ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕಿಶನ್ ರೆಡ್ಡಿ ವಿರುದ್ಧ ಹೈದರಾಬಾದ್ನಲ್ಲಿ ಚುನಾವಣಾ ಸಂಬಂಧಿತ ಚಟುವಟಿಕೆಗಳಲ್ಲಿ ಮಕ್ಕಳನ್ನು ಬಳಸಿಕೊಂಡ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.
ಮೊಘಲ್ಪುರ ಪೊಲೀಸರು ನೀಡಿದ ಪ್ರಥಮ ಮಾಹಿತಿ ವರದಿಯ ಪ್ರಕಾರ, ಗೃಹ ಸಚಿವ ಅಮಿತ್ ಶಾ ಅವರು ಮೇ 1 ರಂದು ತೆಲಂಗಾಣ ರಾಜ್ಯದ ಹೈದರಾಬಾದ್ ಲೋಕಸಭಾ ಕ್ಷೇತ್ರದ ಲಾದರ್ವಾಜಾದಿಂದ ಸುಧಾ ಟಾಕೀಸ್ ವರೆಗೆ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದಾರೆ.
ರ್ಯಾಲಿಯು ಸುಧಾ ಟಾಕೀಸ್ನಲ್ಲಿ ಸಾರ್ವಜನಿಕ ಸಭೆಯೊಂದಿಗೆ ಮುಕ್ತಾಯವಾಯಿತು, ಅಲ್ಲಿ ವೇದಿಕೆಯಲ್ಲಿ ಅಮಿತ್ ಶಾ ಅವರೊಂದಿಗೆ ಕೆಲವು ಮಕ್ಕಳು ಇದ್ದರು. ಅದರಲ್ಲಿ ಒಬ್ಬ ಮಗು ಬಿಜೆಪಿ ಚಿಹ್ನೆಯೊಂದಿಗೆ ಕಾಣಿಸಿಕೊಂಡಿತ್ತು.
ಎಫ್ಐಆರ್ ಪ್ರಕಾರ, ಹೈದರಾಬಾದ್ ಬಿಜೆಪಿ ಅಭ್ಯರ್ಥಿ ಕೆ.ಮಾಧವಿ ಲತಾ, ಸಿಕಂದರಾಬಾದ್ ಅಭ್ಯರ್ಥಿ ಜಿ. ಕಿಶನ್ ರೆಡ್ಡಿ ಮತ್ತು ಬಿಜೆಪಿ ಶಾಸಕ ರಾಜಾ ಸಿಂಗ್ ಕೂಡ ಆರೋಪಿಗಳಾಗಿದ್ದಾರೆ.
ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿರಿಯ ಉಪಾಧ್ಯಕ್ಷ ಜಿ.ನಿರಂಜನ್ ಅವರು ದೂರು ದಾಖಲಿಸಿದ್ದಾರೆ.
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…
ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…
ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…