಷ್ಟ ತುಂಬುವ ವಿಶೇಷ ಅನುದಾನಕ್ಕೂ ಹಣಕಾಸು ಸಚಿವರಿಂದ ಕೊಕ್ಕೆ? ಇಂತಹ ಅನ್ಯಾಯ ಎಸಗಿ ಕರ್ನಾಟಕಕ್ಕೆ ಬಂದು ಕನ್ನಡಿಗರನ್ನು ಹೇಗೆ ಎದುರಿಸುತ್ತೀರಿ ಅಮಿತ್ ಶಹಾ ಅವರೇ? ಎಂದು ಪ್ರಶ್ನೆ ಮಾಡಿದ್ದಾರೆ.

Ramesh Babu

Journalist

Recent Posts

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

2 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

14 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

15 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

17 hours ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

19 hours ago

ಖಾತೆ ಹಂಚಿಕೆ ಕುರಿತು ಸಚಿವ ಕೆ.ಎಚ್. ಮುನಿಯಪ್ಪ ಅಸಮಾಧಾನ: “ಸಿನಿಯಾರಿಟಿಗೆ ಗೌರವ ಸಿಕ್ಕಿಲ್ಲ”- ಕೆ.ಎಚ್ ಮುನಿಯಪ್ಪ

ದೇವನಹಳ್ಳಿ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಅವರು…

22 hours ago