ಪ್ರಧಾನಿ ನರೇಂದ್ರ ಮೋದಿಜೀ ಅವರ ನೇತೃತ್ವದ 3.0 ವಿಕಸಿತ ಭಾರತ ಬಜೆಟ್ 2024-25 ರಲ್ಲಿ ಅನ್ನದಾತ, ಬಡವ ಹಾಗೂ ಮಹಿಳೆ ಸೇರಿದಂತೆ ಈ 9 ಕ್ಷೇತ್ರಗಳಿಗೆ ಪ್ರಮುವಾಗಿ ಆದ್ಯತೆ ನೀಡಲಾಗಿದೆ. ಕೌಶಲ್ಯ, ಮಧ್ಯಮವರ್ಗ, ನಿರುದ್ಯೋಗ, ಎಮ್ ಎಸ್ ಎಮ್ ಇ ಕ್ಷೇತ್ರಗಳಿಗೂ ಒತ್ತು ನೀಡಲಾಗಿದೆ ಎಂದು ಹಳ್ಳಿ ರೈತ ಅಂಬರೀಶ್ ತಿಳಿಸಿದರು.
2024-25ನೇ ಸಾಲಿನ ಬಜೆಟ್ ನಲ್ಲಿ ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗಾಗಿ 1.48 ಲಕ್ಷ ಕೋಟಿ ಮೀಸಲಿಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದರು.
ದೇಶದ ಅರ್ಥ ವ್ಯವಸ್ಥೆಗೆ ಶರವೇಗ ನೀಡುವ ನಿಟ್ಟಿನಲ್ಲಿ ಘೋಷಿಸಿರುವ ಕಾರ್ಯಕ್ರಮಗಳು ಹಣದುಬ್ಬರವನ್ನು ನಿಯಂತ್ರಿಸಲಿದ್ದು ಬಡತನ ನಿರ್ಮೂಲನೆ, ಗ್ರಾಮೀಣಾಭಿವೃದ್ಧಿಗೆ 2.66 ಲಕ್ಷ ಕೋಟಿ ರೂ ಮೀಸಲಿರಿಸಿ, ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ರೂ ಅನುದಾನ ನೀಡುವ ಮೂಲಕ ರೈತರ ಏಳಿಗೆಗೆ, ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಲಾಗಿರುವುದು ರೈತರು ಹಾಗೂ ಸ್ತ್ರೀ ಕುಲದ ಬಗೆಗಿನ ಅದಮ್ಯ ವಿಶ್ವಾಸವನ್ನು ಸಂಕೇತಿಸಿದೆ ಎಂದು ತಿಳಿಸಿದರು.
ಆದರೆ, ಆಂಧ್ರಪ್ರದೇಶ ಹಾಗೂ ಬಿಹಾರ ರಾಜ್ಯಗಳಿಗೆ ಮಣೆ ಹಾಕುವ ಮೂಲಕ ಸರ್ಕಾರವನ್ನು ಉಳಿಸಿಕೊಳ್ಳುವ ಯತ್ನ ಮಾಡಲಾಗಿದೆ ಅಷ್ಟೆ. ಕರ್ನಾಟಕಕ್ಕೆ ಎಂದಿನಂತೆ ಕೇಂದ್ರ ಬಿಜೆಪಿ ಸರ್ಕಾರ ಮಲತಾಯಿ ಧೋರಣೆ ತೋರುವುದನ್ನು ಮುಂದುವರಿಸಿದೆ. ರಾಜ್ಯದಲ್ಲಿ ಬಾಕಿ ಇರುವ ಯಾವುದೇ ಪ್ರಮುಖ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿಲ್ಲ ಎಂದರು.
ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…
ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…
ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…
ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…