ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್.ಪಾಟೀಲ್ ಅವರಿಗೆ ಸಲ್ಲಿಸಿರುವ ಬೇಡಿಕೆ ಪತ್ರದ ವಿವರ ಇಲ್ಲಿದೆ ಓದಿ…
ದೇಶದಲ್ಲೇ ರಾಜಸ್ಥಾನವನ್ನು ಹೊರತುಪಡಿಸಿದರೆ ಕರ್ನಾಟಕ ಅತಿ ಹೆಚ್ಚು ಒಣ ಭೂಮಿ ಹೊಂದಿರುವ ರಾಜ್ಯವಾಗಿದೆ. ಕರ್ನಾಟಕದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಹಾಗೂ ಅನುಷ್ಠಾನಗೊಳಿಸಲಾಗಿರುವ ನೀರಾವರಿ ಯೋಜನೆಗಳು ರಾಜ್ಯದ ಕೃಷಿ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳಿಗೆ ಕಾರಣವಾಗಿವೆ. ಉತ್ಪಾದನೆಯಲ್ಲಿನ ಹೆಚ್ಚಳ, ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆಯಿಂದ ನೀರಿನ ನಿರ್ವಹಣೆಯಲ್ಲಿ ಸುಧಾರಣೆ, ಹವಾಮಾನ ವೈಪರೀತ್ಯದ ನಿರ್ವಹಣೆ ಮೂಲಕ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿ ಸಾಧಿಸಲು ಸಾಧ್ಯವಾಗಿದೆ. ರಾಜ್ಯ ಸರ್ಕಾರ ಕೃಷಿ ಉತ್ಪಾದನೆ ಹೆಚ್ಚಳ, ರೈತರ ಆದಾಯ ಹೆಚ್ಚಳ ಮಾಡಲು ಪೂರಕವಾಗಿ ನಿರಂತರ ಮತ್ತು ಸಮರ್ಪಕ ನೀರಾವರಿ ಪೂರೈಕೆಗೆ ಬದ್ಧವಾಗಿದೆ.
ಕರ್ನಾಟಕ ರಾಜ್ಯದ ನೀರಾವರಿ ಯೋಜನೆ/ವಿಷಯಗಳಿಗೆ ಅನುಮತಿ ನೀಡುವುದಕ್ಕೆ ಸಂಬಂಧಿಸಿದಂತೆ ನಾನು ತಮ್ಮ ಗಮನ ಸೆಳೆಯಬಯಸುತ್ತೇನೆ. ಕೇಂದ್ರ ಸರ್ಕಾರದ ಅನುಮತಿಗಾಗಿ ಬಾಕಿಯಿರುವ ಕರ್ನಾಟಕದ ಮೇಕೆದಾಟು ಯೋಜನೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಅನುಷ್ಠಾನದ ಕುರಿತು ತಾವು ವೈಯಕ್ತಿಕವಾಗಿ ಗಮನ ಹರಿಸಲು ಮನವಿ ಮಾಡುತ್ತೇನೆ.
ಕರ್ನಾಟಕ ರಾಜ್ಯದ ಬಾಕಿಯಿರುವ ಎಲ್ಲಾ ನೀರಾವರಿ ಯೋಜನೆಗಳಿಗೆ/ಪ್ರಸ್ತಾವನೆಗಳಿಗೆ ಅನುಮತಿ/ಕ್ಲಿಯರೆನ್ಸ್ ನೀಡಲು ಜಲಶಕ್ತಿ ಸಚಿವಾಲಯಕ್ಕೆ ತಾವು ನಿರ್ದೇಶನ ನೀಡಬೇಕು. ಈ ಯೋಜನೆಗಳು ರಾಜ್ಯದ ನೀರಾವರಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆ ಮೂಲಕ ರೈತರ ಕಲ್ಯಾಣಕ್ಕೆ ನೆರವಾಗಲಿದೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…