ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್‌ ಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್.ಪಾಟೀಲ್‌ ಅವರಿಗೆ ಸಲ್ಲಿಸಿರುವ ಬೇಡಿಕೆ ಪತ್ರದ ವಿವರ ಇಲ್ಲಿದೆ ಓದಿ…

ದೇಶದಲ್ಲೇ ರಾಜಸ್ಥಾನವನ್ನು ಹೊರತುಪಡಿಸಿದರೆ ಕರ್ನಾಟಕ ಅತಿ ಹೆಚ್ಚು ಒಣ ಭೂಮಿ ಹೊಂದಿರುವ ರಾಜ್ಯವಾಗಿದೆ. ಕರ್ನಾಟಕದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಹಾಗೂ ಅನುಷ್ಠಾನಗೊಳಿಸಲಾಗಿರುವ ನೀರಾವರಿ ಯೋಜನೆಗಳು ರಾಜ್ಯದ ಕೃಷಿ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳಿಗೆ ಕಾರಣವಾಗಿವೆ. ಉತ್ಪಾದನೆಯಲ್ಲಿನ ಹೆಚ್ಚಳ, ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆಯಿಂದ ನೀರಿನ ನಿರ್ವಹಣೆಯಲ್ಲಿ ಸುಧಾರಣೆ, ಹವಾಮಾನ ವೈಪರೀತ್ಯದ ನಿರ್ವಹಣೆ ಮೂಲಕ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿ ಸಾಧಿಸಲು ಸಾಧ್ಯವಾಗಿದೆ. ರಾಜ್ಯ ಸರ್ಕಾರ ಕೃಷಿ ಉತ್ಪಾದನೆ ಹೆಚ್ಚಳ, ರೈತರ ಆದಾಯ ಹೆಚ್ಚಳ ಮಾಡಲು ಪೂರಕವಾಗಿ ನಿರಂತರ ಮತ್ತು ಸಮರ್ಪಕ ನೀರಾವರಿ ಪೂರೈಕೆಗೆ ಬದ್ಧವಾಗಿದೆ.

ಕರ್ನಾಟಕ ರಾಜ್ಯದ ನೀರಾವರಿ ಯೋಜನೆ/ವಿಷಯಗಳಿಗೆ ಅನುಮತಿ ನೀಡುವುದಕ್ಕೆ ಸಂಬಂಧಿಸಿದಂತೆ ನಾನು ತಮ್ಮ ಗಮನ ಸೆಳೆಯಬಯಸುತ್ತೇನೆ. ಕೇಂದ್ರ ಸರ್ಕಾರದ ಅನುಮತಿಗಾಗಿ ಬಾಕಿಯಿರುವ ಕರ್ನಾಟಕದ ಮೇಕೆದಾಟು ಯೋಜನೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಅನುಷ್ಠಾನದ ಕುರಿತು ತಾವು ವೈಯಕ್ತಿಕವಾಗಿ ಗಮನ ಹರಿಸಲು ಮನವಿ ಮಾಡುತ್ತೇನೆ.

ಕರ್ನಾಟಕ ರಾಜ್ಯದ ಬಾಕಿಯಿರುವ ಎಲ್ಲಾ ನೀರಾವರಿ ಯೋಜನೆಗಳಿಗೆ/ಪ್ರಸ್ತಾವನೆಗಳಿಗೆ ಅನುಮತಿ/ಕ್ಲಿಯರೆನ್ಸ್‌ ನೀಡಲು ಜಲಶಕ್ತಿ ಸಚಿವಾಲಯಕ್ಕೆ ತಾವು ನಿರ್ದೇಶನ ನೀಡಬೇಕು. ಈ ಯೋಜನೆಗಳು ರಾಜ್ಯದ ನೀರಾವರಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆ ಮೂಲಕ ರೈತರ ಕಲ್ಯಾಣಕ್ಕೆ ನೆರವಾಗಲಿದೆ.

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

2 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

4 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

7 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

8 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

10 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

11 hours ago