ಬರಪರಿಹಾರಕ್ಕೆ ಮನವಿ ಸಲ್ಲಿಸಿ ನಾಲ್ಕು ತಿಂಗಳುಗಳಾಗಿವೆ. ಕೇಂದ್ರ ತಜ್ಞರ ಸಮಿತಿ ಬಂದು ಅಧ್ಯಯನ ಮಾಡಿ ವರದಿ ಸಲ್ಲಿಸಿಯಾಗಿದೆ. ನಿಯಮಗಳ ಪ್ರಕಾರ ಕೇಂದ್ರ ಗೃಹಸಚಿವರು ಅಧ್ಯಕ್ಷತೆಯ ಉನ್ನತಾಧಿಕಾರ ಸಮಿತಿ ಸಭೆ ನಡೆಸಿ ತಜ್ಞರ ವರದಿಯನ್ನು ಪರಿಶೀಲಿಸಿ ಪರಿಹಾರಕ್ಕೆ ಅನುಮೋದನೆ ನೀಡಬೇಕು. ಇಂತಹದ್ದೊಂದು ಸಣ್ಣ ಸಭೆ ನಡೆಸಲು ಕೇಂದ್ರ ಗೃಹಸಚಿವ ಅಮಿತ್ ಶಹಾ ಅವರಿಗೆ ಪುರುಸೊತ್ತಿಲ್ಲ. ಯಾವಾಗ ಬರ ಪರಿಹಾರ ನೀಡುತ್ತೀರಿ? ಅಮಿತ್ ಶಹಾ ಅವರೇ, ಕರ್ನಾಟಕಕ್ಕೆ ಕಾಲಿಡುವ ಮೊದಲು ಈ ಪ್ರಶ್ನೆಗೆ ಉತ್ತರಿಸಿರುವಿರಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ಹುಬ್ಬಳ್ಳಿ -ಧಾರವಾಡ ಸುತ್ತಮುತ್ತಲಿನ ಪಟ್ಟಣ ಹಾಗೂ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಮಹದಾಯಿಯ ಕಳಸಾ ನಾಲಾ ತಿರುವು ಯೋಜನೆಗೆ ಮತ್ತೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಅನುಮೋದನೆ ನಿರಾಕರಿಸಿದೆ. ಕೇಂದ್ರ ಅರಣ್ಣ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಹಾದಾಯಿ ಯೋಜನೆಗೆ ಅನುಮೋದನೆ ನೀಡದಿರಲು ನಿರ್ಧರಿಸಿದೆ. ಈ ಸಂದೇಶವನ್ನು ಕನ್ನಡಿಗರಿಗೆ ತಿಳಿಸಲು ಕರ್ನಾಟಕಕ್ಕೆ ಬರುತ್ತಿದ್ದೀರಾ ಅಮಿತ್ ಶಹಾ ಅವರೇ? ಎಂದಿದ್ದಾರೆ.
ಬಡ ಕನ್ನಡಿಗರ ಹಸಿವು ನೀಗಿಸಲೆಂದೇ ನಾವು ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಗೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದ ಅಡ್ಡಗಾಲು ಹಾಕುತ್ತಲೇ ಬಂದಿರುವುದು ಇಡೀ ದೇಶಕ್ಕೆ ಗೊತ್ತಿದೆ. ಅನ್ನಭಾಗ್ಯ ಯೋಜನೆಯಡಿ ವಿತರಿಸಲು ಬೇಕಾಗಿರುವ ಅಕ್ಕಿಯನ್ನು ಒಂದು ಕಿಲೋಗೆ 33 ರೂಪಾಯಿ ಕೊಟ್ಟು ಖರೀದಿಸುತ್ತೇವೆ ಎಂದು ಹೇಳಿದರೂ ಅಕ್ಕಿ ಕೊಡಲಿಲ್ಲ. ಈಗ ಅದೇ ಅಕ್ಕಿಯನ್ನು ‘’ಭಾರತ್ ಬ್ರಾಂಡ್’’ ಎಂಬ ಹೆಸರಿನಲ್ಲಿ ಒಂದು ಕಿಲೋಗೆ ರೂ.29ರಂತೆ ಮಾರಾಟ ಮಾಡಲು ಹೊರಟಿದೆ. ಯಾಕೆ ಕನ್ನಡಿಗರ ಹಸಿವು ಹಸಿವಲ್ಲವೇ ಅಮಿತ್ ಶಹಾ ಅವರೇ? ಎಂದು ಪ್ರಶ್ನಿಸಿದ್ದಾರೆ.
ಸುಮಾರು 2.5 ಲಕ್ಷ ಹೆಕ್ಟೇರ್ ಜಮೀನಿಗೆ ನೀರುಣಿಸುವ ಭದ್ರ ಮೇಲ್ದಂಡೆ ಯೋಜನೆಗೆ ರೂ.5300 ಕೋಟಿ ಅನುದಾನ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿ ವರ್ಷಗಳೇ ಕಳೆದಿವೆ. ಆದರೆ ಈ ವರೆಗೆ ಒಂದೇ ಒಂದು ಪೈಸೆ ಅನುದಾನ ನೀಡಿಲ್ಲ. ಕೃಷ್ಣಾ ,ಕಾವೇರಿ, ಮಹದಾಯಿ, ಮೇಕೆದಾಟು ಸೇರಿದಂತೆ ಕರ್ನಾಟಕದ ಎಲ್ಲ ನೀರಾವರಿ ಯೋಜನೆಗಳ ಬಗ್ಗೆ ಇದೇ ರೀತಿಯ ನಿರ್ಲಕ್ಷ್ಯ ಯಾಕೆ? ಎಂದು ಕೇಳಿದ್ದಾರೆ.
ತೆರಿಗೆ ಸಂಗ್ರಹಿಸಿ ದೇಶದ ಬೊಕ್ಕಸಕ್ಕೆ ತುಂಬುವುದರಲ್ಲಿ ಕರ್ನಾಟಕವು ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಆದರೆ ಹದಿನೈದನೇ ಹಣಕಾಸು ಆಯೋಗ ತೆರಿಗೆ ಹಂಚಿಕೆಯ ಪ್ರಮಾಣವನ್ನು ಶೇಕಡಾ 4.7ರಿಂದ ಶೇಕಡಾ 3.74ಕ್ಕೆ ಇಳಿಸಿದೆ. ಕನ್ನಡಿಗರ ಬೆವರಿನ ತೆರಿಗೆಯ ಮೇಲೆ ಯಾಕೆ ಕೇಂದ್ರ ಸರ್ಕಾರಕ್ಕೆ ಕೆಂಗಣ್ಣು? ಅತ್ತ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ, ಇತ್ತ ತಾರತಮ್ಯದಿಂದಾಗಿರುವ ನಷ್ಟ ತುಂಬುವ ವಿಶೇಷ ಅನುದಾನಕ್ಕೂ ಹಣಕಾಸು ಸಚಿವರಿಂದ ಕೊಕ್ಕೆ? ಇಂತಹ ಅನ್ಯಾಯ ಎಸಗಿ ಕರ್ನಾಟಕಕ್ಕೆ ಬಂದು ಕನ್ನಡಿಗರನ್ನು ಹೇಗೆ ಎದುರಿಸುತ್ತೀರಿ ಅಮಿತ್ ಶಹಾ ಅವರೇ? ಎಂದು ಪ್ರಶ್ನೆ ಮಾಡಿದ್ದಾರೆ.
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…