ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್‌ ಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್.ಪಾಟೀಲ್‌ ಅವರಿಗೆ ಸಲ್ಲಿಸಿರುವ ಬೇಡಿಕೆ ಪತ್ರದ ವಿವರ ಇಲ್ಲಿದೆ ಓದಿ…

ದೇಶದಲ್ಲೇ ರಾಜಸ್ಥಾನವನ್ನು ಹೊರತುಪಡಿಸಿದರೆ ಕರ್ನಾಟಕ ಅತಿ ಹೆಚ್ಚು ಒಣ ಭೂಮಿ ಹೊಂದಿರುವ ರಾಜ್ಯವಾಗಿದೆ. ಕರ್ನಾಟಕದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಹಾಗೂ ಅನುಷ್ಠಾನಗೊಳಿಸಲಾಗಿರುವ ನೀರಾವರಿ ಯೋಜನೆಗಳು ರಾಜ್ಯದ ಕೃಷಿ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳಿಗೆ ಕಾರಣವಾಗಿವೆ. ಉತ್ಪಾದನೆಯಲ್ಲಿನ ಹೆಚ್ಚಳ, ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆಯಿಂದ ನೀರಿನ ನಿರ್ವಹಣೆಯಲ್ಲಿ ಸುಧಾರಣೆ, ಹವಾಮಾನ ವೈಪರೀತ್ಯದ ನಿರ್ವಹಣೆ ಮೂಲಕ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿ ಸಾಧಿಸಲು ಸಾಧ್ಯವಾಗಿದೆ. ರಾಜ್ಯ ಸರ್ಕಾರ ಕೃಷಿ ಉತ್ಪಾದನೆ ಹೆಚ್ಚಳ, ರೈತರ ಆದಾಯ ಹೆಚ್ಚಳ ಮಾಡಲು ಪೂರಕವಾಗಿ ನಿರಂತರ ಮತ್ತು ಸಮರ್ಪಕ ನೀರಾವರಿ ಪೂರೈಕೆಗೆ ಬದ್ಧವಾಗಿದೆ.

ಕರ್ನಾಟಕ ರಾಜ್ಯದ ನೀರಾವರಿ ಯೋಜನೆ/ವಿಷಯಗಳಿಗೆ ಅನುಮತಿ ನೀಡುವುದಕ್ಕೆ ಸಂಬಂಧಿಸಿದಂತೆ ನಾನು ತಮ್ಮ ಗಮನ ಸೆಳೆಯಬಯಸುತ್ತೇನೆ. ಕೇಂದ್ರ ಸರ್ಕಾರದ ಅನುಮತಿಗಾಗಿ ಬಾಕಿಯಿರುವ ಕರ್ನಾಟಕದ ಮೇಕೆದಾಟು ಯೋಜನೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಅನುಷ್ಠಾನದ ಕುರಿತು ತಾವು ವೈಯಕ್ತಿಕವಾಗಿ ಗಮನ ಹರಿಸಲು ಮನವಿ ಮಾಡುತ್ತೇನೆ.

ಕರ್ನಾಟಕ ರಾಜ್ಯದ ಬಾಕಿಯಿರುವ ಎಲ್ಲಾ ನೀರಾವರಿ ಯೋಜನೆಗಳಿಗೆ/ಪ್ರಸ್ತಾವನೆಗಳಿಗೆ ಅನುಮತಿ/ಕ್ಲಿಯರೆನ್ಸ್‌ ನೀಡಲು ಜಲಶಕ್ತಿ ಸಚಿವಾಲಯಕ್ಕೆ ತಾವು ನಿರ್ದೇಶನ ನೀಡಬೇಕು. ಈ ಯೋಜನೆಗಳು ರಾಜ್ಯದ ನೀರಾವರಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆ ಮೂಲಕ ರೈತರ ಕಲ್ಯಾಣಕ್ಕೆ ನೆರವಾಗಲಿದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

38 minutes ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

54 minutes ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

14 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

1 day ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

1 day ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 day ago