ಪ್ರಧಾನಿ ನರೇಂದ್ರ ಮೋದಿಜೀ ಅವರ ನೇತೃತ್ವದ 3.0 ವಿಕಸಿತ ಭಾರತ ಬಜೆಟ್ 2024-25 ರಲ್ಲಿ ಅನ್ನದಾತ, ಬಡವ ಹಾಗೂ ಮಹಿಳೆ ಸೇರಿದಂತೆ ಈ 9 ಕ್ಷೇತ್ರಗಳಿಗೆ ಪ್ರಮುವಾಗಿ ಆದ್ಯತೆ ನೀಡಲಾಗಿದೆ. ಕೌಶಲ್ಯ, ಮಧ್ಯಮವರ್ಗ, ನಿರುದ್ಯೋಗ, ಎಮ್ ಎಸ್ ಎಮ್ ಇ ಕ್ಷೇತ್ರಗಳಿಗೂ ಒತ್ತು ನೀಡಲಾಗಿದೆ ಎಂದು ಹಳ್ಳಿ ರೈತ ಅಂಬರೀಶ್ ತಿಳಿಸಿದರು.
2024-25ನೇ ಸಾಲಿನ ಬಜೆಟ್ ನಲ್ಲಿ ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗಾಗಿ 1.48 ಲಕ್ಷ ಕೋಟಿ ಮೀಸಲಿಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದರು.
ದೇಶದ ಅರ್ಥ ವ್ಯವಸ್ಥೆಗೆ ಶರವೇಗ ನೀಡುವ ನಿಟ್ಟಿನಲ್ಲಿ ಘೋಷಿಸಿರುವ ಕಾರ್ಯಕ್ರಮಗಳು ಹಣದುಬ್ಬರವನ್ನು ನಿಯಂತ್ರಿಸಲಿದ್ದು ಬಡತನ ನಿರ್ಮೂಲನೆ, ಗ್ರಾಮೀಣಾಭಿವೃದ್ಧಿಗೆ 2.66 ಲಕ್ಷ ಕೋಟಿ ರೂ ಮೀಸಲಿರಿಸಿ, ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ರೂ ಅನುದಾನ ನೀಡುವ ಮೂಲಕ ರೈತರ ಏಳಿಗೆಗೆ, ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಲಾಗಿರುವುದು ರೈತರು ಹಾಗೂ ಸ್ತ್ರೀ ಕುಲದ ಬಗೆಗಿನ ಅದಮ್ಯ ವಿಶ್ವಾಸವನ್ನು ಸಂಕೇತಿಸಿದೆ ಎಂದು ತಿಳಿಸಿದರು.
ಆದರೆ, ಆಂಧ್ರಪ್ರದೇಶ ಹಾಗೂ ಬಿಹಾರ ರಾಜ್ಯಗಳಿಗೆ ಮಣೆ ಹಾಕುವ ಮೂಲಕ ಸರ್ಕಾರವನ್ನು ಉಳಿಸಿಕೊಳ್ಳುವ ಯತ್ನ ಮಾಡಲಾಗಿದೆ ಅಷ್ಟೆ. ಕರ್ನಾಟಕಕ್ಕೆ ಎಂದಿನಂತೆ ಕೇಂದ್ರ ಬಿಜೆಪಿ ಸರ್ಕಾರ ಮಲತಾಯಿ ಧೋರಣೆ ತೋರುವುದನ್ನು ಮುಂದುವರಿಸಿದೆ. ರಾಜ್ಯದಲ್ಲಿ ಬಾಕಿ ಇರುವ ಯಾವುದೇ ಪ್ರಮುಖ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿಲ್ಲ ಎಂದರು.
ಬೆಂಗಳೂರು ಗ್ರಾಮಾಂತರ: ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್, ಕಟೌಟ್ ಹಾಗೂ ಬಿಲ್ಬೋರ್ಡ್ಗಳನ್ನು ಅಳವಡಿಸದಂತೆ ರಾಜ್ಯ ಸರ್ಕಾರ ಮತ್ತು ನ್ಯಾಯಾಲಯಗಳು…
ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್ಗಳು ಹಾಗೂ ಇತರೆ…
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…