ಕೋಲಾರ: ದೇಶದಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್ ಅವರ ಬಜೆಟ್ನಲ್ಲಿ ಬಡವರು, ಮಹಿಳೆಯರು, ಯುವಕರು ಹಾಗೂ ನಾಡಿನ ಅನ್ನದಾತನ ಸಬಲೀಕರಣದೊಂದಿಗೆ ವಿಕಸಿತ ಭಾರತದ ಪರಿಕಲ್ಪನೆಗೆ ಪೂರಕವಾದ ಬಜೆಟ್ ಆಗಿದೆ ಎಂದು ಜೆಡಿಎಸ್ ಎಸ್ಸಿ ಘಟಕದ ಜಿಲ್ಲಾ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಸಂತಸ ವ್ಯಕ್ತಪಡಿಸಿದರು
ಕೇಂದ್ರ ಬಜೆಟ್ ಕುರಿತು ಪತ್ರಕಾ ಹೇಳಿಕೆ ನೀಡಿದ ಅವರು ಬಜೆಟ್ನಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿಯೊಂದಿಗೆ ವಿಕಸಿತ ಭಾರತದ ಗುರಿಯನ್ನು ಸಾಧಿಸಲು ಪೂರಕವಾದ ಅಂಶಗಳಿಗೆ ಒತ್ತು ನೀಡಲಾಗಿದೆ ಈ ಸಾಲಿನ ಬಜೆಟ್ನಲ್ಲಿ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ೪ ಕೋಟಿ ಯುವಕರಿಗೆ ಮುಂದಿನ ಐದು ವರ್ಷಗಳಲ್ಲಿ ಉದ್ಯೋಗ ಒದಗಿಸುವ ಭರವಸೆಯನ್ನು ನೀಡಲಾಗಿದೆ ಕೃಷಿ ಉತ್ಪಾದನೆ ಹೆಚ್ಚಳ, ಉದ್ಯೋಗ ಸೃಷ್ಟಿ, ಮಾನವ ಸಂಪನ್ಮೂಲಗಳ ಅಭಿವೃದ್ಧಿ, ಉತ್ಪಾದನಾ ಕ್ಷೇತ್ರದ ಅಭಿವೃದ್ಧಿ, ಸಾಮಾಜಿಕ ನ್ಯಾಯ, ನಗರಾಭಿವೃದ್ಧಿ, ಇಂಧನ ಭದ್ರತೆ, ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಸುಧಾರಣೆ ಆವಿಷ್ಕಾರ ಸಂಶೋಧನೆ ಅಭಿವೃದ್ಧಿ, ಮುಂದಿನ ಪೀಳಿಗೆಗೆ ಆದ್ಯತೆ, ಎಂಎಸ್ಎಂಇ ಗಳಿಗೆ ಒತ್ತು ಸೇರಿದಂತೆ ೯ ವಲಯಗಳ ಅಭಿವೃದ್ಧಿಗೆ ಬಜೆಟ್ನಲ್ಲಿ ಯೋಜನೆಗಳಿಗೆ ಅಧ್ಯತೆ ನೀಡಲಾಗಿದೆ ಎಂದು ತಿಳಿಸಿದರು.
ದೇಶದ ಬೆನ್ನೆಲುಬಾದ ಅನ್ನದಾತನ ನೆರವಿಗಾಗಿ ಬಜೆಟ್ನಲ್ಲಿ ಹಲವು ಕಲ್ಯಾಣ ಯೋಜನೆ ಜಾರಿಯ ಭರವಸೆ ನೀಡಲಾಗಿದ್ದು, ಕೃಷಿ ಕ್ಷೇತ್ರಕ್ಕೆ ೧.೫೨ ಲಕ್ಷ ಕೋಟಿ ರೂ.ಗಳನ್ನು ಮೀಸಲಿರಿಸಿ ಕೃಷಿಯ ಸರ್ವಾಂಗೀಣ ಅಭಿವೃದ್ಧಿಯ ಬದ್ಧತೆಯನ್ನು ಬಜೆಟ್ನಲ್ಲಿ ವ್ಯಕ್ತಪಡಿಸಲಾಗಿದೆ ಮೂರು ಕೌಶಲ್ಯ ಯೋಜನೆಗಳನ್ನು ಪ್ರಕಟಿಸಲಾಗಿದ್ದು, ಶಿಕ್ಷಣ ಮತ್ತು ಆರೋಗ್ಯ ವಸತಿ ಕ್ಷೇತ್ರಕ್ಕೂ ಬಜೆಟ್ನಲ್ಲಿ ಒತ್ತು ನೀಡಲಾಗಿದ್ದು, ಮುಂದಿನ ಐದು ವರ್ಷಗಳಲ್ಲಿ ಪ್ರಧಾನ ಮಂತ್ರಿ ಅವಾಜ್ ಯೋಜನೆಯಡಿ ೩ ಕೋಟಿ ಮನೆ ನಿರ್ಮಾಣದ ಪ್ರಸ್ತಾವವನ್ನು ಬಜೆಟ್ ನಲ್ಲಿ ಇದ್ದು ಇದರ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ ಎಂದು ಯಲುವಗುಳಿ ನಾಗರಾಜ್ ತಿಳಿಸಿದರು.
ನಂದಿ ಬೆಟ್ಟದ ತಿರುವು ರಸ್ತೆಯಲ್ಲಿ ಬೈಕ್ ಅಪಘಾತವಾಗಿದ್ದು, ಬೈಕ್ ನಲ್ಲಿದ್ದ ಇಬ್ಬರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ನಂದಿ ಬೆಟ್ಟದ…
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಜೂರು ಗ್ರಾಮದ ಸರ್ವೇ ನಂಬರ್ 33ರಲ್ಲಿ ಒಟ್ಟು 120…
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ…
ಹೊಸ ಹೋರಾಟಗಾರರು ಸೃಷ್ಟಿಯಾಗಬೇಕಿದೆ, ಹಳೆಯ ಹೋರಾಟಗಾರರು ಮರುಹುಟ್ಟು ಪಡೆಯಬೇಕಿದೆ, ಸಮಕಾಲೀನ ಹೋರಾಟಗಾರರು ಹೋರಾಟದ ಮಾರ್ಗಗಳನ್ನು ಪುನರ್ ರೂಪಿಸಿಕೊಳ್ಳಬೇಕಿದೆ...... 1995/2000 ಇಸವಿಯ…
ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದ ಮೂಲಕ ಹಾದುಹೋಗುವ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಸ್ಥನ ರಸ್ತೆಗೆ ಅಡ್ಡಲಾಗಿ ರೈಲು ಹಳಿ ಹಾದುಹೋಗಿದ್ದು,…
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗು ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ…