Categories: ರಾಜ್ಯ

ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರಿಗೆ ಅಮಿತ ಪ್ರಶ್ನೆಗಳು

ಬರಪರಿಹಾರಕ್ಕೆ ಮನವಿ ಸಲ್ಲಿಸಿ ನಾಲ್ಕು ತಿಂಗಳುಗಳಾಗಿವೆ. ಕೇಂದ್ರ ತಜ್ಞರ ಸಮಿತಿ ಬಂದು ಅಧ್ಯಯನ ಮಾಡಿ ವರದಿ ಸಲ್ಲಿಸಿಯಾಗಿದೆ. ನಿಯಮಗಳ ಪ್ರಕಾರ ಕೇಂದ್ರ ಗೃಹಸಚಿವರು ಅಧ್ಯಕ್ಷತೆಯ ಉನ್ನತಾಧಿಕಾರ ಸಮಿತಿ ಸಭೆ ನಡೆಸಿ ತಜ್ಞರ ವರದಿಯನ್ನು ಪರಿಶೀಲಿಸಿ ಪರಿಹಾರಕ್ಕೆ ಅನುಮೋದನೆ ನೀಡಬೇಕು. ಇಂತಹದ್ದೊಂದು ಸಣ್ಣ ಸಭೆ ನಡೆಸಲು ಕೇಂದ್ರ ಗೃಹಸಚಿವ ಅಮಿತ್ ಶಹಾ ಅವರಿಗೆ ಪುರುಸೊತ್ತಿಲ್ಲ. ಯಾವಾಗ ಬರ ಪರಿಹಾರ ನೀಡುತ್ತೀರಿ? ಅಮಿತ್ ಶಹಾ ಅವರೇ, ಕರ್ನಾಟಕಕ್ಕೆ ಕಾಲಿಡುವ ಮೊದಲು ಈ ಪ್ರಶ್ನೆಗೆ ಉತ್ತರಿಸಿರುವಿರಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಹುಬ್ಬಳ್ಳಿ -ಧಾರವಾಡ ಸುತ್ತಮುತ್ತಲಿನ ಪಟ್ಟಣ ಹಾಗೂ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಮಹದಾಯಿಯ ಕಳಸಾ ನಾಲಾ ತಿರುವು ಯೋಜನೆಗೆ ಮತ್ತೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಅನುಮೋದನೆ ನಿರಾಕರಿಸಿದೆ. ಕೇಂದ್ರ ಅರಣ್ಣ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ  ಮಹಾದಾಯಿ ಯೋಜನೆಗೆ ಅನುಮೋದನೆ ನೀಡದಿರಲು ನಿರ್ಧರಿಸಿದೆ. ಈ ಸಂದೇಶವನ್ನು ಕನ್ನಡಿಗರಿಗೆ ತಿಳಿಸಲು ಕರ್ನಾಟಕಕ್ಕೆ ಬರುತ್ತಿದ್ದೀರಾ ಅಮಿತ್ ಶಹಾ ಅವರೇ? ಎಂದಿದ್ದಾರೆ.

ಬಡ ಕನ್ನಡಿಗರ ಹಸಿವು ನೀಗಿಸಲೆಂದೇ ನಾವು ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಗೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದ ಅಡ್ಡಗಾಲು ಹಾಕುತ್ತಲೇ ಬಂದಿರುವುದು ಇಡೀ ದೇಶಕ್ಕೆ ಗೊತ್ತಿದೆ. ಅನ್ನಭಾಗ್ಯ ಯೋಜನೆಯಡಿ ವಿತರಿಸಲು ಬೇಕಾಗಿರುವ ಅಕ್ಕಿಯನ್ನು  ಒಂದು ಕಿಲೋಗೆ 33 ರೂಪಾಯಿ ಕೊಟ್ಟು ಖರೀದಿಸುತ್ತೇವೆ ಎಂದು ಹೇಳಿದರೂ ಅಕ್ಕಿ ಕೊಡಲಿಲ್ಲ. ಈಗ ಅದೇ ಅಕ್ಕಿಯನ್ನು ‘’ಭಾರತ್ ಬ್ರಾಂಡ್’’ ಎಂಬ ಹೆಸರಿನಲ್ಲಿ  ಒಂದು ಕಿಲೋಗೆ ರೂ.29ರಂತೆ ಮಾರಾಟ ಮಾಡಲು ಹೊರಟಿದೆ. ಯಾಕೆ ಕನ್ನಡಿಗರ ಹಸಿವು ಹಸಿವಲ್ಲವೇ ಅಮಿತ್ ಶಹಾ ಅವರೇ? ಎಂದು ಪ್ರಶ್ನಿಸಿದ್ದಾರೆ.

ಸುಮಾರು 2.5 ಲಕ್ಷ ಹೆಕ್ಟೇರ್ ಜಮೀನಿಗೆ ನೀರುಣಿಸುವ ಭದ್ರ ಮೇಲ್ದಂಡೆ ಯೋಜನೆಗೆ ರೂ.5300 ಕೋಟಿ ಅನುದಾನ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿ ವರ್ಷಗಳೇ ಕಳೆದಿವೆ. ಆದರೆ ಈ ವರೆಗೆ ಒಂದೇ ಒಂದು ಪೈಸೆ ಅನುದಾನ ನೀಡಿಲ್ಲ.  ಕೃಷ್ಣಾ ,ಕಾವೇರಿ, ಮಹದಾಯಿ, ಮೇಕೆದಾಟು  ಸೇರಿದಂತೆ ಕರ್ನಾಟಕದ ಎಲ್ಲ ನೀರಾವರಿ ಯೋಜನೆಗಳ ಬಗ್ಗೆ ಇದೇ ರೀತಿಯ ನಿರ್ಲಕ್ಷ್ಯ ಯಾಕೆ? ಎಂದು ಕೇಳಿದ್ದಾರೆ.

ತೆರಿಗೆ ಸಂಗ್ರಹಿಸಿ ದೇಶದ ಬೊಕ್ಕಸಕ್ಕೆ ತುಂಬುವುದರಲ್ಲಿ ಕರ್ನಾಟಕವು ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಆದರೆ ಹದಿನೈದನೇ ಹಣಕಾಸು ಆಯೋಗ  ತೆರಿಗೆ ಹಂಚಿಕೆಯ ಪ್ರಮಾಣವನ್ನು ಶೇಕಡಾ 4.7ರಿಂದ ಶೇಕಡಾ 3.74ಕ್ಕೆ ಇಳಿಸಿದೆ. ಕನ್ನಡಿಗರ ಬೆವರಿನ ತೆರಿಗೆಯ ಮೇಲೆ ಯಾಕೆ ಕೇಂದ್ರ ಸರ್ಕಾರಕ್ಕೆ ಕೆಂಗಣ್ಣು? ಅತ್ತ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ, ಇತ್ತ ತಾರತಮ್ಯದಿಂದಾಗಿರುವ ನಷ್ಟ ತುಂಬುವ ವಿಶೇಷ ಅನುದಾನಕ್ಕೂ ಹಣಕಾಸು ಸಚಿವರಿಂದ ಕೊಕ್ಕೆ? ಇಂತಹ ಅನ್ಯಾಯ ಎಸಗಿ ಕರ್ನಾಟಕಕ್ಕೆ ಬಂದು ಕನ್ನಡಿಗರನ್ನು ಹೇಗೆ ಎದುರಿಸುತ್ತೀರಿ ಅಮಿತ್ ಶಹಾ ಅವರೇ? ಎಂದು ಪ್ರಶ್ನೆ ಮಾಡಿದ್ದಾರೆ.

Ramesh Babu

Journalist

Recent Posts

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

10 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

15 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

16 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

18 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

21 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

1 day ago