ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಂಧಾನ: ಡಾ.ಕೆ.ಸುಧಾಕರ್ ವಿರುದ್ಧ ಎಸ್.ಆರ್.ವಿಶ್ವನಾಥ್ ಮುನಿಸು ಅಂತ್ಯ

ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಟಿ.ಟಿ.ಡಿ ಆಡಳಿತ ಮಂಡಳಿ ಸದಸ್ಯರಾದ ಎಸ್.ಆರ್.ವಿಶ್ವನಾಥ್  ಅವರ ಮನೆಗೆ ಇಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಡಾ.ಕೆ.ಸುಧಾಕರ್ ಅವರು ಭೇಟಿ ನೀಡಿ ಲೋಕಸಭಾ ಚುನಾವಣೆ ಕುರಿತಂತೆ ಸಮಾಲೋಚನೆ ನಡೆಸಿ ಸಹಕಾರ ಕೋರಿದರು.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಂಧಾನದ ಪರಿಣಾಮ ಚಿಕ್ಕಬಳ್ಳಾಪುರ‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಹಾಗೂ ಯಲಹಂಕ ಶಾಸಕ ಎಸ್. ಆರ್. ವಿಶ್ವನಾಥ್ ನಡುವಿನ ಮುನಿಸು ಅಂತ್ಯವಾಗಿದೆ.

ತಮ್ಮ ಪುತ್ರ ಅಲೋಕ್ ವಿಶ್ವನಾಥ್ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ್ದರಿಂದ ಬೇಸರಗೊಂಡು ಡಾ.ಕೆ.ಸುಧಾಕರ್ ವಿರುದ್ಧ  ವಿಶ್ವನಾಥ್ ಮುನಿಸಿಕೊಂಡಿದ್ದರು.

ಮಂಗಳವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ವಿಜಯ ಸಂಕಲ್ಪ‌ ಸಮಾವೇಶದ ಬಳಿಕ‌ ಅಮಿತ್ ಶಾ ಅವರು ಇಬ್ಬರೂ ನಾಯಕರಿಗೆ ಒಟ್ಟಾಗಿ‌ ಚುನಾವಣೆ ಎದುರಿಸುವಂತೆ ಸೂಚಿಸಿದ್ದರು ಎಂದು ತಿಳಿದುಬಂದಿದೆ.

ವರಿಷ್ಠರ ಸೂಚನೆಯ ಬಳಿಕ ಬುಧವಾರ ಬೆಳಿಗ್ಗೆ ಯಲಹಂಕ‌ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಸಿಂಗನಾಯಕನಗಳ್ಳಿ ನಿವಾಸಕ್ಕೆ ಆಗಮಿಸಿದ ಡಾ.ಕೆ.ಸುಧಾಕರ್ ಮಾತುಕತೆ ನಡೆಸಿದರು.

ವಿಶ್ವನಾಥ್ ಅವರ ಮನೆಯಲ್ಲೇ ಉಪಾಹಾರ ಸೇವಿಸಿ ನಾಮಪತ್ರ ಸಲ್ಲಿಕೆಗೆ ಆಗಮಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್, ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಮುನಿರಾಜ್, ಮಾಜಿ ಸಚಿವ ಶ್ರೀ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸೇರಿದಂತೆ ಮುಖಂಡರು ಹಾಗೂ ಕಾರ್ಯಕರ್ತರು ಉಪ್ಥಿತರಿದ್ದರು.

Ramesh Babu

Journalist

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

6 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

6 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

9 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

1 day ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

1 day ago