ಕೋಲಾರ: ದೇಶದಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್ ಅವರ ಬಜೆಟ್ನಲ್ಲಿ ಬಡವರು, ಮಹಿಳೆಯರು, ಯುವಕರು ಹಾಗೂ ನಾಡಿನ ಅನ್ನದಾತನ ಸಬಲೀಕರಣದೊಂದಿಗೆ ವಿಕಸಿತ ಭಾರತದ ಪರಿಕಲ್ಪನೆಗೆ ಪೂರಕವಾದ ಬಜೆಟ್ ಆಗಿದೆ ಎಂದು ಜೆಡಿಎಸ್ ಎಸ್ಸಿ ಘಟಕದ ಜಿಲ್ಲಾ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಸಂತಸ ವ್ಯಕ್ತಪಡಿಸಿದರು
ಕೇಂದ್ರ ಬಜೆಟ್ ಕುರಿತು ಪತ್ರಕಾ ಹೇಳಿಕೆ ನೀಡಿದ ಅವರು ಬಜೆಟ್ನಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿಯೊಂದಿಗೆ ವಿಕಸಿತ ಭಾರತದ ಗುರಿಯನ್ನು ಸಾಧಿಸಲು ಪೂರಕವಾದ ಅಂಶಗಳಿಗೆ ಒತ್ತು ನೀಡಲಾಗಿದೆ ಈ ಸಾಲಿನ ಬಜೆಟ್ನಲ್ಲಿ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ೪ ಕೋಟಿ ಯುವಕರಿಗೆ ಮುಂದಿನ ಐದು ವರ್ಷಗಳಲ್ಲಿ ಉದ್ಯೋಗ ಒದಗಿಸುವ ಭರವಸೆಯನ್ನು ನೀಡಲಾಗಿದೆ ಕೃಷಿ ಉತ್ಪಾದನೆ ಹೆಚ್ಚಳ, ಉದ್ಯೋಗ ಸೃಷ್ಟಿ, ಮಾನವ ಸಂಪನ್ಮೂಲಗಳ ಅಭಿವೃದ್ಧಿ, ಉತ್ಪಾದನಾ ಕ್ಷೇತ್ರದ ಅಭಿವೃದ್ಧಿ, ಸಾಮಾಜಿಕ ನ್ಯಾಯ, ನಗರಾಭಿವೃದ್ಧಿ, ಇಂಧನ ಭದ್ರತೆ, ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಸುಧಾರಣೆ ಆವಿಷ್ಕಾರ ಸಂಶೋಧನೆ ಅಭಿವೃದ್ಧಿ, ಮುಂದಿನ ಪೀಳಿಗೆಗೆ ಆದ್ಯತೆ, ಎಂಎಸ್ಎಂಇ ಗಳಿಗೆ ಒತ್ತು ಸೇರಿದಂತೆ ೯ ವಲಯಗಳ ಅಭಿವೃದ್ಧಿಗೆ ಬಜೆಟ್ನಲ್ಲಿ ಯೋಜನೆಗಳಿಗೆ ಅಧ್ಯತೆ ನೀಡಲಾಗಿದೆ ಎಂದು ತಿಳಿಸಿದರು.
ದೇಶದ ಬೆನ್ನೆಲುಬಾದ ಅನ್ನದಾತನ ನೆರವಿಗಾಗಿ ಬಜೆಟ್ನಲ್ಲಿ ಹಲವು ಕಲ್ಯಾಣ ಯೋಜನೆ ಜಾರಿಯ ಭರವಸೆ ನೀಡಲಾಗಿದ್ದು, ಕೃಷಿ ಕ್ಷೇತ್ರಕ್ಕೆ ೧.೫೨ ಲಕ್ಷ ಕೋಟಿ ರೂ.ಗಳನ್ನು ಮೀಸಲಿರಿಸಿ ಕೃಷಿಯ ಸರ್ವಾಂಗೀಣ ಅಭಿವೃದ್ಧಿಯ ಬದ್ಧತೆಯನ್ನು ಬಜೆಟ್ನಲ್ಲಿ ವ್ಯಕ್ತಪಡಿಸಲಾಗಿದೆ ಮೂರು ಕೌಶಲ್ಯ ಯೋಜನೆಗಳನ್ನು ಪ್ರಕಟಿಸಲಾಗಿದ್ದು, ಶಿಕ್ಷಣ ಮತ್ತು ಆರೋಗ್ಯ ವಸತಿ ಕ್ಷೇತ್ರಕ್ಕೂ ಬಜೆಟ್ನಲ್ಲಿ ಒತ್ತು ನೀಡಲಾಗಿದ್ದು, ಮುಂದಿನ ಐದು ವರ್ಷಗಳಲ್ಲಿ ಪ್ರಧಾನ ಮಂತ್ರಿ ಅವಾಜ್ ಯೋಜನೆಯಡಿ ೩ ಕೋಟಿ ಮನೆ ನಿರ್ಮಾಣದ ಪ್ರಸ್ತಾವವನ್ನು ಬಜೆಟ್ ನಲ್ಲಿ ಇದ್ದು ಇದರ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ ಎಂದು ಯಲುವಗುಳಿ ನಾಗರಾಜ್ ತಿಳಿಸಿದರು.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ಪರವಾನಗಿ ಭೂ ಮಾಪಕರು ಎರಡು ತಿಂಗಳಿಂದ ಮುಷ್ಕರ ಹೂಡಿರುವುದರಿಂದ ಭೂ ಮಾಪನ ಇಲಾಖೆಯ…
ಕೇಂದ್ರ ಸರ್ಕಾರ ಕಳೆದ ಒಂದು ದಶಕದಿಂದ ವಿವಿಧ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಒಂದೊಂದೆ ಹೆಜ್ಜೆ ಇಟ್ಟುಕೊಂಡು ಬರುತ್ತಿದೆ ಎಂದು…
ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…
Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…
ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…