ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಟಿ.ಟಿ.ಡಿ ಆಡಳಿತ ಮಂಡಳಿ ಸದಸ್ಯರಾದ ಎಸ್.ಆರ್.ವಿಶ್ವನಾಥ್ ಅವರ ಮನೆಗೆ ಇಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಡಾ.ಕೆ.ಸುಧಾಕರ್ ಅವರು ಭೇಟಿ ನೀಡಿ ಲೋಕಸಭಾ ಚುನಾವಣೆ ಕುರಿತಂತೆ ಸಮಾಲೋಚನೆ ನಡೆಸಿ ಸಹಕಾರ ಕೋರಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಧಾನದ ಪರಿಣಾಮ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಹಾಗೂ ಯಲಹಂಕ ಶಾಸಕ ಎಸ್. ಆರ್. ವಿಶ್ವನಾಥ್ ನಡುವಿನ ಮುನಿಸು ಅಂತ್ಯವಾಗಿದೆ.
ಮಂಗಳವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ವಿಜಯ ಸಂಕಲ್ಪ ಸಮಾವೇಶದ ಬಳಿಕ ಅಮಿತ್ ಶಾ ಅವರು ಇಬ್ಬರೂ ನಾಯಕರಿಗೆ ಒಟ್ಟಾಗಿ ಚುನಾವಣೆ ಎದುರಿಸುವಂತೆ ಸೂಚಿಸಿದ್ದರು ಎಂದು ತಿಳಿದುಬಂದಿದೆ.
ವರಿಷ್ಠರ ಸೂಚನೆಯ ಬಳಿಕ ಬುಧವಾರ ಬೆಳಿಗ್ಗೆ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಸಿಂಗನಾಯಕನಗಳ್ಳಿ ನಿವಾಸಕ್ಕೆ ಆಗಮಿಸಿದ ಡಾ.ಕೆ.ಸುಧಾಕರ್ ಮಾತುಕತೆ ನಡೆಸಿದರು.
ವಿಶ್ವನಾಥ್ ಅವರ ಮನೆಯಲ್ಲೇ ಉಪಾಹಾರ ಸೇವಿಸಿ ನಾಮಪತ್ರ ಸಲ್ಲಿಕೆಗೆ ಆಗಮಿಸುವಂತೆ ಮನವಿ ಮಾಡಿದರು.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…