ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವರಾದ ಕಿಂಜರಾಪು ರಾಮಮೋಹನ ನಾಯ್ಡು ಅವರಿಗೆ ನೀಡಿದ ಪತ್ರದ ವಿವರ;
ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿ
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ರಾಜ್ಯ ಸರ್ಕಾರವು ದಿನಾಂಕ 6-10-2005 ರಂದು ಒಪ್ಪಂದ ಮಾಡಿಕೊಂಡಿದೆ. ಒಪ್ಪಂದದ ನಿಯಮ ಬಿ (2) (v) ಪ್ರಕಾರ ಕಾರ್ಯನಿಯೋಜಕರು ವಿಮಾನ ನಿಲ್ದಾಣದ ವಿಸ್ತರಣೆಗಾಗಿ ಅಗತ್ಯ ವಿರುವ ಹೆಚ್ಚುವರಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಯಾವುದೇ ಋಣಭಾರವಿಲ್ಲದೆ ನಿಯೋಜಿತರಿಗೆ ಉಚಿತವಾಗಿ ವರ್ಗಾಯಿಸಬೇಕು. ಅದರಂತೆ, ಅಗತ್ಯವಿರುವ ಭೂಮಿಯನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಉಚಿತವಾಗಿ ವರ್ಗಾಯಿಸಲಾಗಿದೆ. ಒಪ್ಪಂದದ ಷರತ್ತು ಬಿ 2 (VI) ಪ್ರಕಾರ, ನಿಯೋಜಿತರು ಮೈಸೂರು ವಿಮಾನ ನಿಲ್ದಾಣದ ಹೆಚ್ಚಿನ ಅಭಿವೃದ್ಧಿಯ ಬಂಡವಾಳ ವೆಚ್ಚ, ಮಾರ್ಪಾಡುಗಳು, ಬಲಪಡಿಸುವಿಕೆ ಮತ್ತು ಮೇಲ್ದರ್ಜೆಗೇರಿಸುವ ಎಲ್ಲಾ ವೆಚ್ಚಗಳನ್ನು ಭರಿಸಬೇಕು. ಅದರಂತೆ, ಮೈಸೂರು ವಿಮಾನ ನಿಲ್ದಾಣದ ವಿಸ್ತರಣೆಗೆ ಅಗತ್ಯವಿರುವ ಬಂಡವಾಳ ಹಾಗೂ ಇನ್ನಿತರೆ ವೆಚ್ಚಗಳನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವೇ ಭರಿಸಬೇಕಿದೆ.
ಈ ಹಿನ್ನೆಲೆಯಲ್ಲಿ, ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ ಅಗತ್ಯವಿರುವ 240 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ರಾಜ್ಯ ಸರ್ಕಾರವು 319.14 ಕೋಟಿಗಳ ಅನುದಾನವನ್ನು ಬಿಡುಗಡೆ ಮಾಡಿದೆ. ಭೂ ಸ್ವಾಧೀನ ಪ್ರಕ್ರಿಯೆಯು ಅಂತಿಮ ಹಂತದಲ್ಲಿದೆ.
ನವೆಂಬರ್ 2024 ರಲ್ಲಿ ಕಾವೇರಿ ನೀರಾವರಿ ನಿಗಮ ನಿಯಮಿತವು(ಸಿ. ಎನ್.ಎನ್.ಎಲ್) ವಿಮಾನ ನಿಲ್ದಾಣ ವಿಸ್ತರಣೆ ಪ್ರದೇಶದಲ್ಲಿ ಎರಡು ಕಂದಕಗಳ ಮತ್ತು 7 ಕಾಲುವೆಗಳ ಸ್ಥಳಾಂತರಕ್ಕೆ ವರದಿಯನ್ನು ಸಲ್ಲಿಸಿದ್ದು, ಇದಕ್ಕೆ ₹70 ಕೋಟಿಗಳ ವೆಚ್ಚವಾಗಲಿದೆ. ಅಂತೆಯೇ, ಕೆ.ಪಿ.ಟಿ.ಸಿಎಲ್ ಕೂಡ ಹೈ-ಟೆನ್ಷನ್ ಲೈನ್ ಗಳ ಮತ್ತು ಚೆಸ್ಕಾಂ ಲೋ ಟೆನ್ಶನ್ ವೈರ್ ಗಳ ಮಾರ್ಗ ಬದಲಾವಣೆಗೆ 31.82 ಕೋಟಿಗಳ ಅಂದಾಜು ವೆಚ್ಚವಾಗಲಿದೆ ಎಂದು ತಿಳಿಸಿದ್ದು, ಒಟ್ಟಾರೆ ಸದರಿ ಕಾಮಗಾರಿಗೆ 101.82 ಕೋಟಿಗಳ ಅನುದಾನದ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ಆದ್ದರಿಂದ, ರಾಜ್ಯ ಸರ್ಕಾರವು ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ 240 ಎಕರೆ ಭೂ ಸ್ವಾಧೀನಕ್ಕೆ ತಗಲುವ 319.14 ಕೋಟಿ ವೆಚ್ಚವನ್ನು ಭರಿಸಿದ್ದು, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು ವಿಸ್ತರಣೆಯ ಅಂದಾಜು ವೆಚ್ಚ 101.84 ಕೋಟಿಗಳ ಯುಟಿಲಿಟಿ ಸ್ಥಳಾಂತರದ ಯೋಜನೆಯನ್ನು ರೂಪಿಸಿ ಶ್ರೀಘ್ರವಾಗಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕೆಂದು ಕೋರಿದೆ.
ಬೆಂಗಳೂರು: ಸ್ವಚ್ಚ, ಸುರಕ್ಷಿತ ಬೆಂಗಳೂರಿಗಾಗಿ ಜಿಬಿಎ ಜತೆ ಕೈಜೋಡಿಸಿರುವ ಬೆಸ್ಕಾಂ,ನಗರದ ಜನರಿಗೆ ಸುರಕ್ಷಿತ ನಡಿಗೆಯ ಗ್ಯಾರಂಟಿ ನೀಡುವ ಉದ್ದೇಶದಿಂದ ನಿಗಮದ…
ದೊಡ್ಡಬಳ್ಳಾಪುರ: ತ್ರಿಬಲ್ ರೈಡಿಂಗ್ನಲ್ಲಿ ತೆರಳುತ್ತಿದ್ದ ಬೈಕ್ ಹಾಗೂ ಹಾಲಿನ ಕ್ಯಾಂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,…
ಪ್ರವಾಸ ಕಥನಗಳ ಬಗ್ಗೆ ಬಹಳ ಹಿಂದಿನಿಂದಲೂ ಸಾಕಷ್ಟು ಲೇಖನಗಳನ್ನು ಓದುತ್ತಲೇ ಇರುತ್ತೇನೆ. ಅದು ಪ್ರವಾಸೋದ್ಯಮಕ್ಕಾಗಿಯಲ್ಲ. ಏಕೆಂದರೆ ಪ್ರವಾಸ ವ್ಯಾಪಾರಿಗಳಿಗೆ ಒಂದು…
ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…
ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…
ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…