Categories: ರಾಜ್ಯ

ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರಿಗೆ ಅಮಿತ ಪ್ರಶ್ನೆಗಳು

ಬರಪರಿಹಾರಕ್ಕೆ ಮನವಿ ಸಲ್ಲಿಸಿ ನಾಲ್ಕು ತಿಂಗಳುಗಳಾಗಿವೆ. ಕೇಂದ್ರ ತಜ್ಞರ ಸಮಿತಿ ಬಂದು ಅಧ್ಯಯನ ಮಾಡಿ ವರದಿ ಸಲ್ಲಿಸಿಯಾಗಿದೆ. ನಿಯಮಗಳ ಪ್ರಕಾರ ಕೇಂದ್ರ ಗೃಹಸಚಿವರು ಅಧ್ಯಕ್ಷತೆಯ ಉನ್ನತಾಧಿಕಾರ ಸಮಿತಿ ಸಭೆ ನಡೆಸಿ ತಜ್ಞರ ವರದಿಯನ್ನು ಪರಿಶೀಲಿಸಿ ಪರಿಹಾರಕ್ಕೆ ಅನುಮೋದನೆ ನೀಡಬೇಕು. ಇಂತಹದ್ದೊಂದು ಸಣ್ಣ ಸಭೆ ನಡೆಸಲು ಕೇಂದ್ರ ಗೃಹಸಚಿವ ಅಮಿತ್ ಶಹಾ ಅವರಿಗೆ ಪುರುಸೊತ್ತಿಲ್ಲ. ಯಾವಾಗ ಬರ ಪರಿಹಾರ ನೀಡುತ್ತೀರಿ? ಅಮಿತ್ ಶಹಾ ಅವರೇ, ಕರ್ನಾಟಕಕ್ಕೆ ಕಾಲಿಡುವ ಮೊದಲು ಈ ಪ್ರಶ್ನೆಗೆ ಉತ್ತರಿಸಿರುವಿರಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಹುಬ್ಬಳ್ಳಿ -ಧಾರವಾಡ ಸುತ್ತಮುತ್ತಲಿನ ಪಟ್ಟಣ ಹಾಗೂ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಮಹದಾಯಿಯ ಕಳಸಾ ನಾಲಾ ತಿರುವು ಯೋಜನೆಗೆ ಮತ್ತೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಅನುಮೋದನೆ ನಿರಾಕರಿಸಿದೆ. ಕೇಂದ್ರ ಅರಣ್ಣ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ  ಮಹಾದಾಯಿ ಯೋಜನೆಗೆ ಅನುಮೋದನೆ ನೀಡದಿರಲು ನಿರ್ಧರಿಸಿದೆ. ಈ ಸಂದೇಶವನ್ನು ಕನ್ನಡಿಗರಿಗೆ ತಿಳಿಸಲು ಕರ್ನಾಟಕಕ್ಕೆ ಬರುತ್ತಿದ್ದೀರಾ ಅಮಿತ್ ಶಹಾ ಅವರೇ? ಎಂದಿದ್ದಾರೆ.

ಬಡ ಕನ್ನಡಿಗರ ಹಸಿವು ನೀಗಿಸಲೆಂದೇ ನಾವು ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಗೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದ ಅಡ್ಡಗಾಲು ಹಾಕುತ್ತಲೇ ಬಂದಿರುವುದು ಇಡೀ ದೇಶಕ್ಕೆ ಗೊತ್ತಿದೆ. ಅನ್ನಭಾಗ್ಯ ಯೋಜನೆಯಡಿ ವಿತರಿಸಲು ಬೇಕಾಗಿರುವ ಅಕ್ಕಿಯನ್ನು  ಒಂದು ಕಿಲೋಗೆ 33 ರೂಪಾಯಿ ಕೊಟ್ಟು ಖರೀದಿಸುತ್ತೇವೆ ಎಂದು ಹೇಳಿದರೂ ಅಕ್ಕಿ ಕೊಡಲಿಲ್ಲ. ಈಗ ಅದೇ ಅಕ್ಕಿಯನ್ನು ‘’ಭಾರತ್ ಬ್ರಾಂಡ್’’ ಎಂಬ ಹೆಸರಿನಲ್ಲಿ  ಒಂದು ಕಿಲೋಗೆ ರೂ.29ರಂತೆ ಮಾರಾಟ ಮಾಡಲು ಹೊರಟಿದೆ. ಯಾಕೆ ಕನ್ನಡಿಗರ ಹಸಿವು ಹಸಿವಲ್ಲವೇ ಅಮಿತ್ ಶಹಾ ಅವರೇ? ಎಂದು ಪ್ರಶ್ನಿಸಿದ್ದಾರೆ.

ಸುಮಾರು 2.5 ಲಕ್ಷ ಹೆಕ್ಟೇರ್ ಜಮೀನಿಗೆ ನೀರುಣಿಸುವ ಭದ್ರ ಮೇಲ್ದಂಡೆ ಯೋಜನೆಗೆ ರೂ.5300 ಕೋಟಿ ಅನುದಾನ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿ ವರ್ಷಗಳೇ ಕಳೆದಿವೆ. ಆದರೆ ಈ ವರೆಗೆ ಒಂದೇ ಒಂದು ಪೈಸೆ ಅನುದಾನ ನೀಡಿಲ್ಲ.  ಕೃಷ್ಣಾ ,ಕಾವೇರಿ, ಮಹದಾಯಿ, ಮೇಕೆದಾಟು  ಸೇರಿದಂತೆ ಕರ್ನಾಟಕದ ಎಲ್ಲ ನೀರಾವರಿ ಯೋಜನೆಗಳ ಬಗ್ಗೆ ಇದೇ ರೀತಿಯ ನಿರ್ಲಕ್ಷ್ಯ ಯಾಕೆ? ಎಂದು ಕೇಳಿದ್ದಾರೆ.

ತೆರಿಗೆ ಸಂಗ್ರಹಿಸಿ ದೇಶದ ಬೊಕ್ಕಸಕ್ಕೆ ತುಂಬುವುದರಲ್ಲಿ ಕರ್ನಾಟಕವು ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಆದರೆ ಹದಿನೈದನೇ ಹಣಕಾಸು ಆಯೋಗ  ತೆರಿಗೆ ಹಂಚಿಕೆಯ ಪ್ರಮಾಣವನ್ನು ಶೇಕಡಾ 4.7ರಿಂದ ಶೇಕಡಾ 3.74ಕ್ಕೆ ಇಳಿಸಿದೆ. ಕನ್ನಡಿಗರ ಬೆವರಿನ ತೆರಿಗೆಯ ಮೇಲೆ ಯಾಕೆ ಕೇಂದ್ರ ಸರ್ಕಾರಕ್ಕೆ ಕೆಂಗಣ್ಣು? ಅತ್ತ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ, ಇತ್ತ ತಾರತಮ್ಯದಿಂದಾಗಿರುವ ನಷ್ಟ ತುಂಬುವ ವಿಶೇಷ ಅನುದಾನಕ್ಕೂ ಹಣಕಾಸು ಸಚಿವರಿಂದ ಕೊಕ್ಕೆ? ಇಂತಹ ಅನ್ಯಾಯ ಎಸಗಿ ಕರ್ನಾಟಕಕ್ಕೆ ಬಂದು ಕನ್ನಡಿಗರನ್ನು ಹೇಗೆ ಎದುರಿಸುತ್ತೀರಿ ಅಮಿತ್ ಶಹಾ ಅವರೇ? ಎಂದು ಪ್ರಶ್ನೆ ಮಾಡಿದ್ದಾರೆ.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

11 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

15 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

15 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

19 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago