ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಂಧಾನ: ಡಾ.ಕೆ.ಸುಧಾಕರ್ ವಿರುದ್ಧ ಎಸ್.ಆರ್.ವಿಶ್ವನಾಥ್ ಮುನಿಸು ಅಂತ್ಯ

ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಟಿ.ಟಿ.ಡಿ ಆಡಳಿತ ಮಂಡಳಿ ಸದಸ್ಯರಾದ ಎಸ್.ಆರ್.ವಿಶ್ವನಾಥ್  ಅವರ ಮನೆಗೆ ಇಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಡಾ.ಕೆ.ಸುಧಾಕರ್ ಅವರು ಭೇಟಿ ನೀಡಿ ಲೋಕಸಭಾ ಚುನಾವಣೆ ಕುರಿತಂತೆ ಸಮಾಲೋಚನೆ ನಡೆಸಿ ಸಹಕಾರ ಕೋರಿದರು.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಂಧಾನದ ಪರಿಣಾಮ ಚಿಕ್ಕಬಳ್ಳಾಪುರ‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಹಾಗೂ ಯಲಹಂಕ ಶಾಸಕ ಎಸ್. ಆರ್. ವಿಶ್ವನಾಥ್ ನಡುವಿನ ಮುನಿಸು ಅಂತ್ಯವಾಗಿದೆ.

ತಮ್ಮ ಪುತ್ರ ಅಲೋಕ್ ವಿಶ್ವನಾಥ್ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ್ದರಿಂದ ಬೇಸರಗೊಂಡು ಡಾ.ಕೆ.ಸುಧಾಕರ್ ವಿರುದ್ಧ  ವಿಶ್ವನಾಥ್ ಮುನಿಸಿಕೊಂಡಿದ್ದರು.

ಮಂಗಳವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ವಿಜಯ ಸಂಕಲ್ಪ‌ ಸಮಾವೇಶದ ಬಳಿಕ‌ ಅಮಿತ್ ಶಾ ಅವರು ಇಬ್ಬರೂ ನಾಯಕರಿಗೆ ಒಟ್ಟಾಗಿ‌ ಚುನಾವಣೆ ಎದುರಿಸುವಂತೆ ಸೂಚಿಸಿದ್ದರು ಎಂದು ತಿಳಿದುಬಂದಿದೆ.

ವರಿಷ್ಠರ ಸೂಚನೆಯ ಬಳಿಕ ಬುಧವಾರ ಬೆಳಿಗ್ಗೆ ಯಲಹಂಕ‌ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಸಿಂಗನಾಯಕನಗಳ್ಳಿ ನಿವಾಸಕ್ಕೆ ಆಗಮಿಸಿದ ಡಾ.ಕೆ.ಸುಧಾಕರ್ ಮಾತುಕತೆ ನಡೆಸಿದರು.

ವಿಶ್ವನಾಥ್ ಅವರ ಮನೆಯಲ್ಲೇ ಉಪಾಹಾರ ಸೇವಿಸಿ ನಾಮಪತ್ರ ಸಲ್ಲಿಕೆಗೆ ಆಗಮಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್, ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಮುನಿರಾಜ್, ಮಾಜಿ ಸಚಿವ ಶ್ರೀ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸೇರಿದಂತೆ ಮುಖಂಡರು ಹಾಗೂ ಕಾರ್ಯಕರ್ತರು ಉಪ್ಥಿತರಿದ್ದರು.

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

7 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

9 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

9 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

10 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

14 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

15 hours ago