ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಟಿ.ಟಿ.ಡಿ ಆಡಳಿತ ಮಂಡಳಿ ಸದಸ್ಯರಾದ ಎಸ್.ಆರ್.ವಿಶ್ವನಾಥ್ ಅವರ ಮನೆಗೆ ಇಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಡಾ.ಕೆ.ಸುಧಾಕರ್ ಅವರು ಭೇಟಿ ನೀಡಿ ಲೋಕಸಭಾ ಚುನಾವಣೆ ಕುರಿತಂತೆ ಸಮಾಲೋಚನೆ ನಡೆಸಿ ಸಹಕಾರ ಕೋರಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಧಾನದ ಪರಿಣಾಮ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಹಾಗೂ ಯಲಹಂಕ ಶಾಸಕ ಎಸ್. ಆರ್. ವಿಶ್ವನಾಥ್ ನಡುವಿನ ಮುನಿಸು ಅಂತ್ಯವಾಗಿದೆ.
ಮಂಗಳವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ವಿಜಯ ಸಂಕಲ್ಪ ಸಮಾವೇಶದ ಬಳಿಕ ಅಮಿತ್ ಶಾ ಅವರು ಇಬ್ಬರೂ ನಾಯಕರಿಗೆ ಒಟ್ಟಾಗಿ ಚುನಾವಣೆ ಎದುರಿಸುವಂತೆ ಸೂಚಿಸಿದ್ದರು ಎಂದು ತಿಳಿದುಬಂದಿದೆ.
ವರಿಷ್ಠರ ಸೂಚನೆಯ ಬಳಿಕ ಬುಧವಾರ ಬೆಳಿಗ್ಗೆ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಸಿಂಗನಾಯಕನಗಳ್ಳಿ ನಿವಾಸಕ್ಕೆ ಆಗಮಿಸಿದ ಡಾ.ಕೆ.ಸುಧಾಕರ್ ಮಾತುಕತೆ ನಡೆಸಿದರು.
ವಿಶ್ವನಾಥ್ ಅವರ ಮನೆಯಲ್ಲೇ ಉಪಾಹಾರ ಸೇವಿಸಿ ನಾಮಪತ್ರ ಸಲ್ಲಿಕೆಗೆ ಆಗಮಿಸುವಂತೆ ಮನವಿ ಮಾಡಿದರು.
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…