ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಕಿಂಜರಾಪು ರಾಮಮೋಹನ ನಾಯ್ಡುಗೆ ಮನವಿ ಪತ್ರ ನೀಡಿದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವರಾದ ಕಿಂಜರಾಪು ರಾಮಮೋಹನ ನಾಯ್ಡು ಅವರಿಗೆ ನೀಡಿದ ಪತ್ರದ ವಿವರ;

ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿ
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ರಾಜ್ಯ ಸರ್ಕಾರವು ದಿನಾಂಕ 6-10-2005 ರಂದು ಒಪ್ಪಂದ ಮಾಡಿಕೊಂಡಿದೆ. ಒಪ್ಪಂದದ ನಿಯಮ ಬಿ (2) (v) ಪ್ರಕಾರ ಕಾರ್ಯನಿಯೋಜಕರು ವಿಮಾನ ನಿಲ್ದಾಣದ ವಿಸ್ತರಣೆಗಾಗಿ ಅಗತ್ಯ ವಿರುವ ಹೆಚ್ಚುವರಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಯಾವುದೇ ಋಣಭಾರವಿಲ್ಲದೆ ನಿಯೋಜಿತರಿಗೆ ಉಚಿತವಾಗಿ ವರ್ಗಾಯಿಸಬೇಕು. ಅದರಂತೆ, ಅಗತ್ಯವಿರುವ ಭೂಮಿಯನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಉಚಿತವಾಗಿ ವರ್ಗಾಯಿಸಲಾಗಿದೆ. ಒಪ್ಪಂದದ ಷರತ್ತು ಬಿ 2 (VI) ಪ್ರಕಾರ, ನಿಯೋಜಿತರು ಮೈಸೂರು ವಿಮಾನ ನಿಲ್ದಾಣದ ಹೆಚ್ಚಿನ ಅಭಿವೃದ್ಧಿಯ ಬಂಡವಾಳ ವೆಚ್ಚ, ಮಾರ್ಪಾಡುಗಳು, ಬಲಪಡಿಸುವಿಕೆ ಮತ್ತು ಮೇಲ್ದರ್ಜೆಗೇರಿಸುವ ಎಲ್ಲಾ ವೆಚ್ಚಗಳನ್ನು ಭರಿಸಬೇಕು. ಅದರಂತೆ, ಮೈಸೂರು ವಿಮಾನ ನಿಲ್ದಾಣದ ವಿಸ್ತರಣೆಗೆ ಅಗತ್ಯವಿರುವ ಬಂಡವಾಳ ಹಾಗೂ ಇನ್ನಿತರೆ ವೆಚ್ಚಗಳನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವೇ ಭರಿಸಬೇಕಿದೆ.

ಈ ಹಿನ್ನೆಲೆಯಲ್ಲಿ, ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ ಅಗತ್ಯವಿರುವ 240 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ರಾಜ್ಯ ಸರ್ಕಾರವು 319.14 ಕೋಟಿಗಳ ಅನುದಾನವನ್ನು ಬಿಡುಗಡೆ ಮಾಡಿದೆ. ಭೂ ಸ್ವಾಧೀನ ಪ್ರಕ್ರಿಯೆಯು ಅಂತಿಮ ಹಂತದಲ್ಲಿದೆ.

ನವೆಂಬರ್ 2024 ರಲ್ಲಿ ಕಾವೇರಿ ನೀರಾವರಿ ನಿಗಮ ನಿಯಮಿತವು(ಸಿ. ಎನ್.ಎನ್.ಎಲ್) ವಿಮಾನ ನಿಲ್ದಾಣ ವಿಸ್ತರಣೆ ಪ್ರದೇಶದಲ್ಲಿ ಎರಡು ಕಂದಕಗಳ ಮತ್ತು 7 ಕಾಲುವೆಗಳ ಸ್ಥಳಾಂತರಕ್ಕೆ ವರದಿಯನ್ನು ಸಲ್ಲಿಸಿದ್ದು, ಇದಕ್ಕೆ ₹70 ಕೋಟಿಗಳ ವೆಚ್ಚವಾಗಲಿದೆ. ಅಂತೆಯೇ, ಕೆ.ಪಿ.ಟಿ.ಸಿಎಲ್ ಕೂಡ ಹೈ-ಟೆನ್ಷನ್ ಲೈನ್ ಗಳ ಮತ್ತು ಚೆಸ್ಕಾಂ ಲೋ ಟೆನ್ಶನ್ ವೈರ್ ಗಳ ಮಾರ್ಗ ಬದಲಾವಣೆಗೆ 31.82 ಕೋಟಿಗಳ ಅಂದಾಜು ವೆಚ್ಚವಾಗಲಿದೆ ಎಂದು ತಿಳಿಸಿದ್ದು, ಒಟ್ಟಾರೆ ಸದರಿ ಕಾಮಗಾರಿಗೆ 101.82 ಕೋಟಿಗಳ ಅನುದಾನದ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ಆದ್ದರಿಂದ, ರಾಜ್ಯ ಸರ್ಕಾರವು ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ 240 ಎಕರೆ ಭೂ ಸ್ವಾಧೀನಕ್ಕೆ ತಗಲುವ 319.14 ಕೋಟಿ ವೆಚ್ಚವನ್ನು ಭರಿಸಿದ್ದು, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು ವಿಸ್ತರಣೆಯ ಅಂದಾಜು ವೆಚ್ಚ 101.84 ಕೋಟಿಗಳ ಯುಟಿಲಿಟಿ ಸ್ಥಳಾಂತರದ ಯೋಜನೆಯನ್ನು ರೂಪಿಸಿ ಶ್ರೀಘ್ರವಾಗಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕೆಂದು ಕೋರಿದೆ.

Ramesh Babu

Journalist

Recent Posts

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

7 hours ago

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

1 day ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

1 day ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

1 day ago

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

2 days ago